ಉಡುಪಿ: ಯುವ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ಪ್ರೀತಂ ಶೆಟ್ಟಿ (26) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾಟಕ್ಕೆ ತೆರಳಿದ್ದರು. ಶುಕ್ರವಾರ ಕಬಡಿ ಆಡಿದ ಕೆಲವೇ ಕ್ಷಣಗಳ ಬಳಿಕ ಪ್ರೀತಂ ಅವರು ಎದೆ ನೋವಿನಿಂದ ಕುಸಿದು ಬಿದ್ದಿದ್ದರು. ತಕ್ಷಣ ತಂಡದ ಸಹ ಆಟಗಾರರು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟೊತ್ತಿಗಾಗಲೇ ಪ್ರೀತಂ ಕೊನೆಯುಸಿರೆಳೆದಿದ್ದಾರೆ.
ಪ್ರೀತಂ ಅವರು ಇನ್ನು ಕೆಲವೇ ದಿನಗಳಲ್ಲಿ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಬೇಕೆಂದು ಎಲ್ಲಾ ತಯಾರಿ ನಡೆಸಿದ್ದರು. ಮೃತರು ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.
ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ
ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…






