ಕೇಂದ್ರ ಸರ್ಕಾರ ಹೊಸ ಆಧಾರ್ ಆ್ಯಪ್ ಬಿಡುಗಡೆ; ಇನ್ಮುಂದೆ ಭೌತಿಕ ಕಾರ್ಡ್ ಬೇಕಿಲ್ಲ

ನವದೆಹಲಿ: ಕೇಂದ್ರ ಸರ್ಕಾರ ಹೊಸ ಆಧಾರ್ ಆ್ಯಪ್ ಬಿಡುಗಡೆ ಮಾಡಿದೆ. ಇಲ್ಲಿ ಬಳಕೆದಾರರು ತಮ್ಮ ಆಧಾರ್ ಮಾಹಿತಿಯನ್ನು ಯಾವುದೇ ಭೌತಿಕ ಗುರುತಿನ ಚೀಟಿಯ ಅಗತ್ಯವಿಲ್ಲದೆ, ಡಿಜಿಟಲ್ ರೂಪದಲ್ಲಿ ಪರಿಶೀಲಿಸಲು ಅವಕಾಶವಿದೆ.
ಈ ಹೊಸ ಅಪ್ಲಿಕೇಶನ್ ಕುರಿತು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿಪೂರ್ಣ ವೀಡಿಯೋ ಹಂಚಿಕೊಂಡಿದ್ದಾರೆ. ವೀಡಿಯೋದಲ್ಲಿ ಫೇಸ್ ಐಡಿ ದೃಢೀಕರಣ, ಲಾಗಿನ್ ಮಾಡಲು ಕ್ಯೂ ಆರ್ ಕೋಡ್ ಸ್ಕ್ಯಾನ್ ಮತ್ತು ಬಳಕೆದಾರರ ಐಡಿ ಹಂಚಿಕೊಳ್ಳುವಂತಹ ವೈಶಿಷ್ಟ್ಯಗಳನ್ನು ನೋಡಬಹುದು.
ಸದ್ಯ ಆ್ಯಪ್ ಬೀಟಾ ಹಂತದಲ್ಲಿದೆ. ಈ ಆ್ಯಪ್ ಆಧಾರ್ ಪರಿಶೀಲನೆಯನ್ನು ಸರಳಗೊಳಿಸಲಿದೆ. ದುರುಪಯೋಗ ತಡೆಯುತ್ತದೆ. ಮತ್ತು ಬಳಕೆದಾರರ ಗೌಪ್ಯತೆಯನ್ನು ಕಾಪಾಡುತ್ತದೆ. ಮತ್ತೊಂದು ವಿಶೇಷವೆಂದರೆ, ಅಪ್ಲಿಕೇಶನ್ ಬಳಕೆದಾರಸ್ನೇಹಿಯಾಗಿದ್ದು, ಫೇಸ್ ಗುರುತಿನಂತಹ ವೈಶಿಷ್ಟ್ಯ ಹೊಂದಿದೆ. ಇದರಿಂದ ಯಾವುದೇ ಭೌತಿಕ ಪ್ರತಿಯ ಅಗತ್ಯವಿಲ್ಲದೆ ಬಳಕೆದಾರರು ತಮ್ಮ ಆಧಾರ್ ವಿವರಗಳನ್ನು ಸುರಕ್ಷಿತವಾಗಿ ಹಂಚಿಕೊಳ್ಳಬಹುದು. ಇದರಿಂದ ಆಧಾರ್ ಕಾರ್ಡ್ ಅನ್ನು ಎಲ್ಲೆಡೆ ಒಯ್ಯುವುದು ತಪ್ಪುತ್ತದೆ.


ಹೊಸ ಆ್ಯಪ್ ನ ವೈಶಿಷ್ಟ್ಯಗಳು
• ಬಳಕೆದಾರರು ತಮ್ಮ ಒಪ್ಪಿಗೆಯೊಂದಿಗೆ ಅಗತ್ಯ ಡೇಟಾವನ್ನು ಸುರಕ್ಷಿತವಾಗಿ ಹಂಚಿಕೊಳ್ಳಬಹುದು. ಇದು ವೈಯಕ್ತಿಕ ಮಾಹಿತಿಯ ಗೌಪ್ಯತೆಯನ್ನು ಖಚಿತಪಡಿಸುತ್ತದೆ.
• ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಆಧಾರ್ ಪರಿಶೀಲನೆ ಮಾಡಬಹುದು.
• ಮುದ್ರಿತ ಆಧಾರ್ ಪ್ರತಿಗಳನ್ನು ಎಲ್ಲೆಡೆ ಕೊಂಡೊಯ್ಯುವ ಅವಶ್ಯಕತೆ ಇರುವುದಿಲ್ಲ.
• ಭದ್ರತೆ ಖಚಿತತೆಗೆ ಫೇಸ್ ಐಡಿ ದೃಢೀಕರಣ
• ಬಳಕೆದಾರರು ತಮ್ಮ ಭೌತಿಕ ಆಧಾರ್ ಪ್ರತಿಗಳನ್ನು ಸಲ್ಲಿಸುವ ಅಗತ್ಯವಿಲ್ಲದೆ ಡಿಜಿಟಲ್ ಮೂಲಕ ಪರಿಶೀಲಿಸಬಹುದು.
• ಫೇಸ್ ಐಡಿ ದೃಢೀಕರಣವು ಶೇ 100ರಷ್ಟು ಡಿಜಿಟಲ್ ಸುರಕ್ಷತೆಯನ್ನು ಖಚಿತಪಡಿಸುತ್ತದೆ.
• ಡೇಟಾ ಸೋರಿಕೆ ಮತ್ತು ದುರುಪಯೋಗ ಆಗದಂತೆ, ನಕಲಾಗದಂತೆ ತಡೆಯುತ್ತದೆ.
• ತ್ವರಿತ ಮತ್ತು ಸುಲಭವಾದ ಪರಿಶೀಲನಾ ಪ್ರಕ್ರಿಯೆಯನ್ನು ಸಕ್ರಿಯಗೊಳಿಸುತ್ತದೆ.
ಸದ್ಯ ಆಯ್ದ ಗುಂಪುಗಳ ಬಳಕೆದಾರರಿಗೆ ಆ್ಯಪ್ ಲಭ್ಯವಾಗುವಂತೆ ಮಾಡಲಾಗಿದೆ. ಇದರಲ್ಲಿ ಆಧಾರ್ ಸಂವಾದ್ ಕಾರ್ಯಕ್ರಮದ ಎಲ್ಲಾ ನೋಂದಾಯಿತರು ಸೇರಿದ್ದಾರೆ. ಯುಐಡಿಎಐ ಪ್ರಕಾರ, ಬೀಟಾ ಆವೃತ್ತಿಯು ಅಪ್ಲಿಕೇಶನ್ನ ಅಂತಿಮ ಬಿಡುಗಡೆಯ ಫೀಡ್ಬ್ಯಾಕ್ ಸಂಗ್ರಹಿಸಿ, ಅದನ್ನು ಮತ್ತಷ್ಟು ಉತ್ತಮಗೊಳಿಸಲಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!