ಟೆಸ್ಟ್ ಕ್ರಿಕೆಟ್ಗೆ ಕಿಂಗ್ ಕೊಹ್ಲಿ ವಿದಾಯ….

2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ್ದ ವಿರಾಟ್ ಕೊಹ್ಲಿ, 2014 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ ಅವರು ಹಿಂತಿರುಗಿ ನೋಡಿಲ್ಲ ಎನ್ನಬಹುದು. ಟೀಮ್ ಇಂಡಿಯಾ ಪರ 123 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು 210 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 16608 ಎಸೆತಗಳನ್ನು ಎದುರಿಸಿರುವ ಕೊಹ್ಲಿ ಅವರು 46.9 ಸರಾಸರಿಯಲ್ಲಿ ಒಟ್ಟು 9230 ರನ್ ಕಲೆಹಾಕಿದ್ದಾರೆ. ಇದರ ನಡುವೆ 30 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ. ಮತ್ತೊಂದು ಮೈಲಿಗಲ್ಲೆಂದರೆ , ಟೆಸ್ಟ್ ಕ್ರಿಕೆಟ್ ನಲ್ಲಿ 254 ಅವರ ವೈಯಕ್ತಿಕ ಗರಿಷ್ಠ ಸ್ಕೋರ್ ಆಗಿದೆ.

ಹಾಗೆಯೇ ಭಾರತ ಟೆಸ್ಟ್ ತಂಡವನ್ನು 68 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 40 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಕೇವಲ 17 ಮ್ಯಾಚ್ಗಳಲ್ಲಿ ಮಾತ್ರ ಸೋಲನುಭವಿಸಿದೆ. ಇನ್ನು 11 ಪಂದ್ಯಗಳಲ್ಲಿ ಭಾರತ ತಂಡವು ಡ್ರಾ ಸಾಧಿಸಿದೆ. ಈ ಮೂಲಕ ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.
ಇದೀಗ 14 ವರ್ಷಗಳ ತಮ್ಮ ಟೆಸ್ಟ್ ಕೆರಿಯರ್ಗೆ ವಿರಾಮ ಇಟ್ಟಿರುವ ಕಿಂಗ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ಅವರ ನಿವೃತ್ತಿ ಪತ್ರ:

ಟೆಸ್ಟ್ ಕ್ರಿಕೆಟ್ನಲ್ಲಿ ಮೊದಲ ಬಾರಿಗೆ ಬ್ಯಾಗಿ ಬ್ಲೂ ಕ್ಯಾಪ್ ಧರಿಸಿ 14 ವರ್ಷಗಳು ಕಳೆದಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸ್ವರೂಪವು ನನ್ನನ್ನು ಈ ಪ್ರಯಾಣಕ್ಕೆ ಕರೆದೊಯ್ಯುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಇದು ನನ್ನನ್ನು ಪರೀಕ್ಷಿಸಿದೆ, ನನ್ನನ್ನು ರೂಪಿಸಿದೆ ಮತ್ತು ನಾನು ಜೀವನಪರ್ಯಂತ ಸಾಗಿಸುವ ಪಾಠಗಳನ್ನು ಕಲಿಸಿದೆ.

ಬಿಳಿಯ ಉಡುಪಿನಲ್ಲಿ ಆಡುವುದರಲ್ಲಿ ಆಳವಾದ ವೈಯಕ್ತಿಕ ಅಂಶವಿದೆ. ಶಾಂತವಾದ ಜಂಜಾಟ, ದೀರ್ಘ ದಿನಗಳು, ಯಾರೂ ನೋಡದ ಸಣ್ಣ ಕ್ಷಣಗಳು. ಇವೆಲ್ಲವೂ ನಿಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತವೆ. ನಾನು ಈ ಸ್ವರೂಪದಿಂದ ದೂರ ಸರಿಯುತ್ತಿರುವುದು ಸುಲಭದ ನಿರ್ಧಾರವಲ್ಲ. ಆದರೆ ಇದುವೇ ಸರಿ ಎಂದು ಅನಿಸುತ್ತದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!