ಜೀವಂತ ಕೋಳಿ ನುಂಗಿ ಪ್ರಾಣ ಕಳೆದುಕೊಂಡ ವ್ಯಕ್ತಿ.

ಸುರ್ಗುಜಾ: ಮಾಟಗಾರನ ಸಲಹೆಯಂತೆ ಜೀವಂತ ಕೋಳಿ ನುಂಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ಸುರ್ಗುಜಾದಲ್ಲಿ ನಡೆದಿದೆ.
ಛಿಂದಕಲೊ ಗ್ರಾಮದ ಆನಂದ್ ಕುಮಾರ್ ಯಾದವ್ ಸಾವನ್ನಪ್ಪಿದ ವ್ಯಕ್ತಿ. ಗಂಡು ಮಗುವಿಗೆ ಹಪಹಪಿಸುತ್ತಿದ್ದ ಈತ ತಾಂತ್ರಿಕ್ (ಮಾಟಗಾರ)ವೊಬ್ಬನ ಮೊರೆ ಹೋಗಿದ್ದಾನೆ. ಆಗ ಆತ ಜೀವಂತ ಕೋಳಿಯನ್ನು ನುಂಗಲು ಸಲಹೆ ನೀಡಿದ್ದಾನೆ. ಅದರನುಸಾರ ಡಿಸೆಂಬರ್ 14ರಂದು ಆನಂದ್, ಜೀವಂತ ಕೋಳಿ ತಿಂದು ಪ್ರಜ್ಞೆ ತಪ್ಪಿ, ಕುಸಿದು ಬಿದ್ದಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಕ್ಷಣಕ್ಕೆ ಆತನನ್ನು ಅಂಬಿಕಪುರ್ನಲ್ಲಿನ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಅಚ್ಚರಿ ವ್ಯಕ್ತಪಡಿಸಿದರು. ಆತನ ಎಲ್ಲಾ ಅಂಗಾಂಗಗಳನ್ನು ಪರೀಕ್ಷಿಸಿದಾಗ ಯಾವುದೇ ವೈದ್ಯಕೀಯ ಸಮಸ್ಯೆ ಕಂಡುಬಂದಿರಲಿಲ್ಲ. ಬಳಿಕ ಕುತ್ತಿಗೆ ಸೀಳಿದಾಗ ಜೀವಂತ ಕೋಳಿ ಸಿಲುಕಿರುವುದು ಗೊತ್ತಾಯಿತು. ಆನಂದ್ನ ಶ್ವಾಸನಾಳ ಮತ್ತು ಅನ್ನನಾಳದಲ್ಲಿ ಕೋಳಿ U ಆಕಾರದಲ್ಲಿ ಸಿಲುಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಗಂಟಲಿನಲ್ಲಿ ಕೋಳಿ ಸಿಲುಕಿ ನುಂಗಲು ಸಾಧ್ಯವಾಗದೇ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಪೊಲೀಸರಿಗೆ ತಿಳಿಸಿದ್ದಾರೆ.
ಎಎಸ್ಪಿ ಅಮೊಲಕ್ ಸಿಂಗ್ ದಿಲೊನ್ ಮಾತನಾಡಿ, “ಅಂತಿಮ ಮರಣೋತ್ತರ ಪರೀಕ್ಷಾ ವರದಿಗೆ ಕಾಯುತ್ತಿದ್ದೇವೆ. ಇದು ಜನರಲ್ಲಿರುವ ಮೌಢ್ಯದ ಅಭ್ಯಾಸಗಳು ಮತ್ತು ಅದರಿಂದ ಎದುರಾಗುವ ಅಪಾಯವನ್ನು ತೋರಿಸುತ್ತಿದೆ” ಎಂದರು.
“ಆನಂದ್ ಕೋಳಿ ನುಂಗಿರುವ ಕುರಿತು ನಮಗೆ ತಿಳಿದಿಲ್ಲ. ಈ ಬಗ್ಗೆ ಯಾವ ಸುಳಿವು ಕೂಡಾ ನಮಗಿಲ್ಲ” ಕುಟುಂಬಸ್ಥರು ಪ್ರತಿಕ್ರಿಯಿಸಿದ್ದಾರೆ. ಆದರೆ ಸ್ಥಳೀಯರ ಪ್ರಕಾರ, ಆನಂದ್ ಗಂಡು ಮಗುವಿಗಾಗಿ ಹಪಹಪಿಸುತ್ತಿದ್ದ. ಇದೇ ಕಾರಣಕ್ಕೆ ಈ ರೀತಿಯ ಮೌಢ್ಯಕ್ಕೆ ಬಲಿಯಾಗಿದ್ದಾನೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!