ಕೌನ್ ಬನೇಗಾ ಕರೋಡ್ಪತಿಯಲ್ಲಿ ಬಾಗಲಕೋಟೆಯ ಬಡ ಯುವಕ 50 ಲಕ್ಷ ಗೆದ್ದ..!

ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ. ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಿ ಯಾರು ಹೆಚ್ಚು ಉತ್ತರ ನೀಡುತ್ತಾರೊ ಅವರಿಗೆ ಬಹುಮಾನವಾಗಿ ಲಕ್ಷಾಂತರ ಹಣ ನೀಡಲಾಗುತ್ತದೆ. ಈ ಶೋನಲ್ಲಿ ಭಾಗವಹಿಸಿದ್ದ ಬಾಗಲಕೋಟೆಯ ಬಡ ಯುವಕ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾರೆ.
ಜ್ಞಾನವೇ ಎಲ್ಲದಕ್ಕಿಂತಲೂ ಮಿಗಿಲಾದ ಐಶ್ವರ್ಯಾ ಎಂಬ ಮಾತಿದೆ. ಕೇವಲ ಜ್ಞಾನದಿಂದಲೇ ಬಡ ಕಾರ್ಮಿಕನ ಮಗನೊಬ್ಬ ಈಗ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ತನ್ನ ಕುಟುಂಬಕ್ಕೆ ಆಧಾರವಾಗಿದ್ದಾನೆ. ಬಡ ವೆಲ್ಡರ್ ಕಾರ್ಮಿಕನ ಮಗನೊಬ್ಬ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್ಪತಿಯಲ್ಲಿ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ಅಷ್ಟಕ್ಕೂ ಈ ಯುವಕ ಬೇರೆ ಯಾವುದೋ ರಾಜ್ಯದವನಲ್ಲ. ನಮ್ಮದೇ ಕರ್ನಾಟಕದ ಬಾಗಲಕೋಟೆಯವನು.
ಬಾಗಲಕೋಟೆಯ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣದ ಯುವಕ ರಮ್ಜಾನ್ ಮಲಿಕ್ ಬಾಬ್ ಫೀರಜಾದೆ, ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಬಲು ಜನಪ್ರಿಯ ಟಿವಿ ಶೋ ಕೌನ್ ಬನೇಗಾ ಕರೋಡ್ಪತಿಯಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ಕೊನೆಯ ಹಂತದ ವರೆಗೆ ಏರಿದ ಅವರು ಒಂದರ ಮೇಲೊಂದು ಪ್ರಶ್ನೆಗಳಿಗೆ ಉತ್ತರ ನೀಡುತ್ತಾ, 50 ಲಕ್ಷ ರೂಪಾಯಿ ಗೆದ್ದು ಬಂದಿದ್ದಾರೆ.
ಯುವಕ ರಮ್ಜಾನ್ ಮಲ್ಲಿಕ್ ಅವರ ತಂದೆ ಮಹಾಲಿಂಗಪುರದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಾರೆ. ರಮ್ಜಾನ್ ಸಹ ತಂದೆಗೆ ಸಹಾಯ ಮಾಡುತ್ತಿದ್ದರು. ಬಡ ಕುಟುಂಬವಾದ್ದರಿಂದ ಕುಟುಂಬಕ್ಕೆ ಸಹಾಯ ಮಾಡಲು ಚಹಾ ಅಂಗಡಿಯಲ್ಲಿ ಲೊಟ ತೊಳೆಯುವ ಕೆಲಸ. ಬ್ಯಾಡ್ಮಿಂಟನ್ ಕೋರ್ಟ್ನ ವಾಚ್ಮ್ಯಾನ್ ಹೀಗೆ ಹಲವು ರೀತಿಯ ಚಿಕ್ಕ ಪುಟ್ಟ ಕೆಲಸ ಮಾಡುತ್ತಾ ಬಿಎ ಮುಗಿಸಿದ್ದಾರೆ. ಇದೀಗ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ. ಹೀಗಿರುವಾಗ ಕೌನ್ ಬನೇಗಾ ಕರೋಡ್ಪತಿಗೆ ಅರ್ಜಿ ಹಾಕಿದ್ದ ರಮ್ಜಾನ್ಗೆ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ದೊರಕಿದೆ.
ಈ ಅವಕಾಶವನ್ನು ಸದುಪಯೋಗ ಪಡೆಸಿಕೊಂಡಿರುವ ರಮ್ಜಾನ್, ರಿಯಾಲಿಟಿ ಶೋನಲ್ಲಿ ಅದ್ಭುತವಾಗಿ ಆಡಿ, ಅಮಿತಾಬ್ ಬಚ್ಚನ್ ಕೇಳಿದ ಬಹುತೇಕ ಎಲ್ಲ ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ 50 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದಾರೆ. ಅಸಲಿಗೆ ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದ್ದರೆ ಒಂದು ಕೋಟಿ ರೂಪಾಯಿ ಹಣ ಸಿಕ್ಕಿರುತ್ತಿತ್ತು. ಆದರೆ ಆ ಪ್ರಶ್ನೆಯ ಉತ್ತರದ ಮೇಲೆ ಅನುಮಾನ ಇದ್ದ ಕಾರಣ ರಮ್ಜಾನ್ ಅವರು ಆಟದಿಂದ ನಿವೃತ್ತಿ ಹೊಂದಿ 50 ಲಕ್ಷ ರೂಪಾಯಿ ಹಣವನ್ನು ಗೆದ್ದು ಬೀಗಿದ್ದಾರೆ.
ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮದಲ್ಲಿ ಗೆದ್ದು ಬಂದ ರಮ್ಜಾನ್ ಅವರನ್ನು ಊರ ಜನ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ಹಾರ ತುರಾಯಿ ಹಾಕಿ ಊರಿನಲ್ಲಿ ಮೆರವಣಿಗೆ ಮಾಡಿದ್ದಾರೆ. ರಮ್ಜಾನ್, ಕೌನ್ ಬನೇಗಾ ಕರೋಡ್ಪತಿಯಲ್ಲಿ ಗೆದ್ದು ‘ಸ್ಲಂ ಡಾಗ್ ಮಿಲೇನಿಯರ್’ ಕತೆಯನ್ನು ನಿಜ ಮಾಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!