ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿದ್ದ ‘ಪಾತಾಳ್ ಲೋಕ್ 2’ ವೆಬ್ ಸಿರೀಸ್ ಟೀಸರ್ ಬಿಡುಗಡೆ…

ಹಿಂದಿ ವೆಬ್ ಸಿರೀಸ್ಗಳ ಪೈಕಿ ‘ಪಾತಾಳ್ ಲೋಕ್’ ಸೃಷ್ಟಿಸಿದ ಕ್ರೇಜ್ ದೊಡ್ಡದು. ಈಗ ಇದರ ಎರಡನೇ ಸೀಸನ್ ಬರುತ್ತಿದೆ. ‘ಪಾತಾಳ್ ಲೋಕ್ 2’ ಟೀಸರ್ ಬಿಡುಗಡೆ ಆಗಿದೆ. ಈ ಟೀಸರ್ ಮೂಲಕ ಹೈಪ್ ಜಾಸ್ತಿ ಆಗಿದೆ. ‘ಅಮೇಜಾನ್ ಪ್ರೈಂ ವಿಡಿಯೋ’ ಮೂಲಕ ಬಿಡುಗಡೆ ಆಗಲಿರುವ ಈ ವೆಬ್ ಸರಣಿಯಲ್ಲಿ ಡಾರ್ಕ್ ಕಹಾನಿ ಇರಲಿದೆ.

2020ರಲ್ಲಿ ‘ಪಾತಾಳ್ ಲೋಕ್’ ವೆಬ್ ಸರಣಿ ಬಿಡುಗಡೆ ಆಗಿತ್ತು. ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿದ್ದ ಆ ವೆಬ್ ಸಿರೀಸ್ ನೋಡಿ ವೀಕ್ಷಕರು ಫಿದಾ ಆಗಿದ್ದರು. ಅನುಷ್ಕಾ ಶರ್ಮಾ ನಿರ್ಮಾಣ ಮಾಡಿದ್ದ ‘ಪಾತಾಳ್ ಲೋಕ್’ ವೆಬ್ ಸಿರೀಸ್ನಲ್ಲಿ ಜೈದೀಪ್ ಅಹಲಾವತ್ ಅವರು ಪ್ರಮುಖ ಪಾತ್ರ ಮಾಡಿದ್ದರು. ‘ಪಾತಾಳ್ ಲೋಕ್’ ಸೂಪರ್ ಹಿಟ್ ಆದ ಬಳಿಕ ಅದಕ್ಕೆ ಸೀಕ್ವೆಲ್ ಬರಲಿದೆ ಎಂದು ಕೂಡ ಹೇಳಲಾಗಿತ್ತು. ಅದಕ್ಕಾಗಿ ವೀಕ್ಷಕರು ಕಾದಿದ್ದರು. ಈಗ ಗುಡ್ ನ್ಯೂಸ್ ಸಿಕ್ಕಿದೆ. ‘ಪಾತಾಳ್ ಲೋಕ್ 2’ ವೆಬ್ ಸರಣಿಯ ಟೀಸರ್ ಬಿಡುಗಡೆ ಆಗಿದೆ.
ಇಂದು (ಜನವರಿ 3) ‘ಪಾತಾಳ್ ಲೋಕ್ 2’ ಟೀಸರ್ ರಿಲೀಸ್ ಆಗಿದ್ದು, ಸಖತ್ ಸದ್ದು ಮಾಡುತ್ತಿದೆ. ಮೊದಲ ಸೀಸನ್ ಭಾರಿ ಸಕ್ಸಸ್ ಕಂಡಿದ್ದರಿಂದ 2ನೇ ಸೀಸನ್ ಮೇಲೆ ಈ ಪರಿ ಕ್ರೇಜ್ ಸೃಷ್ಟಿ ಆಗಿದೆ. ಈ ಬಾರಿ ಕೂಡ ನಟ ಜೈದೀಪ್ ಅಹಲಾವತ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಟೀಸರ್ನಲ್ಲಿ ಅವರು ಹೊಸ ಕಥೆಯ ಕಿರುಪರಿಚಯ ಮಾಡಿಕೊಟ್ಟಿದ್ದಾರೆ.
‘ಒಂದು ಹಳ್ಳಿಯಲ್ಲಿ ಒಬ್ಬ ವ್ಯಕ್ತಿ ಇದ್ದ. ಅವನಿಗೆ ಕೀಟಗಳನ್ನು ಕಂಡರೆ ಆಗುತ್ತಿರಲಿಲ್ಲ. ಒಂದು ದಿನ ಆತ ಒಂದು ಕೀಟವನ್ನು ಸಾಯಿಸಿದ. ರಾತ್ರೋರಾತ್ರಿ ಅವನು ಹೀರೋ ಆಗಿಬಿಟ್ಟ. ಮರುದಿನ ಆತನಿಗೆ ಊರಿನವರೆಲ್ಲ ಸನ್ಮಾನ ಮಾಡಿದರು. ಮುಂದಿನ ಹಲವು ರಾತ್ರಿಗಳು ಅವನು ಬಹಳ ನೆಮ್ಮದಿಯಿಂದ ನಗುನಗುತ್ತಾ ನಿದ್ರೆ ಮಾಡಿದ. ಆದರೆ ಒಂದು ರಾತ್ರಿ ಅವನ ಮಂಚದ ಕೆಳಗೆ ಏನೂ ಹರಿದಾಡಿದಂತೆ ಕಾಣಿಸಿತು. ಮೊದಲು ಒಂದು ಕೀಟ ಇತ್ತು. ಆಮೇಲೆ 10 ಆಯಿತು. ಬಳಿಕ ಸಾವಿರ, ಲಕ್ಷ, ಕೋಟಿ ಆಯಿತು. ಪಾಪ ಅವನು ಒಂದು ಕೀಟವನ್ನು ಸಾಯಿಸಿ ಸಮಸ್ಯೆ ಮುಗಿಯಿತು ಎಂದುಕೊಂಡಿದ್ದ. ಆದರೆ ಪಾತಾಳ್ ಲೋಕದಲ್ಲಿ ಆ ರೀತಿ ಆಗುವುದಿಲ್ಲ’ ಎಂದು ‘ಪಾತಾಳ್ ಲೋಕ್ 2’ ಕಥೆಯ ಬಗ್ಗೆ ಟೀಸರ್ನಲ್ಲಿ ಇಂಟ್ರಡಕ್ಷನ್ ನೀಡಲಾಗಿದೆ.
ಜನವರಿ 17ರಿಂದ ‘ಅಮೇಜಾನ್ ಪ್ರೈಂ ವಿಡಿಯೋ’ ಒಟಿಟಿಯಲ್ಲಿ ‘ಪತಾಳ್ ಲೋಕ್ 2’ ವೆಬ್ ಸಿರೀಸ್ ಪ್ರಸಾರ ಆರಂಭ ಆಗಲಿದೆ. ಜೈದೀಪ್ ಅಹಲಾವತ್ ಅವರ ಪ್ರಭುದ್ಧ ನಟನೆಯನ್ನು ನೋಡಲು ಫ್ಯಾನ್ಸ್ ಉತ್ಸುಕರಾಗಿದ್ದಾರೆ. ಟೀಸರ್ ನೋಡಿ ಎಲ್ಲರೂ ಪಾಸಿಟಿವ್ ಆಗಿ ಕಮೆಂಟ್ ಮಾಡುತ್ತಿದ್ದಾರೆ. ಗುಲ್ ಪನಾಕ್, ತಿಲೋತ್ತಮಾ ಶೋಮೆ ಮುಂತಾದವರು ಕೂಡ ಈ ವೆಬ್ ಸರಣಿಯಲ್ಲಿ ನಟಿಸಿದ್ದಾರೆ. ಟೀಸರ್ನಲ್ಲಿ ಹಿನ್ನೆಲೆ ಸಂಗೀತ ಗಮನ ಸೆಳೆಯುತ್ತಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!