ಕನ್ನಡಿಗರ ವಿರೋಧಕ್ಕೆ ಸಿಲುಕಿಕೊಂಡಿದ್ದ ‘ಥಗ್ ಲೈಫ್’ ಚಿತ್ರಕ್ಕೆ ತಮಿಳಿಗರಿಂದಲೇ ಛೀಮಾರಿ….

‘ಥಗ್ ಲೈಫ್’ ರಿಲೀಸ್ ಸಿನಿಮಾ ಸಂದರ್ಭದಲ್ಲಿ ಕನ್ನಡಿಗರ ವಿರೋಧ ಕಟ್ಟಿಕೊಂಡು ತಮಿಳಿನಾಡಿನಿಂದ ಒಂದೇ ಎಲ್ಲಾ ದುಡ್ಡು ಬಾಚಿಕೊಳ್ಳುತ್ತೇನೆ ಎಂದು ಧಿಮಾಕು ತೋರಿಸಿಕೊಂಡು ಹೋಗಿದ್ದ ಕಮಲ್ ಹಾಸನ್ಗೆ ತಮಿಳಿಗರೇ ಉಗಿದು ಉಪ್ಪಿನ ಕಾಯಿ ಹಾಕುತ್ತಿದ್ದಾರೆ. ಅವರ ನಟನೆಯ ‘ಥಗ್ ಲೈಫ್’ ಚಿತ್ರ ಇಂದು ಅಂದರೆ ಜೂನ್ 5 ಅಂದರೆ ರಿಲೀಸ್ ಆಗಿದೆ. ಈ ಸಿನಿಮಾನ ನೋಡಲು ಕನ್ನಡಿಗರೂ ಈ ಮೊದಲು ಕಾದಿದ್ದರು. ಆದರೆ, ಕಮಲ್ ಹಾಸನ್ ಅವರು ಯಾವಾಗ ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂದರೋ ಆ ಕ್ಷಣಕ್ಕೆ ಅವರು ಕನ್ನಡಿಗರ ವಿರೋಧ ಕಟ್ಟಿಕೊಂಡರು. ಈ ಚಿತ್ರವನ್ನು ಕರ್ನಾಟಕದಲ್ಲಿ ರಿಲೀಸ್ ಮಾಡಲು ಅವಕಾಶ ನೀಡಿಲ್ಲ. ಹೀಗಿರುವಾಗಲೇ ಚಿತ್ರಕ್ಕೆ ನೆಗೆಟಿವ್ ವಿಮರ್ಶೆ ಸಿಕ್ಕಿದೆ.

‘ಥಗ್ ಲೈಫ್’ ಚಿತ್ರದ ಈವೆಂಟ್ನಲ್ಲಿ ಮಾತನಾಡಿದ್ದ ಕಮಲ್ ಹಾಸನ್ ಅವರು ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂದು ಹೇಳಿದ್ದರು. ಆ ಬಳಿಕ ಅವರು ಕ್ಷಮೆ ಕೇಳಿಯೇ ಇಲ್ಲ. ಏನೇ ಆದರೂ ನಾನು ಕನ್ನಡಿಗರ ಬಳಿ ಕ್ಷಮೆ ಕೇಳಲ್ಲ, ನಾನು ತಪ್ಪೇ ಮಾಡಿಲ್ಲ ಎಂದು ಧಿಮಾಕು ತೋರಿಸುತ್ತಿದ್ದರು. ಈ ಸಮಯದಲ್ಲಿ ತಮಿಳಿಗರ ಓಲೈಕೆ ಮಾಡಲು ಕೂಡ ಪ್ರಯತ್ನಿಸಿದ್ದರು. ಈಗ ಅವರಿಗೆ ತಮಿಳಿಗರೇ ಪಾಠ ಕಲಿಸಿದ್ದಾರೆ. ‘ಅತಿ ಕೆಟ್ಟ ಸಿನಿಮಾ’ ಎಂದು ಕೆಲವರು ಹೇಳಿಕೊಂಡಿದ್ದಾರೆ. ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರವು ಈ ಮೊದಲು ರಿಲೀಸ್ ಆಗಿ ಅಟ್ಟರ್ ಫ್ಲಾಪ್ ಆಗಿತ್ತು. ಈಗ ಅನೇಕರು ‘ಥಗ್ ಲೈಫ್’ ನೋಡಿ ‘ಇಂಡಿಯನ್ 2’ ಚಿತ್ರವೇ ಚೆನ್ನಾಗಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಅಂದರೆ ‘ಥಗ್ ಲೈಫ್’ ಚಿತ್ರ ಅದೆಷ್ಟು ಕೆಟ್ಟದಾಗಿ ಇರಬಹುದು ಎಂದು ಅನೇಕರು ಊಹಿಸುತ್ತಿದ್ದಾರೆ.‘ಥಗ್ ಲೈಫ್’ ಚಿತ್ರಕ್ಕೆ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನ ಇದೆ. ಈ ಚಿತ್ರದಲ್ಲಿ ಕತೆ ಹಾಗೂ ನಿರೂಪಣೆ ಯಾವುದೂ ಉತ್ತಮವಾಗಿಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಮೊದಲ ದಿನದ ಗಳಿಕೆ ಮೇಲೆ ಈ ವಿಮರ್ಶೆ ಸಾಕಷ್ಟು ಪರಿಣಾಮ ಬೀರಲಿದೆ. ಇನ್ನು, ಕಮಲ್ ಕ್ಷಮೆ ಕೇಳಿ ಕರ್ನಾಟಕದಲ್ಲಿ ಸಿನಿಮಾ ರಿಲೀಸ್ ಆದರೂ ಯಶಸ್ಸು ಕಾಣೋದು ಅನುಮಾನವೇ. ಚಿತ್ರದ ಮುಂದಿನ ಕಲೆಕ್ಷನ್ ಯಾವ ರೀತಿ ಇರುತ್ತದೆ ಎಂಬುದನ್ನು ಕಾದುನೋಡಬೇಕಿದೆ.

 

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!