ಐಪಿಎಲ್ 2025 ಪುನರಾರಂಭ: RCB ತಂಡ ಮೊದಲ ಪಂದ್ಯವನ್ನಾಡಲಿದೆ….

ಇಂಡಿಯನ್ ಪ್ರೀಮಿಯರ್ ಲೀಗ್ನ 59ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಟೂರ್ನಿಯು ಅರ್ಧದಲ್ಲೇ ಸ್ಥಗಿತಗೊಂಡಿದ್ದರಿಂದ ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ಈ ಪಂದ್ಯ ಜರುಗಿರಲಿಲ್ಲ.

ಭಾರತ ಮತ್ತು ಪಾಕಿಸ್ತಾನ್ ನಡುವಣ ಯುದ್ಧ ಭೀತಿ ಹಿನ್ನಲೆ ಅರ್ಧದಲ್ಲೇ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಶುಕ್ರವಾರದಿಂದ ಶುರುವಾಗುವುದು ಬಹುತೇಕ ಖಚಿತವಾಗಿದೆ. ಇಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರಾಳಿಯಾಗಿ ಕಣಕ್ಕಿಳಿಯುವುದು ಲಕ್ನೋ ಸೂಪರ್ ಜೈಂಟ್ಸ್. ಏಕೆಂದರೆ ಐಪಿಎಲ್ನ 59ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಬೇಕಿತ್ತು. ಇದೀಗ ಈ ಪಂದ್ಯದ ಮೂಲಕವೇ ಟೂರ್ನಿಯನ್ನು ಮತ್ತೆ ಶುರು ಮಾಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

ಈಗಾಗಲೇ ಗುಜರಾತ್ ಟೈಟಾನ್ಸ್ ಸೇರಿದಂತೆ ಕೆಲ ತಂಡಗಳು ಐಪಿಎಲ್ನ ಉಳಿದ ಪಂದ್ಯಗಳಿಗಾಗಿ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಈ ಸಿದ್ಧತೆಗಳ ನಡುವೆ ಮತ್ತೊಂದು ಮಾಹಿತಿ ಕೂಡ ಹೊರಬಿದ್ದಿದೆ. ಅಂದರೆ ಮೊದಲ ಪಂದ್ಯದಲ್ಲಿ ಆರ್ಸಿಬಿ ತಂಡ ಕಣಕ್ಕಿಳಿಯಲಿದೆ ಎಂದು ಎಎನ್ಐ ಮೂಲಗಳು ತಿಳಿಸಿವೆ. ಹೀಗಾಗಿ ಐಪಿಎಲ್ ಪುನರಾರಂಭವಾದರೆ ಮೊದಲ ಮ್ಯಾಚ್ನಲ್ಲಿ ಆರ್ಸಿಬಿ ಪಡೆ ಕಾಣಿಸಿಕೊಳ್ಳುವುದು ಖಚಿತ.

ಇದಾಗ್ಯೂ ಈ ಪಂದ್ಯವನ್ನು ಎಲ್ಲಿ ಆಯೋಜಿಸಲಾಗುತ್ತದೆ ಎಂಬುದರ ಖಚಿತ ಮಾಹಿತಿ ಹೊರಬಿದ್ದಿಲ್ಲ. ಈ ಹಿಂದಿನ ವೇಳಾಪಟ್ಟಿಯ ಪ್ರಕಾರ, ಆರ್ಸಿಬಿ-ಎಲ್ಎಸ್ಜಿ ನಡುವಣ ಪಂದ್ಯವು ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆಯಬೇಕಿತ್ತು. ಇದೀಗ ವೇಳಾಪಟ್ಟಿಯನ್ನು ಮರುನಿಗದಿ ಮಾಡುತ್ತಿರುವುದರಿಂದ ಉಭಯ ತಂಡಗಳು ತಟಸ್ಥ ಮೈದಾನದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಐಪಿಎಲ್ನ ಲೀಗ್ ಹಂತದ ಉಳಿದ ಪಂದ್ಯಗಳನ್ನು ದಕ್ಷಿಣ ಭಾರತದಲ್ಲಿ ಆಯೋಜಿಸುವ ಬಗ್ಗೆ ಐಪಿಎಲ್ ಆಡಳಿತ ಮಂಡಳಿಯ ಸಭೆಯಲ್ಲಿ ಚರ್ಚಿಸಲಾಗಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯವು ಹೈದರಾಬಾದ್, ಚೆನ್ನೈ ಅಥವಾ ಬೆಂಗಳೂರಿನಲ್ಲಿ ಆಯೋಜಿಸಬಹುದು. ಈ ಮೂಲಕ ರಂಗು ರಂಗಿನ ಕ್ರಿಕೆಟ್ ಟೂರ್ನಿಗೆ ಮತ್ತೆ ಚಾಲನೆ ನೀಡಲು ಬಿಸಿಸಿಐ ಯೋಜನೆ ರೂಪಿಸಿದೆ.

 

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!