ಐಪಿಎಲ್ 2025 ಪುನರಾರಂಭ: RCB ತಂಡ ಮೊದಲ ಪಂದ್ಯವನ್ನಾಡಲಿದೆ….

ಇಂಡಿಯನ್ ಪ್ರೀಮಿಯರ್ ಲೀಗ್ನ 59ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಟೂರ್ನಿಯು ಅರ್ಧದಲ್ಲೇ ಸ್ಥಗಿತಗೊಂಡಿದ್ದರಿಂದ ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ಈ ಪಂದ್ಯ ಜರುಗಿರಲಿಲ್ಲ.

ಭಾರತ ಮತ್ತು ಪಾಕಿಸ್ತಾನ್ ನಡುವಣ ಯುದ್ಧ ಭೀತಿ ಹಿನ್ನಲೆ ಅರ್ಧದಲ್ಲೇ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಶುಕ್ರವಾರದಿಂದ ಶುರುವಾಗುವುದು ಬಹುತೇಕ ಖಚಿತವಾಗಿದೆ. ಇಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರಾಳಿಯಾಗಿ ಕಣಕ್ಕಿಳಿಯುವುದು ಲಕ್ನೋ ಸೂಪರ್ ಜೈಂಟ್ಸ್. ಏಕೆಂದರೆ ಐಪಿಎಲ್ನ 59ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಬೇಕಿತ್ತು. ಇದೀಗ ಈ ಪಂದ್ಯದ ಮೂಲಕವೇ ಟೂರ್ನಿಯನ್ನು ಮತ್ತೆ ಶುರು ಮಾಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

ಈಗಾಗಲೇ ಗುಜರಾತ್ ಟೈಟಾನ್ಸ್ ಸೇರಿದಂತೆ ಕೆಲ ತಂಡಗಳು ಐಪಿಎಲ್ನ ಉಳಿದ ಪಂದ್ಯಗಳಿಗಾಗಿ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಈ ಸಿದ್ಧತೆಗಳ ನಡುವೆ ಮತ್ತೊಂದು ಮಾಹಿತಿ ಕೂಡ ಹೊರಬಿದ್ದಿದೆ. ಅಂದರೆ ಮೊದಲ ಪಂದ್ಯದಲ್ಲಿ ಆರ್ಸಿಬಿ ತಂಡ ಕಣಕ್ಕಿಳಿಯಲಿದೆ ಎಂದು ಎಎನ್ಐ ಮೂಲಗಳು ತಿಳಿಸಿವೆ. ಹೀಗಾಗಿ ಐಪಿಎಲ್ ಪುನರಾರಂಭವಾದರೆ ಮೊದಲ ಮ್ಯಾಚ್ನಲ್ಲಿ ಆರ್ಸಿಬಿ ಪಡೆ ಕಾಣಿಸಿಕೊಳ್ಳುವುದು ಖಚಿತ.

ಇದಾಗ್ಯೂ ಈ ಪಂದ್ಯವನ್ನು ಎಲ್ಲಿ ಆಯೋಜಿಸಲಾಗುತ್ತದೆ ಎಂಬುದರ ಖಚಿತ ಮಾಹಿತಿ ಹೊರಬಿದ್ದಿಲ್ಲ. ಈ ಹಿಂದಿನ ವೇಳಾಪಟ್ಟಿಯ ಪ್ರಕಾರ, ಆರ್ಸಿಬಿ-ಎಲ್ಎಸ್ಜಿ ನಡುವಣ ಪಂದ್ಯವು ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆಯಬೇಕಿತ್ತು. ಇದೀಗ ವೇಳಾಪಟ್ಟಿಯನ್ನು ಮರುನಿಗದಿ ಮಾಡುತ್ತಿರುವುದರಿಂದ ಉಭಯ ತಂಡಗಳು ತಟಸ್ಥ ಮೈದಾನದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಐಪಿಎಲ್ನ ಲೀಗ್ ಹಂತದ ಉಳಿದ ಪಂದ್ಯಗಳನ್ನು ದಕ್ಷಿಣ ಭಾರತದಲ್ಲಿ ಆಯೋಜಿಸುವ ಬಗ್ಗೆ ಐಪಿಎಲ್ ಆಡಳಿತ ಮಂಡಳಿಯ ಸಭೆಯಲ್ಲಿ ಚರ್ಚಿಸಲಾಗಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯವು ಹೈದರಾಬಾದ್, ಚೆನ್ನೈ ಅಥವಾ ಬೆಂಗಳೂರಿನಲ್ಲಿ ಆಯೋಜಿಸಬಹುದು. ಈ ಮೂಲಕ ರಂಗು ರಂಗಿನ ಕ್ರಿಕೆಟ್ ಟೂರ್ನಿಗೆ ಮತ್ತೆ ಚಾಲನೆ ನೀಡಲು ಬಿಸಿಸಿಐ ಯೋಜನೆ ರೂಪಿಸಿದೆ.

 

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!