ಇಂಟರ್ನೆಟ್ ಇಲ್ಲದೇ ಹಣ ಪಾವತಿಸುವುದು ಹೇಗೆ? ಇಲ್ಲಿದೆ ವಿವರ!

ಯುಪಿಐ ಮೂಲಕ ಹಣ ಪಾವತಿಸಲು ಮೊಬೈಲ್ನಲ್ಲಿ ಇಂಟರ್ನೆಟ್ ಅಗತ್ಯ. ಆದರೆ, ಯುಎಸ್ಎಸ್ಡಿ ಕೋಡ್ ಮುಖಾಂತರ ಇಂಟರ್ನೆಟ್ ಇಲ್ಲದೇ ಹಣ ಪಾವತಿ ಸಾಧ್ಯ. ನೊಂದಾಯಿತ ನಂಬರ್ನಿಂದ ಯುಎಸ್ಎಸ್ಡಿ ಕೋಡ್ ಅನ್ನು ಡಯಲ್ ಮಾಡಿ ಈ ಸೌಲಭ್ಯ ಬಳಸಬಹುದು.
ಇವತ್ತು ಪೇಟಿಎಂ, ಫೋನ್ಪೇ, ಗೂಗಲ್ ಪೇ ಇತ್ಯಾದಿ ಯುಪಿಐ ಪ್ಲಾಟ್ಫಾರ್ಮ್ಗಳು ಜನರ ದೈನಂದಿನ ಹಣಕಾಸು ವಹಿವಾಟುಗಳಿಗೆ ಅತ್ಯಗತ್ಯ ಸಾಧನಗಳಾಗಿವೆ. ಅಂಗಡಿ ಮುಂಗಟ್ಟುಗಳಲ್ಲಿ ದಿನಸಿ ವಸ್ತುಗಳನ್ನು ಕೊಳ್ಳುವುದರಿಂದ ಹಿಡಿದು ಆಸ್ಪತ್ರೆಯಲ್ಲಿ ಪೇಮೆಂಟ್ವರೆಗೆ ಪ್ರತಿಯೊಂದಕ್ಕೂ ಯುಪಿಐ ಬಳಕೆ ಹೆಚ್ಚಾಗಿದೆ. ಈ ಯುಪಿಐ ಬಳಸಬೇಕೆಂದರೆ ಮೊಬೈಲ್ನಲ್ಲಿ ಇಂಟರ್ನೆಟ್ ಕನೆಕ್ಟಿವಿಟಿ ಇರಬೇಕು. ಬೇರೆ ಬೇರೆ ಕಾರಣಗಳಿಗೆ ಇಂಟರ್ನೆಟ್ ಸಂಪರ್ಕ ಸಾಧ್ಯವಾಗದೇ ಹೋಗಬಹುದು ಅಥವಾ ಕೈಕೊಡಬಹುದು. ಅಂತಹ ಸಂದರ್ಭದಲ್ಲಿ ಆನ್ಲೈನ್ನಲ್ಲಿ ಹಣ ಪಾವತಿ ಹೇಗೆ?
ಎನ್ಪಿಸಿಐ ಈ ಸಮಸ್ಯೆಗೆ ಪರಿಹಾರ ಹುಡುಕಿದೆ. ಇಂಟರ್ನೆಟ್ ಅಗತ್ಯ ಇಲ್ಲದೇ ಯುಪಿಐ ಪಾವತಿ ಸಾಧ್ಯವಾಗುವಂತಹ ಹೊಸ ಫೀಚರ್ ಅನ್ನು ರೂಪಿಸಿದೆ. ಅದು ಯುಎಸ್ಎಸ್ಡಿ ಮುಖಾಂತರ ಹಣ ಪಾವತಿಸುವ ಹೊಸ ಕ್ರಮ.
ಯುಪಿಐ ಬಳಕೆದಾರರು ತಮ್ಮ ನೊಂದಾಯಿತ ಮೊಬೈಲ್ ನಂಬರ್ನಿಂದ ಅಧಿಕೃತ ಯುಎಸ್ಎಸ್ಡಿ ಕೋಡ್ ಆದ *99# ಅನ್ನು ಡಯಲ್ ಮಾಡಿದಾಗ ವಿವಿಧ ಬ್ಯಾಂಕಿಂಗ್ ಸೇವೆಗಳಿಗೆ ಅವಕಾಶ ಸಿಗುತ್ತದೆ. ಹಣ ರವಾನಿಸುವುದು, ಅಕೌಂಟ್ ಬ್ಯಾಲನ್ಸ್ ಪರಿಶೀಲಿಸುವುದು, ಯುಪಿಐ ಪಿನ್ ಬದಲಿಸುವುದು ಇತ್ಯಾದಿ ಸೌಲಭ್ಯಗಳನ್ನು ಈ ಸಂದರ್ಭದಲ್ಲಿ ಪಡೆಯಬಹುದು.
ಯುಎಸ್ಎಸ್ಡಿ ಕೋಡ್ ಮೂಲಕ ಹಣ ಪಾವತಿಸುವ ಕ್ರಮ ಹೇಗೆ?
• ಬ್ಯಾಂಕ್ನೊಂದಿಗೆ ನೊಂದಾಯಿತವಾಗಿರುವ ಮೊಬೈಲ್ ನಂಬರ್ನಿಂದ *99# ಅನ್ನು ಡಯಲ್ ಮಾಡಿ.
• ಇದು ಐವಿ ಕಾಲ್ ಆಗಿದ್ದು, ನಿಮಗೆ ಬೇಕಾದ ಭಾಷೆ ಆಯ್ಕೆ ಮಾಡಿಕೊಳ್ಳಿ.
• ಹಣ ರವಾನೆ, ಬಾಕಿ ಹಣ ಪರಿಶೀಲನೆ, ವಹಿವಾಟು ವಿವರ ವೀಕ್ಷಣೆ ಇತ್ಯಾದಿ ಸೌಲಭ್ಯಗಳಲ್ಲಿ ನಿಮಗೆ ಬೇಕಾದ್ದನ್ನು ಆಯ್ದುಕೊಳ್ಳಬಹುದು.
• ಹಣ ಕಳುಹಿಸಬೇಕೆಂದಿದ್ದರೆ ‘1’ ಅನ್ನು ಟೈಪ್ ಮಾಡಬಹುದು. ಬಳಿಕ ಸೆಂಡ್ ಅನ್ನು ಒತ್ತಿರಿ.
• ಆಗ ಮೊಬೈಲ್ ನಂಬರ್, ಯುಪಿಐ ಐಡಿ, ಮೊಬೈಲ್ನಲ್ಲಿ ಸೇವ್ ಆಗಿರುವ ಕಾಂಟ್ಯಾಕ್ಟ್ ಇತ್ಯಾದಿ ಹಣ ಕಳುಹಿಸುವ ವಿಧಾನಗಳ ಆಯ್ಕೆ ಇರುತ್ತದೆ.
ಯಾವುದಾದರೊಂದನ್ನು ಆಯ್ದುಕೊಂಡು, ಸೆಂಡ್ ಒತ್ತಿರಿ.
• ಮೊಬೈಲ್ ನಂಬರ್ ಅನ್ನು ನೀವು ಆಯ್ದುಕೊಂಡರೆ ಆಗ ನೀವು ಹಣ ಕಳುಹಿಸಬೇಕಾದ ವ್ಯಕ್ತಿಯ ಮೊಬೈಲ್ ನಂಬರ್ ಅನ್ನು ನಮೂದಿಸಿ, ಸೆಂಡ್ ಒತ್ತಿರಿ.
• ಯುಪಿಐ ಐಡಿ ಆಯ್ಕೆ ಮಾಡಿಕೊಂಡಿದ್ದರೆ ಆಗ ಆ ವ್ಯಕ್ತಿಯ ಯುಪಿಐ ಐಡಿಯನ್ನು ನಮೂದಿಸಬೇಕಾಗುತ್ತದೆ.
• ಈಗ ಎಷ್ಟು ಹಣ ಪಾವತಿಸಬೇಕು, ಆ ಮೊತ್ತವನ್ನು ನಮೂದಿಸಿ, ಸೆಂಡ್ ಒತ್ತಿರಿ.
• ಆ ಹಣ ಪಾವತಿ ಯಾಕೆಂದು ನೀವು ವಿವರ ಬರೆಯುವ ಅವಕಾಶ ಇರುತ್ತದೆ. ಇದು ಅನಗತ್ಯ ಎನಿಸಿದರೆ ನಿರ್ಲಕ್ಷಿಸಬಹುದು.
• ಈಗ ಕೊನೆಯ ಕ್ರಮವಾಗಿ ನೀವು ನಿಮ್ಮ ಯುಪಿಐ ಪಿನ್ ನಂಬರ್ ಅನ್ನು ಎಂಟ್ರ ಮಾಡಬೇಕು. ಆಗ ಹಣ ರವಾನೆ ಕಾರ್ಯ ಪೂರ್ಣಗೊಳ್ಳುವುದು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!