ಗಂಡನ ಕಿರುಕುಳ ತಾಳಲಾರದೆ ನೇ*ಗೆ ಶರಣಾದ ವಿವಾಹಿತೆ.!

ತಿರುವನಂತಪುರ: ಕೇರಳದ ಮಲಪ್ಪುರಂನಲ್ಲಿ ಮಹಿಳೆಯೊಬ್ಬಳು ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯಲ್ಲಿ ಗಂಡ ಪ್ರಭಿನ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಸಾವಿನ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಂಜೇರಿ ಪೊಲೀಸರು, ಮಹಿಳೆಯ ಗಂಡ ಪ್ರಭಿನ್‌ನನ್ನು ಬಂಧಿಸಿದ್ದಾರೆ. ಗುರುವಾರ ಪೂಕ್ಕೋಟ್ಟುಂಪಾಡಂ ಮೂಲದ ವಿಷ್ಣುಜಾ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. 2023ರ ಮೇ ತಿಂಗಳಲ್ಲಿ ವಿಷ್ಣುಜಾ ಮತ್ತು ಎಳಂಕೂರು ಮೂಲದ ಪ್ರಭಿನ್‌ರ ವಿವಾಹ ನೆರವೇರಿತ್ತು. ಗಂಡನ ಕಿರುಕುಳದಿಂದಲೇ ಮಗಳ ಸಾವು ಆಗಿದೆ ಎಂದು ವಿಷ್ಣುಜಾ ಕುಟುಂಬ ಗಂಭೀರ ಆರೋಪವನ್ನು ಮಾಡಿದೆ. ಆದರೆ ಈ ಆರೋಪವನ್ನು ಪ್ರಭಿನ್ ಕುಟುಂಬ ನಿರಾಕರಿಸಿದೆ. ಪ್ರಭಿನ್ ಮತ್ತು ವಿಷ್ಣುಜಾ ನಡುವೆ ಕೆಲವು ಭಿನ್ನಾಭಿಪ್ರಾಯಗಳಿದ್ದವು. ಇದಕ್ಕೆ ಕಾರಣ ತಿಳಿದಿಲ್ಲ ಎಂದು ಪ್ರಭಿನ್ ಕುಟುಂಬ ಹೇಳಿದೆ. ವರದಕ್ಷಿಣೆ ಕೇಳಿಲ್ಲ ಅಥವಾ ಪಡೆದಿಲ್ಲ ಎಂದು ಪ್ರಭಿನ್ ಕುಟುಂಬಸ್ಥರು ಆರೋಪಿಸಿದ್ದಾರೆ.

ಗಂಡನ ಮನೆಯಲ್ಲಿ ಮಗಳಿಗೆ ತೀವ್ರ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು. ಮದುವೆಯಾದ ಕೆಲವು ವಾರಗಳಲ್ಲೇ ಪ್ರಭಿನ್ ಕಿರುಕುಳ ನೀಡಲು ಪ್ರಾರಂಭಿಸಿದ. ಕೆಲಸವಿಲ್ಲದ ಕಾರಣಕ್ಕೆ ಕಿರುಕುಳ ನೀಡಲಾಗುತ್ತಿತ್ತು. ತಂದೆ-ತಾಯಿಗೆ ತೊಂದರೆ ಕೊಡಬಾರದು ಎಂದು ಮಗಳು ಎಲ್ಲವನ್ನೂ ಮುಚ್ಚಿಟ್ಟಳು. ಮಗಳನ್ನು ಬೈಯ್ಯುವ ವಾಯ್ಸ್ ನೋಟ್‌ಗಳು ನನ್ನ ಬಳಿ ಇವೆ. ದೈಹಿಕವಾಗಿಯೂ ಮಗಳಿಗೆ ಕಿರುಕುಳ ನೀಡಲಾಗುತ್ತಿತ್ತು, ಮಗಳ ದೇಹದ ಮೇಲಿನ ಗಾಯಗಳ ಬಗ್ಗೆ ಆಕೆಯ ಗೆಳತಿ ಹೇಳಿದ್ದಳು ಎಂದು ವಿಷ್ಣುಜಾಳ ತಂದೆ ತಿಳಿಸಿದ್ದಾರೆ.
ಅನ್ನಭಾಗ್ಯ ಅಕ್ಕಿಯಲ್ಲಿ ದೊಡ್ಡ ಸ್ಕ್ಯಾಮ್ ಇದೆ MLA, ಸಚಿವರ ಪಟಾಲಂ ಈ ದಂಧೆಯಲ್ಲಿ ತೊಡಗಿದೆ.!
ಸೌಂದರ್ಯ ಕಡಿಮೆ, ಕೆಲಸವಿಲ್ಲ, ವರದಕ್ಷಿಣೆ ಕಡಿಮೆ ಎಂದು ಹೇಳಿ ವಿಷ್ಣುಜಾಳಿಗೆ ಗಂಡ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬ ಆರೋಪಿಸಿದೆ. ಇದಕ್ಕೆಲ್ಲ ಗಂಡನ ಸಂಬಂಧಿಕರು ಸಹಕರಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಗಂಡ ಮತ್ತು ಆತನ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯುವತಿಯ ಕುಟುಂಬ ಒತ್ತಾಯಿಸಿತ್ತು. ಇದರ ಬೆನ್ನಲ್ಲೇ ಮಂಜೇರಿ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!