ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

ಬೆಂಗಳೂರು : ಸೆಂಟ್ರಲ್ ಜೈಲ್ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ರಾಜಾತಿಥ್ಯ ಕೇಸ್ ಬಳಿಕ ಜೈಲ್ನಲ್ಲಿ ಸಾಕಷ್ಟು ಮೊಬೈಲ್ ಪತ್ತೆ ಆಗಿದ್ದವು. ಸಿಸಿಬಿ ಅಧಿಕಾರಿಗಳು ರೇಡ್ ಮಾಡಿ, ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದರೂ ಮೊಬೈಲ್ ಬಳಕೆ ನಿಯಂತ್ರಣಕ್ಕೆ ಬಂದಿರಲಿಲ್ಲ. ಇದೀಗ ಪರಪ್ಪನ ಅಗ್ರಹಾರದಲ್ಲಿ ಮತ್ತೆ ಮೊಬೈಲ್ ಬಳಕೆ ಮಾಡಲಾಗುತ್ತಿದ್ದು, ಆ ಮೂಲಕ ಆರೋಪಿಗಳು ಜೈಲಿನಿಂದಲೇ ಹಣಕ್ಕಾಗಿ ಧಮ್ಕಿ ಮತ್ತು ಡ್ರಗ್ ಡೀಲಿಂಗ್ ಮಾಡುತ್ತಿದ್ದಾರೆ.

ಸೆಂಟ್ರಲ್ ಜೈಲ್ನಲ್ಲಿ ಇದೀಗ ಮತ್ತೆ ಮೊಬೈಲ್ ಬಳಕೆಯಿಂದಾಗಿ ರೌಡಿಗಳು ಮತ್ತು ಡ್ರಗ್ಸ್ ಡೀಲರ್ಗಳ ಆಟಾಟೋಪ ಮುಂದುವರಿದಿದೆ. ಆರೋಪಿಗಳು, ಶಿಕ್ಷೆಗೆ ಒಳಪಟ್ಟ ಖೈದಿಗಳಿಂದ ಮೊಬೈಲ್ ಬಳಕೆ ನಿತ್ಯ ನಿರಂತರವಾಗಿದೆ.
ಹೊರಗಡೆಗಿಂತ ಪರಪ್ಪನ ಅಗ್ರಹಾರ ಜೈಲೇ ಕ್ರಿಮಿನಲ್ಗಳಿಗೆ ಸೇಫ್ ಆಯ್ತಾ ಎಂಬ ಅನುಮಾನಗಳು ಶುರುವಾಗಿವೆ. ಜೈಲಿನ ಖೈದಿಗಳು ರಾಜರೋಷವಾಗಿ ಮೊಬೈಲ್ ಬಳಸುತ್ತಿದ್ದಾರೆ. ಇದಕ್ಕೆ ಸಾಲು ಸಾಲು ಸಾಕ್ಷಿಗಳು ಸಿಕ್ಕಿವೆ. ಜೈಲಿನಲ್ಲಿ ಇನ್ನೂ 250-300 ಮೊಬೈಲ್ಗಳು ಇರುವ ಮಾಹಿತಿಯಿದೆ.
ಜೈಲಿನಲ್ಲೇ ಕೂತು ಸೈಕೋ ವಿಶ್ವನಾಥ್ ಎಂಬ ರೌಡಿಯಿಂದ ವ್ಯಾಪಾರಿಯೊಬ್ಬರಿಗೆ ಫೋನ್ ಮಾಡಿ ಹಣಕ್ಕಾಗಿ ಧಮ್ಕಿ ಹಾಕಲಾಗಿದೆ. ಪ್ರತಿ ವಾರ 40 ಸಾವಿರ ರೂ. ಹಣ ಹಫ್ತಾ ಕೊಡಬೇಕು ಇಲ್ಲ ಕೊಲೆ ಮಾಡುವುದಾಗಿ ಬೆದರಿಕೆ ನೀಡಲಾಗಿದೆ. ಈ ಸಂಬಂಧ ಸೈಕೋ ವಿಶ್ವನಾಥ್ ವಿರುದ್ಧ ಸಿಸಿಬಿಗೆ ವ್ಯಾಪಾರಿ ದೂರು ನೀಡಿದ್ದಾರೆ. ಸದ್ಯ ಬಾಡಿ ವಾರೆಂಟ್ ಮೇಲೆ ಸೈಕೋ ವಿಶ್ವನಾಥ್ ವಶಕ್ಕೆ ಪಡೆದು ಸಿಸಿಬಿ ಪೊಲೀಸರಿಂದ ವಿಚಾರಣೆ ಮಾಡಲಾಗಿದೆ.
ಪರಪ್ಪನ ಜೈಲಿನಲ್ಲೇ ಕೂತು ಬೆಂಗಳೂರಿನಲ್ಲಿ ಡ್ರಗ್ಸ್ ಪೆಡ್ಲಿಂಗ್ ಮಾಡಲಾಗುತ್ತಿದೆ. ಡ್ರಗ್ಸ್ ಕೇಸ್ನಲ್ಲಿ ಜೈಲಿಗೆ ಹೋಗಿರುವ ಆರೋಪಿಯಿಂದಲೇ ಡ್ರಗ್ಸ್ ಡೀಲಿಂಗ್ ಮಾಡಲಾಗುತ್ತಿದೆ. ಇತ್ತೀಚೆಗೆ ಸಿಸಿಬಿ ಪೊಲೀಸರು ಡ್ರಗ್ಸ್ ಅಡ್ಡೆ ಮೇಲೆ ದಾಳಿ ಮಾಡಿದ್ದರು. ಇಬ್ಬರನ್ನ ಬಂಧಿಸಿ ವಿಚಾರಣೆ ಮಾಡಿದಾಗ ಮತ್ತೊಬ್ಬನ ಬಗ್ಗೆ ಮಾಹಿತಿ ನೀಡಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕುಳಿತ ಆ ಆರೋಪಿ ಡ್ರಗ್ಸ್ ಮಾರಾಟ ಮಾಡಿಸುತ್ತಿದ್ದ. ಆತನ ಸೂಚನೆಯಂತೆ ಡ್ರಗ್ಸ್ ಕಲೆಕ್ಟ್ ಮಾಡಿ ಪೋರ್ಟರ್ ಮೂಲಕ ಮಾರಾಟ ಮಾಡುತ್ತಿದ್ದರು. ಸದ್ಯ ಈತನನ್ನೂ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಲು ಸಿಸಿಬಿ ಸಿದ್ದತೆ ನಡೆಸಿದೆ.
ಜೈಲಿನಲ್ಲೇ ಕೂತು ಬಾಲಕೃಷ್ಣ ಎಂಬಾತನಿಂದ ನಗರದಲ್ಲಿ ಗಾಂಜಾ ಡೀಲಿಂಗ್ ಮಾಡಲಾಗಿದೆ. ಅಶೋಕ ನಗರ ಪೊಲೀಸರಿಂದ ನಾಲ್ವರು ಆರೋಪಿಗಳನ್ನ ಬಂಧಿಲಾಗಿತ್ತು. ಶ್ರೀಕಾಂತ್, ಮುನಿರಾಜು, ಚಂದ್ರಕಾಂತ್, ಬಾಲಕೃಷ್ಣ@ ಜಿಗಣಿ ಬಾಲು ಬಂಧಿತರು. ಆರೋಪಿಗಳು ವಿಶಾಖಪಟ್ಟಣದಿಂದ ಬೆಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದರು.
ಆರೋಪಿಗಳ ಪೈಕಿ ಜಿಗಣಿ ಬಾಲು ಕ್ರೈಂ ಕೇಸ್ವೊಂದರಲ್ಲಿ ಜೈಲು ಸೇರಿದ್ದ. ಆದರೆ ಜೈಲಿನಲ್ಲಿ ಕೂತು ಗಾಂಜಾ ವ್ಯವಹಾರ ನಡೆಸುತ್ತಿದ್ದ. ಸದ್ಯ ಗಾಂಜಾ ಕೇಸ್ನಲ್ಲಿ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು