ಜೀವಂತ ಕೋಳಿ ನುಂಗಿ ಪ್ರಾಣ ಕಳೆದುಕೊಂಡ ವ್ಯಕ್ತಿ.

ಸುರ್ಗುಜಾ: ಮಾಟಗಾರನ ಸಲಹೆಯಂತೆ ಜೀವಂತ ಕೋಳಿ ನುಂಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ಸುರ್ಗುಜಾದಲ್ಲಿ ನಡೆದಿದೆ.
ಛಿಂದಕಲೊ ಗ್ರಾಮದ ಆನಂದ್ ಕುಮಾರ್ ಯಾದವ್ ಸಾವನ್ನಪ್ಪಿದ ವ್ಯಕ್ತಿ. ಗಂಡು ಮಗುವಿಗೆ ಹಪಹಪಿಸುತ್ತಿದ್ದ ಈತ ತಾಂತ್ರಿಕ್ (ಮಾಟಗಾರ)ವೊಬ್ಬನ ಮೊರೆ ಹೋಗಿದ್ದಾನೆ. ಆಗ ಆತ ಜೀವಂತ ಕೋಳಿಯನ್ನು ನುಂಗಲು ಸಲಹೆ ನೀಡಿದ್ದಾನೆ. ಅದರನುಸಾರ ಡಿಸೆಂಬರ್ 14ರಂದು ಆನಂದ್, ಜೀವಂತ ಕೋಳಿ ತಿಂದು ಪ್ರಜ್ಞೆ ತಪ್ಪಿ, ಕುಸಿದು ಬಿದ್ದಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಕ್ಷಣಕ್ಕೆ ಆತನನ್ನು ಅಂಬಿಕಪುರ್ನಲ್ಲಿನ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಅಚ್ಚರಿ ವ್ಯಕ್ತಪಡಿಸಿದರು. ಆತನ ಎಲ್ಲಾ ಅಂಗಾಂಗಗಳನ್ನು ಪರೀಕ್ಷಿಸಿದಾಗ ಯಾವುದೇ ವೈದ್ಯಕೀಯ ಸಮಸ್ಯೆ ಕಂಡುಬಂದಿರಲಿಲ್ಲ. ಬಳಿಕ ಕುತ್ತಿಗೆ ಸೀಳಿದಾಗ ಜೀವಂತ ಕೋಳಿ ಸಿಲುಕಿರುವುದು ಗೊತ್ತಾಯಿತು. ಆನಂದ್ನ ಶ್ವಾಸನಾಳ ಮತ್ತು ಅನ್ನನಾಳದಲ್ಲಿ ಕೋಳಿ U ಆಕಾರದಲ್ಲಿ ಸಿಲುಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಗಂಟಲಿನಲ್ಲಿ ಕೋಳಿ ಸಿಲುಕಿ ನುಂಗಲು ಸಾಧ್ಯವಾಗದೇ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಪೊಲೀಸರಿಗೆ ತಿಳಿಸಿದ್ದಾರೆ.
ಎಎಸ್ಪಿ ಅಮೊಲಕ್ ಸಿಂಗ್ ದಿಲೊನ್ ಮಾತನಾಡಿ, “ಅಂತಿಮ ಮರಣೋತ್ತರ ಪರೀಕ್ಷಾ ವರದಿಗೆ ಕಾಯುತ್ತಿದ್ದೇವೆ. ಇದು ಜನರಲ್ಲಿರುವ ಮೌಢ್ಯದ ಅಭ್ಯಾಸಗಳು ಮತ್ತು ಅದರಿಂದ ಎದುರಾಗುವ ಅಪಾಯವನ್ನು ತೋರಿಸುತ್ತಿದೆ” ಎಂದರು.
“ಆನಂದ್ ಕೋಳಿ ನುಂಗಿರುವ ಕುರಿತು ನಮಗೆ ತಿಳಿದಿಲ್ಲ. ಈ ಬಗ್ಗೆ ಯಾವ ಸುಳಿವು ಕೂಡಾ ನಮಗಿಲ್ಲ” ಕುಟುಂಬಸ್ಥರು ಪ್ರತಿಕ್ರಿಯಿಸಿದ್ದಾರೆ. ಆದರೆ ಸ್ಥಳೀಯರ ಪ್ರಕಾರ, ಆನಂದ್ ಗಂಡು ಮಗುವಿಗಾಗಿ ಹಪಹಪಿಸುತ್ತಿದ್ದ. ಇದೇ ಕಾರಣಕ್ಕೆ ಈ ರೀತಿಯ ಮೌಢ್ಯಕ್ಕೆ ಬಲಿಯಾಗಿದ್ದಾನೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!