ಕನ್ನಡಿಗರ ವಿರೋಧಕ್ಕೆ ಸಿಲುಕಿಕೊಂಡಿದ್ದ ‘ಥಗ್ ಲೈಫ್’ ಚಿತ್ರಕ್ಕೆ ತಮಿಳಿಗರಿಂದಲೇ ಛೀಮಾರಿ….

‘ಥಗ್ ಲೈಫ್’ ರಿಲೀಸ್ ಸಿನಿಮಾ ಸಂದರ್ಭದಲ್ಲಿ ಕನ್ನಡಿಗರ ವಿರೋಧ ಕಟ್ಟಿಕೊಂಡು ತಮಿಳಿನಾಡಿನಿಂದ ಒಂದೇ ಎಲ್ಲಾ ದುಡ್ಡು ಬಾಚಿಕೊಳ್ಳುತ್ತೇನೆ ಎಂದು ಧಿಮಾಕು ತೋರಿಸಿಕೊಂಡು ಹೋಗಿದ್ದ ಕಮಲ್ ಹಾಸನ್ಗೆ ತಮಿಳಿಗರೇ ಉಗಿದು ಉಪ್ಪಿನ ಕಾಯಿ ಹಾಕುತ್ತಿದ್ದಾರೆ. ಅವರ ನಟನೆಯ ‘ಥಗ್ ಲೈಫ್’ ಚಿತ್ರ ಇಂದು ಅಂದರೆ ಜೂನ್ 5 ಅಂದರೆ ರಿಲೀಸ್ ಆಗಿದೆ. ಈ ಸಿನಿಮಾನ ನೋಡಲು ಕನ್ನಡಿಗರೂ ಈ ಮೊದಲು ಕಾದಿದ್ದರು. ಆದರೆ, ಕಮಲ್ ಹಾಸನ್ ಅವರು ಯಾವಾಗ ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂದರೋ ಆ ಕ್ಷಣಕ್ಕೆ ಅವರು ಕನ್ನಡಿಗರ ವಿರೋಧ ಕಟ್ಟಿಕೊಂಡರು. ಈ ಚಿತ್ರವನ್ನು ಕರ್ನಾಟಕದಲ್ಲಿ ರಿಲೀಸ್ ಮಾಡಲು ಅವಕಾಶ ನೀಡಿಲ್ಲ. ಹೀಗಿರುವಾಗಲೇ ಚಿತ್ರಕ್ಕೆ ನೆಗೆಟಿವ್ ವಿಮರ್ಶೆ ಸಿಕ್ಕಿದೆ.

‘ಥಗ್ ಲೈಫ್’ ಚಿತ್ರದ ಈವೆಂಟ್ನಲ್ಲಿ ಮಾತನಾಡಿದ್ದ ಕಮಲ್ ಹಾಸನ್ ಅವರು ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂದು ಹೇಳಿದ್ದರು. ಆ ಬಳಿಕ ಅವರು ಕ್ಷಮೆ ಕೇಳಿಯೇ ಇಲ್ಲ. ಏನೇ ಆದರೂ ನಾನು ಕನ್ನಡಿಗರ ಬಳಿ ಕ್ಷಮೆ ಕೇಳಲ್ಲ, ನಾನು ತಪ್ಪೇ ಮಾಡಿಲ್ಲ ಎಂದು ಧಿಮಾಕು ತೋರಿಸುತ್ತಿದ್ದರು. ಈ ಸಮಯದಲ್ಲಿ ತಮಿಳಿಗರ ಓಲೈಕೆ ಮಾಡಲು ಕೂಡ ಪ್ರಯತ್ನಿಸಿದ್ದರು. ಈಗ ಅವರಿಗೆ ತಮಿಳಿಗರೇ ಪಾಠ ಕಲಿಸಿದ್ದಾರೆ. ‘ಅತಿ ಕೆಟ್ಟ ಸಿನಿಮಾ’ ಎಂದು ಕೆಲವರು ಹೇಳಿಕೊಂಡಿದ್ದಾರೆ. ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರವು ಈ ಮೊದಲು ರಿಲೀಸ್ ಆಗಿ ಅಟ್ಟರ್ ಫ್ಲಾಪ್ ಆಗಿತ್ತು. ಈಗ ಅನೇಕರು ‘ಥಗ್ ಲೈಫ್’ ನೋಡಿ ‘ಇಂಡಿಯನ್ 2’ ಚಿತ್ರವೇ ಚೆನ್ನಾಗಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಅಂದರೆ ‘ಥಗ್ ಲೈಫ್’ ಚಿತ್ರ ಅದೆಷ್ಟು ಕೆಟ್ಟದಾಗಿ ಇರಬಹುದು ಎಂದು ಅನೇಕರು ಊಹಿಸುತ್ತಿದ್ದಾರೆ.‘ಥಗ್ ಲೈಫ್’ ಚಿತ್ರಕ್ಕೆ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನ ಇದೆ. ಈ ಚಿತ್ರದಲ್ಲಿ ಕತೆ ಹಾಗೂ ನಿರೂಪಣೆ ಯಾವುದೂ ಉತ್ತಮವಾಗಿಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಮೊದಲ ದಿನದ ಗಳಿಕೆ ಮೇಲೆ ಈ ವಿಮರ್ಶೆ ಸಾಕಷ್ಟು ಪರಿಣಾಮ ಬೀರಲಿದೆ. ಇನ್ನು, ಕಮಲ್ ಕ್ಷಮೆ ಕೇಳಿ ಕರ್ನಾಟಕದಲ್ಲಿ ಸಿನಿಮಾ ರಿಲೀಸ್ ಆದರೂ ಯಶಸ್ಸು ಕಾಣೋದು ಅನುಮಾನವೇ. ಚಿತ್ರದ ಮುಂದಿನ ಕಲೆಕ್ಷನ್ ಯಾವ ರೀತಿ ಇರುತ್ತದೆ ಎಂಬುದನ್ನು ಕಾದುನೋಡಬೇಕಿದೆ.

 

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!