ಚೆಸ್ನಲ್ಲಿ ಭಾರತ ಕ್ಕೆ ಮತ್ತೊಂದು ಮೈಲಿಗಲ್ಲು ; 37 ವರ್ಷದ ಕೊನೇರು ಹಂಪಿ ವಿಶ್ವ ಚಾಂಪಿಯನ್.

ನ್ಯೂಯಾರ್ಕ್: ಭಾರತದ ಗ್ರ್ಯಾಂಡ್ಮಾಸ್ಟರ್ ಕೊನೇರು ಹಂಪಿ ಅವರು ಇಂಡೋನೇಷ್ಯಾದ ಐರಿನ್ ಸುಕಂದರ್ ಅವರನ್ನು ಮಣಿಸಿ ಮಹಿಳಾ ವಿಶ್ವ ರ್ಯಾಪಿಡ್ ಚೆಸ್ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ 37 ವರ್ಷದ ಕೊನೇರು ಹಂಪಿ ಅವರು ಚೀನಾದ ಜು ವೆನ್ಜುನ್ ಬಳಿಕ ಮಹಿಳೆಯರ ವಿಭಾಗದಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಪ್ರಶಸ್ತಿ ಗೆದ್ದ ಎರಡನೇ ಚೆಸ್ ಆಟಗಾರ್ತಿಯಾಗಿದ್ದಾರೆ.
ಭಾನುವಾರ ನ್ಯೂಯಾರ್ಕ್ನಲ್ಲಿ ನಡೆದ ಪಂದ್ಯಾವಳಿಯ ಫೈನಲ್ನಲ್ಲಿ 11 ಅಂಕಗಳಲ್ಲಿ 8.5 ಅಂಕಗಳನ್ನು ಕಲೆ ಹಾಕುವ ಮೂಲಕ ಅಗ್ರಸ್ಥಾನ ಗಳಿಸಿದರು. 2019ರಲ್ಲಿ ಜಾರ್ಜಿಯಾದಲ್ಲಿ ನಡೆದ ಟೂರ್ನಿಯಲ್ಲೂ ಕೊನೇರು ಅವರು ಪ್ರಶಸ್ತಿ ಗೆದ್ದಿದ್ದರು. ಅದರ ನಂತರ ಇದು ಅವರ ಎರಡನೇ ಗೆಲುವಾಗಿದೆ.

ಭಾರತದ ಮಟ್ಟಕ್ಕೆ ಕೊನೇರು ಹಂಪಿ ಅವರ ಈ ಗೆಲುವು ಚೆಸ್ನಲ್ಲಿ ಐತಿಹಾಸಿಕ ಮೈಲಿಗಲ್ಲಾಗಿದೆ. ಡಿಂಗ್ ಲಿರೆನ್ ಅವರನ್ನು ಸೋಲಿಸಿ, ಭಾರತದ ಡಿ.ಗುಕೇಶ್ ಅವರು ಚಾಂಪಿಯನ್ ಆಗಿ ಹೊರಹೊಮ್ಮಿದ ಎರಡು ವಾರದಲ್ಲಿ ಕೊನೇರು ಹಂಪಿ ಅವರು ಚಾಂಪಿಯನ್ ಪಟ್ಟ ಅಲಂಕರಿಸಿರುವುದು ಭಾರತಕ್ಕೆ ಹೆಮ್ಮೆಯ ವಿಷಯವಾಗಿದೆ. ಡಿ.ಗುಕೇಶ್ ಅವರು, ವಿಶ್ವನಾಥನ್ ಆನಂದ್ ಬಳಿಕ ಟೂರ್ನಮೆಂಟ್ ಗೆದ್ದ ಎರಡನೇ ಭಾರತೀಯರಾಗಿದ್ದಾರೆ. ಜೊತೆಗೆ ವಿಶ್ವ ಚೆಸ್ ಚಾಂಪಿಯನ್ ಕಿರೀಟ ಗೆದ್ದ ಅತಿ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಈ ಸಾಧನೆಗಳ ಹೊರತಾಗಿ, ಕೊನೇರು ಹಂಪಿ ಅವರು 2022ರ ಮಹಿಳಾ ವಿಶ್ವ ಬ್ಲಿಟ್ಜ್ ಚೆಸ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಮತ್ತು 2024ರಲ್ಲಿ ಮಹಿಳಾ ಅಭ್ಯರ್ಥಿಗಳ ಪಂದ್ಯಾವಳಿಯಲ್ಲಿ ಎರಡನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!