ಇಂದು ಮನೆಯಂಗಳಲ್ಲಿ ಆರ್‌ಸಿಬಿ ಗೆದ್ದರೆ ಮಹತ್ವದ ಬದಲಾವಣೆಯಾಗುವುದು ಖಚಿತ.

ಐಪಿಎಲ್ ಸೀಸನ್ 18ರ 42ನೇ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಈಗಾಗಲೇ ಐದು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಆರ್ಸಿಬಿ ತಂಡವು ಆರ್ ಆರ್ ವಿರುದ್ದ ಗೆದ್ದರೆ ಒಟ್ಟು 12 ಅಂಕಗಳನ್ನು ಪಡೆದುಕೊಳ್ಳಲಿದೆ. ಈ ಮೂಲಕ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆಯನ್ನು ನಾವು ಕಾಣಬಹುದಾಗಿದೆ.

ಸತತ ಮೂರು ಪಂದ್ಯಗಳನ್ನು ಮನೆ ಅಂಗಳದಲ್ಲಿ ಸೋತಿರುವ ಆರ್‌ಸಿಬಿ ಪಡೆಯು ಈ ಪಂದ್ಯದಲ್ಲಿ ಆರ್ ಆರ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಒಟ್ಟು 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆಯಬಹುದು. ಅಲ್ಲದೇ ಪ್ಲೇ ಆಫ್ ಆದಿಯನ್ನು ಮತ್ತಷ್ಟು ಸುಲಭಗೊಳಿಸಬಹುದಾಗಿದೆ. ಹೀಗಾಗಿ ಇಂದಿನ ಪಂದ್ಯವು ಆರ್‌ಸಿಬಿ ಪಾಲಿಗೆ ತುಂಬಾ ಮಹತ್ವದ್ದಾಗಿದೆ.

ಇನ್ನು ಅಂಕ ಪಟ್ಟಿಯನ್ನು ನೋಡುವುದಾದರೆ ಸದ್ಯ ಐಪಿಎಲ್ 18 ನೇ ಸೀಸನ್ ನಲ್ಲಿ ಆರ್ ಸಿ ಬಿ ತಂಡವು ಆಡಿರುವ 8 ಪಂದ್ಯಗಳಲ್ಲಿ ಐದು ಜಯಗಳನ್ನು ಗಳಿಸಿ 0.472 ನೆಟ್ ರನ್ ರೇಟ್ ನೊಂದಿಗೆ ನಾಲ್ಕನೇ ಪಟ್ಟವನ್ನು ಅಂದರೆ ಸ್ಥಾನವನ್ನು ಅಲಂಕರಿಸಿದೆ. ಹೀಗಾಗಿ ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದರೆ ಉತ್ತಮ ರನ್ ರೇಟ್ ನೊಂದಿಗೆ ಅಂಕಪಟ್ಟಿಯಲ್ಲಿ ಮತ್ತೆ ಮೇಲೇರಬಹುದು ಅದು ಸಹ ದ್ವಿತೀಯ ಸ್ಥಾನದಲ್ಲಿ ಕೂರಬಹುದು.

ಇನ್ನು ಅಂಕಿ ಅಂಶಗಳ ಲೆಕ್ಕಚಾರಕ್ಕೆ ಬಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ ಒಟ್ಟು 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ ಈ ವೇಳೆ ಆರ್‌ಸಿಬಿ ತಂಡ 16 ಬಾರಿ ಗೆಲುವನ್ನು ದಾಖಲಿಸಿದರೆ, ರಾಜಸ್ಥಾನ್ ರಾಯಲ್ಸ್ ತಂಡ 14 ಬಾರಿ ಜಯವನ್ನು ಸಾಧಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ. ಹೀಗಾಗಿ ಮೇಲುಗೈ ಸಾಧಿಸಿರುವ ಆರ್‌ಸಿಬಿ ತಂಡವು ಮತ್ತೊಮ್ಮೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಲಿ ಎಂಬುದು ಎಲ್ಲಾ ಆರ್‌ಸಿಬಿ ಅಭಿಮಾನಿಗಳ ಆಶಯವಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!