ಇಂದು ಮನೆಯಂಗಳಲ್ಲಿ ಆರ್‌ಸಿಬಿ ಗೆದ್ದರೆ ಮಹತ್ವದ ಬದಲಾವಣೆಯಾಗುವುದು ಖಚಿತ.

ಐಪಿಎಲ್ ಸೀಸನ್ 18ರ 42ನೇ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಈಗಾಗಲೇ ಐದು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಆರ್ಸಿಬಿ ತಂಡವು ಆರ್ ಆರ್ ವಿರುದ್ದ ಗೆದ್ದರೆ ಒಟ್ಟು 12 ಅಂಕಗಳನ್ನು ಪಡೆದುಕೊಳ್ಳಲಿದೆ. ಈ ಮೂಲಕ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆಯನ್ನು ನಾವು ಕಾಣಬಹುದಾಗಿದೆ.

ಸತತ ಮೂರು ಪಂದ್ಯಗಳನ್ನು ಮನೆ ಅಂಗಳದಲ್ಲಿ ಸೋತಿರುವ ಆರ್‌ಸಿಬಿ ಪಡೆಯು ಈ ಪಂದ್ಯದಲ್ಲಿ ಆರ್ ಆರ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಒಟ್ಟು 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆಯಬಹುದು. ಅಲ್ಲದೇ ಪ್ಲೇ ಆಫ್ ಆದಿಯನ್ನು ಮತ್ತಷ್ಟು ಸುಲಭಗೊಳಿಸಬಹುದಾಗಿದೆ. ಹೀಗಾಗಿ ಇಂದಿನ ಪಂದ್ಯವು ಆರ್‌ಸಿಬಿ ಪಾಲಿಗೆ ತುಂಬಾ ಮಹತ್ವದ್ದಾಗಿದೆ.

ಇನ್ನು ಅಂಕ ಪಟ್ಟಿಯನ್ನು ನೋಡುವುದಾದರೆ ಸದ್ಯ ಐಪಿಎಲ್ 18 ನೇ ಸೀಸನ್ ನಲ್ಲಿ ಆರ್ ಸಿ ಬಿ ತಂಡವು ಆಡಿರುವ 8 ಪಂದ್ಯಗಳಲ್ಲಿ ಐದು ಜಯಗಳನ್ನು ಗಳಿಸಿ 0.472 ನೆಟ್ ರನ್ ರೇಟ್ ನೊಂದಿಗೆ ನಾಲ್ಕನೇ ಪಟ್ಟವನ್ನು ಅಂದರೆ ಸ್ಥಾನವನ್ನು ಅಲಂಕರಿಸಿದೆ. ಹೀಗಾಗಿ ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದರೆ ಉತ್ತಮ ರನ್ ರೇಟ್ ನೊಂದಿಗೆ ಅಂಕಪಟ್ಟಿಯಲ್ಲಿ ಮತ್ತೆ ಮೇಲೇರಬಹುದು ಅದು ಸಹ ದ್ವಿತೀಯ ಸ್ಥಾನದಲ್ಲಿ ಕೂರಬಹುದು.

ಇನ್ನು ಅಂಕಿ ಅಂಶಗಳ ಲೆಕ್ಕಚಾರಕ್ಕೆ ಬಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ ಒಟ್ಟು 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ ಈ ವೇಳೆ ಆರ್‌ಸಿಬಿ ತಂಡ 16 ಬಾರಿ ಗೆಲುವನ್ನು ದಾಖಲಿಸಿದರೆ, ರಾಜಸ್ಥಾನ್ ರಾಯಲ್ಸ್ ತಂಡ 14 ಬಾರಿ ಜಯವನ್ನು ಸಾಧಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ. ಹೀಗಾಗಿ ಮೇಲುಗೈ ಸಾಧಿಸಿರುವ ಆರ್‌ಸಿಬಿ ತಂಡವು ಮತ್ತೊಮ್ಮೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಲಿ ಎಂಬುದು ಎಲ್ಲಾ ಆರ್‌ಸಿಬಿ ಅಭಿಮಾನಿಗಳ ಆಶಯವಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!