ಇಂದು ಮನೆಯಂಗಳಲ್ಲಿ ಆರ್‌ಸಿಬಿ ಗೆದ್ದರೆ ಮಹತ್ವದ ಬದಲಾವಣೆಯಾಗುವುದು ಖಚಿತ.

ಐಪಿಎಲ್ ಸೀಸನ್ 18ರ 42ನೇ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಈಗಾಗಲೇ ಐದು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಆರ್ಸಿಬಿ ತಂಡವು ಆರ್ ಆರ್ ವಿರುದ್ದ ಗೆದ್ದರೆ ಒಟ್ಟು 12 ಅಂಕಗಳನ್ನು ಪಡೆದುಕೊಳ್ಳಲಿದೆ. ಈ ಮೂಲಕ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆಯನ್ನು ನಾವು ಕಾಣಬಹುದಾಗಿದೆ.

ಸತತ ಮೂರು ಪಂದ್ಯಗಳನ್ನು ಮನೆ ಅಂಗಳದಲ್ಲಿ ಸೋತಿರುವ ಆರ್‌ಸಿಬಿ ಪಡೆಯು ಈ ಪಂದ್ಯದಲ್ಲಿ ಆರ್ ಆರ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಒಟ್ಟು 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆಯಬಹುದು. ಅಲ್ಲದೇ ಪ್ಲೇ ಆಫ್ ಆದಿಯನ್ನು ಮತ್ತಷ್ಟು ಸುಲಭಗೊಳಿಸಬಹುದಾಗಿದೆ. ಹೀಗಾಗಿ ಇಂದಿನ ಪಂದ್ಯವು ಆರ್‌ಸಿಬಿ ಪಾಲಿಗೆ ತುಂಬಾ ಮಹತ್ವದ್ದಾಗಿದೆ.

ಇನ್ನು ಅಂಕ ಪಟ್ಟಿಯನ್ನು ನೋಡುವುದಾದರೆ ಸದ್ಯ ಐಪಿಎಲ್ 18 ನೇ ಸೀಸನ್ ನಲ್ಲಿ ಆರ್ ಸಿ ಬಿ ತಂಡವು ಆಡಿರುವ 8 ಪಂದ್ಯಗಳಲ್ಲಿ ಐದು ಜಯಗಳನ್ನು ಗಳಿಸಿ 0.472 ನೆಟ್ ರನ್ ರೇಟ್ ನೊಂದಿಗೆ ನಾಲ್ಕನೇ ಪಟ್ಟವನ್ನು ಅಂದರೆ ಸ್ಥಾನವನ್ನು ಅಲಂಕರಿಸಿದೆ. ಹೀಗಾಗಿ ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದರೆ ಉತ್ತಮ ರನ್ ರೇಟ್ ನೊಂದಿಗೆ ಅಂಕಪಟ್ಟಿಯಲ್ಲಿ ಮತ್ತೆ ಮೇಲೇರಬಹುದು ಅದು ಸಹ ದ್ವಿತೀಯ ಸ್ಥಾನದಲ್ಲಿ ಕೂರಬಹುದು.

ಇನ್ನು ಅಂಕಿ ಅಂಶಗಳ ಲೆಕ್ಕಚಾರಕ್ಕೆ ಬಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ ಒಟ್ಟು 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ ಈ ವೇಳೆ ಆರ್‌ಸಿಬಿ ತಂಡ 16 ಬಾರಿ ಗೆಲುವನ್ನು ದಾಖಲಿಸಿದರೆ, ರಾಜಸ್ಥಾನ್ ರಾಯಲ್ಸ್ ತಂಡ 14 ಬಾರಿ ಜಯವನ್ನು ಸಾಧಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ. ಹೀಗಾಗಿ ಮೇಲುಗೈ ಸಾಧಿಸಿರುವ ಆರ್‌ಸಿಬಿ ತಂಡವು ಮತ್ತೊಮ್ಮೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಲಿ ಎಂಬುದು ಎಲ್ಲಾ ಆರ್‌ಸಿಬಿ ಅಭಿಮಾನಿಗಳ ಆಶಯವಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!