ಆ್ಯಂಕರ್ ಅನುಶ್ರೀ ಮದುವೆಗೆ ದಿನಾಂಕ ಫಿಕ್ಸ್?ಈಗ ಅಧಿಕೃತವಾಗುತ್ತಿದೆ.

ಪ್ರಸಿದ್ಧ ಕನ್ನಡ ಆ್ಯಂಕರ್ ಅನುಶ್ರೀ ಅವರ ಮದುವೆಯ ಸುದ್ದಿ ಈಗ ಅಧಿಕೃತವಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಅವರ ವಿವಾಹ ನಡೆಯಲಿದೆ ಎಂದು ವರದಿಗಳಿವೆ. ಬೆಂಗಳೂರಿನ ಉದ್ಯಮಿಯೊಂದಿಗೆ ಅವರ ವಿವಾಹ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಅನುಶ್ರೀ ಅವರು ಇನ್ನೂ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ.

ಆ್ಯಂಕರ್ ಅನುಶ್ರೀ ಅವರು ಯಾವಾಗ ಮದುವೆ ಆಗುತ್ತಾರೆ ಎನ್ನುವ ಪ್ರಶ್ನೆ ಅನೇಕರನ್ನು ಕಾಡುತ್ತಿತ್ತು. ಪ್ರತಿ ವೇದಿಕೆ ಮೇಲೆ ಅವರ ಎದುರು ಪ್ರಶ್ನೆಗಳನ್ನು ಇಡಲಾಗುತ್ತಿತ್ತು. ಈ ವರ್ಷ ವಿವಾಹ ಆಗಿಯೇ ಆಗುತ್ತೇನೆ ಎಂದು ಅವರು ಭರವಸೆ ನೀಡಿದ್ದರು. ಈಗ ಅದು ನಿಜ ಆಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಅನುಶ್ರೀ ಅವರ ವಿವಾಹ ಅದ್ದೂರಿಯಾಗಿ ನಡೆಯಲಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಅನುಶ್ರೀ ಅವರು ಆ್ಯಂಕರ್ ಆಗಿ, ನಟಿಯಾಗಿ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ನಟನೆಗಿಂತ ಆ್ಯಂಕರ್ ಆಗಿಯೇ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ವೇದಿಕೆ ಯಾವುದೇ ಇದ್ದರೂ ಅಂಜದೆ, ಅಳುಕದೆ ಆ್ಯಂಕರಿಂಗ್ ಮಾಡುವ ಸಾಮರ್ಥ್ಯ ಅವರಿಗೆ ಇದೆ. ಇನ್ನು ಸ್ಕ್ರಿಪ್ಟ್ ಅನ್ನೋದು ಅವರಿಗೆ ಬೇಕಾಗಿಯೇ ಇಲ್ಲ. ಅಷ್ಟು ಸುಂದರವಾಗಿ, ಮನರಂಜಾತ್ಮಕವಾಗಿ ಅವರು ಆ್ಯಂಕರಿಂಗ್ ಮಾಡ ಬಲ್ಲರು. ಈ ಕಾರಣದಿಂದಲೇ ಆ್ಯಂಕರಿಂಗ್ ಲೋಕದಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಜೀ ಕನ್ನಡದ ಬಹುತೇಕ ಶೋಗಳಿಗೆ ಅವರದ್ದೇ ನಿರೂಪಣೆ ಇರುತ್ತದೆ. ಈಗ ಅವರು ಮದುವೆ ಆಗುತ್ತಿದ್ದಾರೆ ಎಂಬ ವಿಚಾರ ಹೊರ ಬಿದ್ದಿದೆ.

ಆಗಸ್ಟ್ 28ಕ್ಕೆ ಅನುಶ್ರೀ ಮದುವೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಬೆಂಗಳೂರು ಮೂಲದ ಉದ್ಯಮಿ ರೋಷನ್ ಜೊತೆ ಅವರು ವಿವಾಹ ಆಗುತ್ತಿದ್ದಾರೆ. ಹಾಗಾದರೆ ಇದು ಲವ್ ಮ್ಯಾರೇಜಾ? ಅಲ್ಲಾ ಪಕ್ಕಾ ಅರೇಂಜ್ ಮ್ಯಾರೇಜ್ ಎನ್ನುತ್ತಿವೆ ಮೂಲಗಳು. ಕುಟುಂಬದವರು ನೋಡಿದ ಹುಡುಗನ ಜೊತೆ ಅನುಶ್ರೀ ವಿವಾಹ ಆಗುತ್ತಿದ್ದಾರಂತೆ. ಬೆಂಗಳೂರಿನಲ್ಲೇ ಈ ವಿವಾಹ ಗ್ರಾಂಡ್ಆಗಿ ನೆರವೇರಲಿದೆ ಎನ್ನಲಾಗುತ್ತಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು