ಐಪಿಎಲ್ ನಿಂದ ಆರ್.ಸಿ.ಬಿ ಹೊರಗೋಗ್ಬಾರ್ದು ಅಂದ್ರೆ ಇಷ್ಟು ಪಂದ್ಯಗಳನ್ನು ಗೆಲ್ಲಲೇಬೇಕು….

ಐಪಿಎಲ್ 2025, ಸೀಸನ್ 18ರ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಗ್ರಸ್ಥಾನದಲ್ಲಿದ್ದು,16 ಪಾಯಿಂಟ್ಸ್ ಗಳನ್ನು ಪಡೆದುಕೊಂಡಿದ್ದರು ಸಹ ಇನ್ನು ಪ್ಲೇ ಆಫ್ ಗೆ ಆಯ್ಕೆಯಾಗಿಲ್ಲ. ಇನ್ನು ಉಳಿದಿರುವ ಮೂರು ಪಂದ್ಯಗಳಲ್ಲಿ ಆರ್.ಸಿ.ಬಿ ತಂಡವು ಎಷ್ಟು ಪಂದ್ಯಗಳನ್ನು ಗೆಲ್ಲಲೇ ಬೇಕು ಆಗ ಮಾತ್ರ ಪ್ಲೇ ಆಫ್ಗೆ ಏರಲು ಸಾಧ್ಯವಾಗುತ್ತದೆ.ಇಂಡಿಯನ್ ಪ್ರೀಮಿಯರ್ ಲೀಗ್ನ 55 ಪಂದ್ಯಗಳು ಪೂರ್ಣಗೊಂಡರೂ ಯಾವುದೇ ತಂಡ ಪ್ಲೇಆಫ್ಗೆ ಪ್ರವೇಶಿಸಿಲ್ಲ. ಇತ್ತ ಮೂರು ತಂಡಗಳು ಪ್ಲೇಆಫ್ ರೇಸ್ನಿಂದ ಹೊರಬಿದ್ದಿದ್ದರೆ, 7 ತಂಡಗಳ ನಡುವೆ ಪ್ಲೇಆಫ್ ರೇಸ್ ಪೈಪೋಟಿ ಮುಂದುವರೆದಿದೆ. ಹೀಗಾಗಿ ಈ ವಾರದ ಪಂದ್ಯದೊಂದಿಗೆ ಪ್ಲೇಆಫ್ ಆಡಲಿರುವ ತಂಡಗಳ ಸ್ಪಷ್ಟ ಚಿತ್ರಣ ದೊರೆಯಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 11 ಪಂದ್ಯಗಳಲ್ಲಿ 8 ಜಯ ಸಾಧಿಸಿ ಇದೀಗ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಒಟ್ಟು 16 ಅಂಕಗಳನ್ನು ಕಲೆಹಾಕಿದರೂ, ಆರ್ಸಿಬಿ ತಂಡ ಅಧಿಕೃತವಾಗಿ ಪ್ಲೇಆಫ್ಗೆ ಪ್ರವೇಶಿಸಿಲ್ಲ. ಇದಕ್ಕೆ ಮುಖ್ಯ ಕಾರಣ ಇತರೆ 7 ತಂಡಗಳು ಪ್ಲೇಆಫ್ ರೇಸ್ನಲ್ಲಿರುವುದು. ಅದರಲ್ಲೂ 4 ತಂಡಗಳಿಗೆ ಆರ್ಸಿಬಿ ತಂಡವನ್ನು ಹಿಂದಿಕ್ಕಿ ಪ್ಲೇಆಫ್ ಹಂತಕ್ಕೇರಲು ಉತ್ತಮ ಅವಕಾಶವಿದೆ. ಹೀಗಾಗಿಯೇ ಆರ್ಸಿಬಿ ಪಾಲಿಗೆ ಮುಂದಿನ ಮೂರು ಪಂದ್ಯಗಳು ನಿರ್ಣಾಯಕ. ಏಕೆಂದರೆ….

ಮುಂಬೈ ಇಂಡಿಯನ್ಸ್ ತಂಡವು ಮುಂದಿನ ಮೂರು ಮ್ಯಾಚ್ಗಳಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಮಣಿಸಿದರೆ, ಒಟ್ಟು 20 ಅಂಕಗಳನ್ನು ಪಡೆದು ಪ್ಲೇಆಫ್ಗೇರಲಿದೆ. ಪಂಜಾಬ್ ಕಿಂಗ್ಸ್ ತಂಡವು ಮುಂದಿನ 3 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳನ್ನು ಸೋಲಿಸಿದರೆ 19 ಅಂಕಗಳೊಂದಿಗೆ ಪ್ಲೇಆಫ್ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಲಿದೆ. ಹಾಗೆಯೇ ಗುಜರಾತ್ ಟೈಟಾನ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಮಣಿಸಿದರೆ ಒಟ್ಟು 18 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರಲಿದೆ.

ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಂದಿನ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿದರೆ, ಅಂದರೆ ಚೆನ್ನೈ ಸೂಪರ್ ಕಿಂಗ್ಸ್, ಸನ್ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿದರೆ ಒಟ್ಟು 17 ಅಂಕಗಳನ್ನು ಪಡೆದು ಪ್ಲೇಆಫ್ಗೆ ಅರ್ಹತೆ ಪಡೆಯಲಿದೆ.ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್, ಸನ್ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ವಿರುದ್ಧ ಸೋತರೆ 16 ಅಂಕಗಳಲ್ಲೇ ಉಳಿಯಲಿದೆ.

ಹೀಗಾದಲ್ಲಿ ಆರ್ಸಿಬಿ ತಂಡವು ಪ್ಲೇಆಫ್ ರೇಸ್ನಿಂದ ಹೊರಬೀಳಲಿದ್ದು, ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಂದಿನ ಹಂತಕ್ಕೇರಲಿದೆ. ಹೀಗಾಗಿಯೇ ಆರ್ಸಿಬಿ ತಂಡದ ಪಾಲಿಗೆ ಮುಂದಿನ ಪಂದ್ಯಗಳು ನಿರ್ಣಾಯಕ.

 

Related Posts

ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು!

  ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ…

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್‌ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!