ಇದೀಗ ಹೋಳಿಗೆ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ.

ಆಹಾರ ಇಲಾಖೆಯ ತನಿಖೆಯಿಂದ ಈ ವಿಷಯ ಹೊರ ಬಿದ್ದಿದ್ದು, ಹೋಳಿಗೆ ಪ್ರಿಯರು ಹೆಚ್ಚಿನ ಗಮನ ವಹಿಸಬೇಕಾಗಿದೆ. ಅಂಗಡಿಯಲ್ಲಿ ತಯಾರಾಗೋ ಬಿಸಿ ಬಿಸಿ ಹೋಳಿಗೆ ಕೂಡ ಗ್ರಾಹಕರಿಗೆ ಗಂಡಾಂತರ ತಂದೊಡ್ಡಿದೆ. ಆಹಾರ ಇಲಾಖೆಯಿಂದ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಸಮರ ಸಾರಿದೆ. ಇಡ್ಲಿ, ಗೋಬಿ, ಕಲ್ಲಂಗಡಿ ಸೇರಿದಂತೆ ಅನೇಕ ಆಹಾರಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದು, ಕೆಲವೊಂದು ಆಹಾರ ಪದಾರ್ಥಗಳಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ.

ಇದರ ಬೆನ್ನಲ್ಲೇ ಇದೀಗ ರೆಡಿಮೆಡ್ ಹೋಳಿಗೆ ಮೇಲೂ ಸಹ ಆಹಾರ ಇಲಾಖೆ ಹದ್ದಿನ ಕಣ್ಣಿಟ್ಟು, ರೆಡಿಮೆಡ್ ಹೋಳಿಗೆ ತಯಾರು ಮಾಡುವವರಿಗೆ ಬಿಸಿ ಮುಟ್ಟಿಸಿದೆ. ರಾಜ್ಯದಾದ್ಯಂತ ಹೋಳಿಗೆ ಅಂಗಡಿಗಳ ಮೇಲೆ ಆಹಾರ ಇಲಾಖೆ ದಾಳಿ ಮಾಡಿದ್ದು ,ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮಾಡಿರೋ ಅಂಗಡಿಗಳಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಬಿಸಿ ಬಿಸಿ ಹೋಳಿಗೆಯನ್ನು ತಯಾರಿಸಿ ಬಳಿಕ ಅದನ್ನು ಪ್ಲಾಸ್ಟಿಕ್ ಕವರ್ ನಿಂದ ಮುಚ್ಚಲಾಗುತ್ತೆ.
ಹೀಗೆ ಮಾಡುವುದರಿಂದ ಪ್ಲಾಸ್ಟಿಕ್ಗೆ ಶಾಖದಿಂದ ಕೆಮಿಕಲ್ ಹೊರಸೂಸಿ ಕ್ಯಾನ್ಸರ್ಗೆ ಕಾರಣ ಆಗಬಹುದು. ಹೀಗಾಗಿ ಹೋಳಿಗೆಗೆ ಪ್ಲಾಸ್ಟಿಕ್ ಕವರ್ ಬಳಸಿದ್ರೆ ವಿಷಕಾರಿ ಅಂಶ ಹೋಳಿಗೆ ಸೇರೋ ಸಾಧ್ಯತೆ ಇದೆ ಎಂಬ ತೀಕ್ಷ್ಣವಾದ ವಿಚಾರವನ್ನು ತಿಳಿಸಿದೆ. ಇದರಿಂದ ಹೋಳಿಗೆ ತಯಾರಿಸುವಾಗ ಪ್ಲಾಸ್ಟಿಕ್ ಬಳಸಬಾರದು ಎಂದು ಸೂಚನೆ ನೀಡಿದ್ದಾರೆ.
ಇದರಿಂದ ಹೋಳಿಗೆ ಪ್ರಿಯರಿಗೆ ಸ್ವಲ್ಪ ಕಷ್ಟವಾದರೂ, ಅಂಗಡಿಗಳಲ್ಲಿ ಸಿಗುವ ಹೋಳಿಗೆಯನ್ನು ನಿಯಂತ್ರಿಸಬೇಕಾಗುತ್ತದೆ. ಅಥವಾ ಶುದ್ಧ ಹಾಗೂ ಒಳ್ಳೆಯ ರೀತಿಯಲ್ಲಿ ತಯಾರಿಸಿದ ಹೋಳಿಗೆಯನ್ನು ಸವಿಯಬೇಕಾಗುತ್ತದೆ. ಇಲ್ಲವಾದರೆ ಬೇಡದ ವಸ್ತುಗಳನ್ನು ಸೇರಿಸಿ ಆರೋಗ್ಯವನ್ನು ಕೆಡಿಸಿಕೊಂಡು ಕ್ಯಾನ್ಸರ್ ಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ಆಹಾರ ಇಲಾಖೆಯ ವರದಿಯನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!