ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಬಸವರಾಜ್ ಹೊರಟ್ಟಿ ರಾಜೀನಾಮೆ!

ಬೆಂಗಳೂರು/ಹುಬ್ಬಳ್ಳಿ : ಕರ್ನಾಟಕದಲ್ಲಿ ಹನಿಟ್ರ್ಯಾಪ್ ಪ್ರಕರಣ ಗದ್ದಲದ ಮಧ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಬಸವರಾಜ್ ಹೊರಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ರವಾನಿಸಿದ್ದು, ಮೇ 1ರೊಳಗೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸಿ ಸಭಾಪತಿ ಹುದ್ದೆಯಿಂದ ಮುಕ್ತಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಸದಸ್ಯರ ವರ್ತನೆಯು ಸರಿಯಿಲ್ಲ. ಹಾಗಾಗಿ, ನಾನು ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಬಸವರಾಜ ಹೊರಟ್ಟಿ ಇಂದು (ಮಾರ್ಚ್ 23) ಬೆಳಗ್ಗೆ ಅಷ್ಟೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಈಗಾಗಲೇ ಅವರು ರಾಜೀನಾಮೆ ಪತ್ರವನ್ನು ಉಪಸಭಾಪತಿಗೆ ರವಾನಿಸಿರುವುದು ಬೆಳಕಿಗೆ ಬಂದಿದೆ.


ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ಏನಿದೆ?
ಇನ್ನು ಬಸವರಾಜ್ ಹೊರಟ್ಟಿ ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂದು ಇಂದು (ಮಾರ್ಚ್ 23) ಬೆಳಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅವರು ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ರವಾನಿಸಿರುವುದು ಬೆಳಕಿಗೆ ಬಂದಿದೆ. ಹೌದು..ಮಾರ್ಚ್ 18ರಂದೇ ಹೊರಟ್ಟಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಾಣೇಶ್ ಅವರಿಗೆ ಕಳುಹಿಸಿದ್ದು, ದಿನಾಂಕ 1-4-25ರಂದು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ವೈಯಕ್ತಿ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದು, ಸದರಿ ರಾಜೀನಾಮೆಯನ್ನು 31-3-25ರೊಳಗೆ ಸ್ವೀಕರಿಸಿ ದಿನಾಂಕ 1-4-2025ರಿಂದ ಅನ್ವಯವಾಗುವಂತೆ ಕ್ರಮಕೈಗೊಂಡು ಹಾಗೂ ನನನ್ನು ಈ ಹುದ್ದೆಯಿಂದ ಮುಕ್ತಿಗೊಳಿಸಲು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಹೊರಟ್ಟಿ ತಮ್ಮ ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ.


ಬೆಳಗ್ಗೆ ಅಷ್ಟೇ ರಾಜೀನಾಮೆ ಬಗ್ಗೆ ಮಾತನಾಡಿದ್ದ ಹೊರಟ್ಟಿ
ಮಾ. 23ರಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾಡಿರುವ ಹೊರಟ್ಟ, ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಹಾಗೂ ನಾನು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ. ಇಂದಿನ ದಿನಗಳಲ್ಲಿ ಸದನಗಳನ್ನು ನಿರ್ವಹಿಸುವುದು ಕಷ್ಟ ಎಂಬುದು ಅರ್ಥವಾಗಿದೆ. ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.
ಸದನದಲ್ಲಿ ನಡೆಯುತ್ತಿರುವ ಘಟನೆಗಳಿಂದ ನನಗೆ ಬೇಜಾರಾಗಿದೆ. ಸಭಪತಿಗೆ ಹೇಳೋದಿಲ್ಲ ಕೇಳೋದಿಲ್ಲ. ಸದನದೊಳಗೆ ಪ್ರತಿಭಟನೆ ನಡೆಸುತ್ತಾರೆ. ಪರಿಷತ್ಗೆ ಪ್ಲೇ ಕಾರ್ಡ್ಗಳನ್ನು ತೆಗೆದುಕೊಂಡು ಬರುತ್ತಾರೆ. ಸದನ ನಡೆಸುವುದಕ್ಕೆ ನನಗೆ ಯೋಗ್ಯತೆ ಇಲ್ಲ. ಮೊನ್ನೆ ನಾನು 17 ನಿಮಿಷ ಸುಮ್ಮನೆ ಕುತ್ತಿದ್ದೆ. ಇದರಿಂದ ನಾನು ಸದನದಲ್ಲಿ ಇರಬಾರದು ಎಂದು ತೀರ್ಮಾನ ಮಾಡಿದ್ದೇನೆ. 45 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ಸದನದಲ್ಲಿ ಯಾರೂ ಗೌರವ ಕೊಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದರು.
ಈ ಹಿಂದೆಯೂ ರಾಜೀನಾಮೆ ಬಗ್ಗೆ ಮಾತನಾಡಿದ್ದ ಹೊರಟ್ಟಿ
ಬಸವರಾಜ್ ಹೊರಟ್ಟಿ ಅವರು ಹಿಂದೆಯೇ ರಾಜೀನಾಮೆ ಮಾತನಾಡಿದ್ದರು. ಇತ್ತೀಚೆಗೆ ಮೇಲ್ಮನೆಯಲ್ಲಿ ಸಭಾಪತಿ ಹೊರಟ್ಟಿಯವರ ವಿರುದ್ಧವೇ ಅವಿಶ್ವಾಸ ಗೊತ್ತುವಳಿ ಮಂಡಿಸಲು ಕಾಂಗ್ರೆಸ್ ಸಜ್ಜಾಗಿತ್ತು. ಆಗಲೇ ಈ ಬಗ್ಗೆ ಎದ್ದಿದ್ದ ಊಹಾಪೋಹಗಳ ಬಗ್ಗೆ ಮಾತನಾಡಿದ್ದ ಹೊರಟ್ಟಿಯವರು, ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದರೆ, ಅದಕ್ಕೂ ಮುನ್ನವೇ ನಾನೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ. ನಾನು ಹಿಂದೆ ಮೇಷ್ಟ್ರು ಆಗಿದ್ದವನು. ಅಲ್ಲಿಂದ ಇಲ್ಲಿಯವರೆಗೆ ಸಾಗಿ ಬಂದಿದ್ದೇನೆ. ನನ್ನ ಈ ಸಾಧನೆಯ ಬಗ್ಗೆ ತೃಪ್ತಿಯಿದೆ. ಹಾಗಾಗಿ, ಯಾವುದೇ ಕ್ಷಣದಲ್ಲಿ ಸಭಾಪತಿ ಸ್ಥಾನ ತ್ಯಜಿಸುವ ಸಂದರ್ಭ ಬಂದರೆ ಖಂಡಿತವಾಗಿಯೂ ಆ ಸ್ಥಾನ ತ್ಯಜಿಸಿ ಮತ್ತೆ ನನ್ನ ಶಿಕ್ಷಕ ವೃತ್ತಿಗೆ ಹೋಗುತ್ತೇನೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!