ಈ ಮನೆಯಲ್ಲಿ ಹಾವುಗಳ ರಾಶಿ, ಮೈ ಜುಮ್ ಎನಿಸುವುದು ಖಚಿತ….

ಹಾವುಗಳ ಹೆಸರು ಕೇಳಿದ ಕೂಡಲೇ ಭಯ ಪಡುತ್ತೇವೆ. ಅಪ್ಪಿ ತಪ್ಪಿ ಈ ಹಾವು ಮನೆಯೊಳಗೆ ಬಂದು ಬಿಟ್ಟರೆ, ಅದು ಹೊರಗೆ ಹೋಗುವ ತನಕ ನಾವು ಮನೆಯೊಳಗೆ ಕಾಲಿಡಲ್ಲ. ಆದರೆ ಇಲ್ಲೊಂದು ಮನೆಯ ನೆಲಮಾಳಿಗೆಯ ಮೇಲೆ ಹತ್ತಕ್ಕೂ ಹೆಚ್ಚು ಹಾವುಗಳು ಕಾಣಿಸಿಕೊಂಡಿದ್ದು, ಈ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ದೃಶ್ಯ ನೋಡಿದ ಸೋಶಿಯಲ್ ಮೀಡಿಯಾ ಬಳಕೆದಾರರು ಭಯಭೀತರಾಗಿದ್ದಾರೆ.

ಮಳೆಗಾಲದಲ್ಲಿ ಹಾವುಗಳು ಮನೆಯ ಸುತ್ತಮುತ್ತ ಕಾಣಿಸಿಕೊಳ್ಳುತ್ತವೆ. ಹಲವು ಬಾರಿ ಮನೆಯ ಮೂಲೆಯಲ್ಲಿ ಅಥವಾ ಬೆಚ್ಚಗೆಗಿರುವ ಸ್ಥಳಗಳಲ್ಲಿ ಅವಿತು ಕುಳಿತುಕೊಳ್ಳುವುದನ್ನು ನೀವು ನೋಡಿರಬಹುದು. ಸಾಮಾನ್ಯವಾಗಿ ಒಂದು ಹಾವು ಕಣ್ಣಿಗೆ ಬಿದ್ದ ಕೂಡಲೇ ಎದೆ ಹಿಡಿದು ಓಡಿ ಹೋಗುವವರೇ ಹೆಚ್ಚು. ಆದರೆ ಇದೀಗ ಮನೆಯ ನೆಲ ಮಾಳಿಗೆಯ ಗೂಡಿನಂತಹ ರಚನೆಯಲ್ಲಿ ಹತ್ತಕ್ಕೂ ಹೆಚ್ಚು ಹಾವುಗಳು ಕಂಡು ಬಂದಿದೆ. ಇದಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ವೈರಲ್ ಆಗಿದ್ದು, ಈ ದೃಶ್ಯವು ಎಲ್ಲರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಈ ಘಟನೆಯೂ ಉತ್ತರ ಪ್ರದೇಶದ ಮಹಾರಾಜ್‌ಗಂಜ್ನ ಹಾರ್ದಿದಾಲಿ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ.

ಸ್ಥಳೀಯ ಸುದ್ದಿ ಸಂಸ್ಥೆ ಭಾರತ ಸಮಾಚಾರ ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ನೆಲಮಾಳಿಗೆಯ ಗೂಡಿನಂತಹ ರಚನೆಯಲ್ಲಿ ಹತ್ತಕ್ಕೂ ಹೆಚ್ಚು ಹಾವುಗಳನ್ನು ಕಾಣಬಹುದು. ಹಾವುಗಳು ಗಿಜಿಗುಟ್ಟುತ್ತಾ ನಿಧಾನವಾಗಿ ಚಲಿಸುತ್ತಿದೆ. ಈ ದೃಶ್ಯವು ಒಂದು ಕ್ಷಣ ಮೈ ಜುಮ್ ಎನ್ನುವಂತೆ ಮಾಡುತ್ತದೆ. ಮನೆಯ ನೆಲಮಾಳಿಗೆಯ ಮೇಲೆ ಹಾವುಗಳ ರಾಶಿಯನ್ನು ಕಂಡ ಗ್ರಾಮಸ್ಥರು ತಕ್ಷಣವೇ ಪೊಲೀಸರು ಹಾಗೂ ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು