ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ರಿಲೀಸ್ ಯಶ್ ಲುಕ್ ಹೇಗಿದೆ?

ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದಂದು ವಿಶೇಷ ಉಡುಗೊರೆ ಕೊಡೋದಾಗಿ ‘ಟಾಕ್ಸಿಕ್’ ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಅಂತೆಯೇ ಇಂದು ಬೆಳಿಗ್ಗೆ 10 ಗಂಟೆ 25 ನಿಮಿಷಕ್ಕೆ ‘ಟಾಕ್ಸಿಕ್’ ಗ್ಲಿಂಪ್ಸ್ ರಿಲೀಸ್ ಆಗಿದೆ. ಯಶ್ ಅವರ ಚಿತ್ರದ ಮೇಲಿರುವ ನಿರೀಕ್ಷೆ ಈಗ ದ್ವಿಗುಣವಾಗಿದೆ.
ನಟ ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚುವಂತೆ ಆಗಿದೆ. ಅದಕ್ಕೆ ಕಾರಣ ಆಗಿರೋದು ಈ ಚಿತ್ರದ ಗ್ಲಿಂಪ್ಸ್. ಬರ್ತ್ಡೇ ಪ್ರಯುಕ್ತ ಚಿತ್ರದ ಮೊದಲ ಗ್ಲಿಂಪ್ಸ್ ಬಿಡುಗಡೆ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಜನವರಿ 8 ಯಶ್ ಜನ್ಮದಿನ. ಈ ಪ್ರಯುಕ್ತ ಚಿತ್ರದ ಬಗ್ಗೆ ಅಪ್ಡೇಟ್ ಕೊಡೋದಾಗಿ ತಂಡದವರು ಮೊದಲೇ ಹೇಳಿದ್ದರು. ಅದರಂತೆಯೇ ‘ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದೆ. ಇದು ಗಮನ ಸೆಳೆಯುತ್ತಿದೆ.

ಯಶ್ ಅವರು ಕ್ಲಾಸಿ ಲುಕ್ನಲ್ಲಿ ಕ್ಲಬ್ ಒಂದಕ್ಕೆ ಎಂಟ್ರಿ ಕೊಡುತ್ತಾರೆ. ಅವರು ಎಂಟ್ರಿ ಕೊಡೋದು ವಿಂಟೇಜ್ ಕಾರಿನಲ್ಲಿ. ಈ ಲುಕ್ನ ಈ ಮೊದಲೇ ಪೋಸ್ಟರ್ನಲ್ಲಿ ರಿಲೀಸ್ ಮಾಡಲಾಗಿತ್ತು. ಯಶ್ ಅವರ ಲುಕ್ ಈಗ ಗಮನ ಸೆಳೆಯುತ್ತಿದೆ.
‘ಟಾಕ್ಸಿಕ್’ ಚಿತ್ರದ ಬಗ್ಗೆ ಯಾವುದೇ ಹಿಂಟ್ ಕೊಡದ ರೀತಿಯಲ್ಲಿ ಈ ಚಿತ್ರದ ಗ್ಲಿಂಪ್ಸ್ ಮೂಡಿ ಬಂದಿದೆ. ಈ ಸಿನಿಮಾ ಈ ವರ್ಷಾಂತ್ಯಕ್ಕೆ ತೆರೆಗೆ ಬರಲಿದೆ. ಹೀಗಾಗಿ ಈಗಲೇ ಹೆಚ್ಚಿನ ವಿಚಾರ ರಿವೀಲ್ ಮಾಡೋದು ಬೇಡ ಎಂಬ ನಿರ್ಧಾರಕ್ಕೆ ತಂಡ ಬಂದಂತಿದೆ
‘ಟಾಕ್ಸಿಕ್’ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಅವರು ದೊಡ್ಡ ಬಜೆಟ್ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಾ ಇದ್ದಾರೆ
ಯಶ್ ಎಂಟ್ರಿ ಕೊಡೋ ಕ್ಲಬ್ನಲ್ಲಿ ದೊಡ್ಡ ಮಟ್ಟದಲ್ಲಿ ಪಾರ್ಟಿ ನಡೆಯುತ್ತಾ ಇರುತ್ತದೆ. ಈ ಪಾರ್ಟಿಯಲ್ಲಿ ಯಶ್ ಕೂಡ ಭಾಗಿ ಆಗುತ್ತಾರೆ. ಆ ಬಳಿಕ ಅವರು ಪಾರ್ಟಿಯಲ್ಲಿ ಎಂಜಾಯ್ ಮಾಡುತ್ತಾರೆ. ಹುಡುಗಿಯ ಮೇಲೆ ಎಣ್ಣೆ ಸುರಿಯುತ್ತಾರೆ.

‘ಟಾಕ್ಸಿಕ್’ ಚಿತ್ರದಲ್ಲಿ ಹಿಂದಿಯ ಕಿಯಾರಾ ಅಡ್ವಾಣಿ, ತಮಿಳಿನ ನಯನತಾರಾ ನಟಿಸುತ್ತಿದ್ದಾರೆ. ಈ ಸಿನಿಮಾ ವರ್ಷಾಂತ್ಯಕ್ಕೆ ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಡ್ರಗ್ಸ್ ಬಗ್ಗೆ ಇರಲಿದೆ ಎಂದು ಹೇಳಲಾಗುತ್ತಿದೆ. ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!