ಐಪಿಎಲ್ ನಿಂದ ಆರ್.ಸಿ.ಬಿ ಹೊರಗೋಗ್ಬಾರ್ದು ಅಂದ್ರೆ ಇಷ್ಟು ಪಂದ್ಯಗಳನ್ನು ಗೆಲ್ಲಲೇಬೇಕು….

ಐಪಿಎಲ್ 2025, ಸೀಸನ್ 18ರ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಗ್ರಸ್ಥಾನದಲ್ಲಿದ್ದು,16 ಪಾಯಿಂಟ್ಸ್ ಗಳನ್ನು ಪಡೆದುಕೊಂಡಿದ್ದರು ಸಹ ಇನ್ನು ಪ್ಲೇ ಆಫ್ ಗೆ ಆಯ್ಕೆಯಾಗಿಲ್ಲ. ಇನ್ನು ಉಳಿದಿರುವ ಮೂರು ಪಂದ್ಯಗಳಲ್ಲಿ ಆರ್.ಸಿ.ಬಿ ತಂಡವು ಎಷ್ಟು ಪಂದ್ಯಗಳನ್ನು ಗೆಲ್ಲಲೇ ಬೇಕು ಆಗ ಮಾತ್ರ ಪ್ಲೇ ಆಫ್ಗೆ ಏರಲು ಸಾಧ್ಯವಾಗುತ್ತದೆ.ಇಂಡಿಯನ್ ಪ್ರೀಮಿಯರ್ ಲೀಗ್ನ 55 ಪಂದ್ಯಗಳು ಪೂರ್ಣಗೊಂಡರೂ ಯಾವುದೇ ತಂಡ ಪ್ಲೇಆಫ್ಗೆ ಪ್ರವೇಶಿಸಿಲ್ಲ. ಇತ್ತ ಮೂರು ತಂಡಗಳು ಪ್ಲೇಆಫ್ ರೇಸ್ನಿಂದ ಹೊರಬಿದ್ದಿದ್ದರೆ, 7 ತಂಡಗಳ ನಡುವೆ ಪ್ಲೇಆಫ್ ರೇಸ್ ಪೈಪೋಟಿ ಮುಂದುವರೆದಿದೆ. ಹೀಗಾಗಿ ಈ ವಾರದ ಪಂದ್ಯದೊಂದಿಗೆ ಪ್ಲೇಆಫ್ ಆಡಲಿರುವ ತಂಡಗಳ ಸ್ಪಷ್ಟ ಚಿತ್ರಣ ದೊರೆಯಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 11 ಪಂದ್ಯಗಳಲ್ಲಿ 8 ಜಯ ಸಾಧಿಸಿ ಇದೀಗ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಒಟ್ಟು 16 ಅಂಕಗಳನ್ನು ಕಲೆಹಾಕಿದರೂ, ಆರ್ಸಿಬಿ ತಂಡ ಅಧಿಕೃತವಾಗಿ ಪ್ಲೇಆಫ್ಗೆ ಪ್ರವೇಶಿಸಿಲ್ಲ. ಇದಕ್ಕೆ ಮುಖ್ಯ ಕಾರಣ ಇತರೆ 7 ತಂಡಗಳು ಪ್ಲೇಆಫ್ ರೇಸ್ನಲ್ಲಿರುವುದು. ಅದರಲ್ಲೂ 4 ತಂಡಗಳಿಗೆ ಆರ್ಸಿಬಿ ತಂಡವನ್ನು ಹಿಂದಿಕ್ಕಿ ಪ್ಲೇಆಫ್ ಹಂತಕ್ಕೇರಲು ಉತ್ತಮ ಅವಕಾಶವಿದೆ. ಹೀಗಾಗಿಯೇ ಆರ್ಸಿಬಿ ಪಾಲಿಗೆ ಮುಂದಿನ ಮೂರು ಪಂದ್ಯಗಳು ನಿರ್ಣಾಯಕ. ಏಕೆಂದರೆ….

ಮುಂಬೈ ಇಂಡಿಯನ್ಸ್ ತಂಡವು ಮುಂದಿನ ಮೂರು ಮ್ಯಾಚ್ಗಳಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಮಣಿಸಿದರೆ, ಒಟ್ಟು 20 ಅಂಕಗಳನ್ನು ಪಡೆದು ಪ್ಲೇಆಫ್ಗೇರಲಿದೆ. ಪಂಜಾಬ್ ಕಿಂಗ್ಸ್ ತಂಡವು ಮುಂದಿನ 3 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳನ್ನು ಸೋಲಿಸಿದರೆ 19 ಅಂಕಗಳೊಂದಿಗೆ ಪ್ಲೇಆಫ್ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಲಿದೆ. ಹಾಗೆಯೇ ಗುಜರಾತ್ ಟೈಟಾನ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಮಣಿಸಿದರೆ ಒಟ್ಟು 18 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರಲಿದೆ.

ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಂದಿನ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿದರೆ, ಅಂದರೆ ಚೆನ್ನೈ ಸೂಪರ್ ಕಿಂಗ್ಸ್, ಸನ್ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿದರೆ ಒಟ್ಟು 17 ಅಂಕಗಳನ್ನು ಪಡೆದು ಪ್ಲೇಆಫ್ಗೆ ಅರ್ಹತೆ ಪಡೆಯಲಿದೆ.ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್, ಸನ್ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ವಿರುದ್ಧ ಸೋತರೆ 16 ಅಂಕಗಳಲ್ಲೇ ಉಳಿಯಲಿದೆ.

ಹೀಗಾದಲ್ಲಿ ಆರ್ಸಿಬಿ ತಂಡವು ಪ್ಲೇಆಫ್ ರೇಸ್ನಿಂದ ಹೊರಬೀಳಲಿದ್ದು, ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಂದಿನ ಹಂತಕ್ಕೇರಲಿದೆ. ಹೀಗಾಗಿಯೇ ಆರ್ಸಿಬಿ ತಂಡದ ಪಾಲಿಗೆ ಮುಂದಿನ ಪಂದ್ಯಗಳು ನಿರ್ಣಾಯಕ.

 

Related Posts

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

  ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

ಮೈಸೂರಿನ ಫಾಲ್ಕನ್ ಟೈರ್ಸ್ ಲಿ. ನ ಮಾಜಿ ಮಾಲೀಕ ಅಂದರ್ !

    ಬಹು ವರ್ಷಗಳ ಹಿಂದೆ ಫಾಲ್ಕನ್ ಟೈರ್ಸ್ ನ ಕಾರ್ಮಿಕರಿಗೆ ಅನ್ಯಾಯವೆಸಗಿ ಕಾರ್ಮಿಕರನ್ನು ಬೀದಿ ಪಾಲು ಮಾಡಿದ್ದ ಪವನ್ ಕುಮಾರ್ ರುಹಿಯಾ 315 ಕೋಟಿ ರೂ. ಸೈಬರ್ ವಂಚನೆ ಪ್ರತ್ಯೇಕ ಪ್ರಕರಣದಲ್ಲಿ ಪವನ್ ಕುಮಾರ್ ರುಹಿಯಾ ಬಂಧನ ಈ ಕಳ್ಳನಿಗೆ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು