ಗಂಡನ ಕಿರುಕುಳ ತಾಳಲಾರದೆ ನೇ*ಗೆ ಶರಣಾದ ವಿವಾಹಿತೆ.!

ತಿರುವನಂತಪುರ: ಕೇರಳದ ಮಲಪ್ಪುರಂನಲ್ಲಿ ಮಹಿಳೆಯೊಬ್ಬಳು ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯಲ್ಲಿ ಗಂಡ ಪ್ರಭಿನ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಸಾವಿನ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಂಜೇರಿ ಪೊಲೀಸರು, ಮಹಿಳೆಯ ಗಂಡ ಪ್ರಭಿನ್‌ನನ್ನು ಬಂಧಿಸಿದ್ದಾರೆ. ಗುರುವಾರ ಪೂಕ್ಕೋಟ್ಟುಂಪಾಡಂ ಮೂಲದ ವಿಷ್ಣುಜಾ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. 2023ರ ಮೇ ತಿಂಗಳಲ್ಲಿ ವಿಷ್ಣುಜಾ ಮತ್ತು ಎಳಂಕೂರು ಮೂಲದ ಪ್ರಭಿನ್‌ರ ವಿವಾಹ ನೆರವೇರಿತ್ತು. ಗಂಡನ ಕಿರುಕುಳದಿಂದಲೇ ಮಗಳ ಸಾವು ಆಗಿದೆ ಎಂದು ವಿಷ್ಣುಜಾ ಕುಟುಂಬ ಗಂಭೀರ ಆರೋಪವನ್ನು ಮಾಡಿದೆ. ಆದರೆ ಈ ಆರೋಪವನ್ನು ಪ್ರಭಿನ್ ಕುಟುಂಬ ನಿರಾಕರಿಸಿದೆ. ಪ್ರಭಿನ್ ಮತ್ತು ವಿಷ್ಣುಜಾ ನಡುವೆ ಕೆಲವು ಭಿನ್ನಾಭಿಪ್ರಾಯಗಳಿದ್ದವು. ಇದಕ್ಕೆ ಕಾರಣ ತಿಳಿದಿಲ್ಲ ಎಂದು ಪ್ರಭಿನ್ ಕುಟುಂಬ ಹೇಳಿದೆ. ವರದಕ್ಷಿಣೆ ಕೇಳಿಲ್ಲ ಅಥವಾ ಪಡೆದಿಲ್ಲ ಎಂದು ಪ್ರಭಿನ್ ಕುಟುಂಬಸ್ಥರು ಆರೋಪಿಸಿದ್ದಾರೆ.

ಗಂಡನ ಮನೆಯಲ್ಲಿ ಮಗಳಿಗೆ ತೀವ್ರ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು. ಮದುವೆಯಾದ ಕೆಲವು ವಾರಗಳಲ್ಲೇ ಪ್ರಭಿನ್ ಕಿರುಕುಳ ನೀಡಲು ಪ್ರಾರಂಭಿಸಿದ. ಕೆಲಸವಿಲ್ಲದ ಕಾರಣಕ್ಕೆ ಕಿರುಕುಳ ನೀಡಲಾಗುತ್ತಿತ್ತು. ತಂದೆ-ತಾಯಿಗೆ ತೊಂದರೆ ಕೊಡಬಾರದು ಎಂದು ಮಗಳು ಎಲ್ಲವನ್ನೂ ಮುಚ್ಚಿಟ್ಟಳು. ಮಗಳನ್ನು ಬೈಯ್ಯುವ ವಾಯ್ಸ್ ನೋಟ್‌ಗಳು ನನ್ನ ಬಳಿ ಇವೆ. ದೈಹಿಕವಾಗಿಯೂ ಮಗಳಿಗೆ ಕಿರುಕುಳ ನೀಡಲಾಗುತ್ತಿತ್ತು, ಮಗಳ ದೇಹದ ಮೇಲಿನ ಗಾಯಗಳ ಬಗ್ಗೆ ಆಕೆಯ ಗೆಳತಿ ಹೇಳಿದ್ದಳು ಎಂದು ವಿಷ್ಣುಜಾಳ ತಂದೆ ತಿಳಿಸಿದ್ದಾರೆ.
ಅನ್ನಭಾಗ್ಯ ಅಕ್ಕಿಯಲ್ಲಿ ದೊಡ್ಡ ಸ್ಕ್ಯಾಮ್ ಇದೆ MLA, ಸಚಿವರ ಪಟಾಲಂ ಈ ದಂಧೆಯಲ್ಲಿ ತೊಡಗಿದೆ.!
ಸೌಂದರ್ಯ ಕಡಿಮೆ, ಕೆಲಸವಿಲ್ಲ, ವರದಕ್ಷಿಣೆ ಕಡಿಮೆ ಎಂದು ಹೇಳಿ ವಿಷ್ಣುಜಾಳಿಗೆ ಗಂಡ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬ ಆರೋಪಿಸಿದೆ. ಇದಕ್ಕೆಲ್ಲ ಗಂಡನ ಸಂಬಂಧಿಕರು ಸಹಕರಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಗಂಡ ಮತ್ತು ಆತನ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯುವತಿಯ ಕುಟುಂಬ ಒತ್ತಾಯಿಸಿತ್ತು. ಇದರ ಬೆನ್ನಲ್ಲೇ ಮಂಜೇರಿ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!