ಟೆಸ್ಟ್ ಕ್ರಿಕೆಟ್ಗೆ ಕಿಂಗ್ ಕೊಹ್ಲಿ ವಿದಾಯ….

2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ್ದ ವಿರಾಟ್ ಕೊಹ್ಲಿ, 2014 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ ಅವರು ಹಿಂತಿರುಗಿ ನೋಡಿಲ್ಲ ಎನ್ನಬಹುದು. ಟೀಮ್ ಇಂಡಿಯಾ ಪರ 123 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು 210 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 16608 ಎಸೆತಗಳನ್ನು ಎದುರಿಸಿರುವ ಕೊಹ್ಲಿ ಅವರು 46.9 ಸರಾಸರಿಯಲ್ಲಿ ಒಟ್ಟು 9230 ರನ್ ಕಲೆಹಾಕಿದ್ದಾರೆ. ಇದರ ನಡುವೆ 30 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ. ಮತ್ತೊಂದು ಮೈಲಿಗಲ್ಲೆಂದರೆ , ಟೆಸ್ಟ್ ಕ್ರಿಕೆಟ್ ನಲ್ಲಿ 254 ಅವರ ವೈಯಕ್ತಿಕ ಗರಿಷ್ಠ ಸ್ಕೋರ್ ಆಗಿದೆ.

ಹಾಗೆಯೇ ಭಾರತ ಟೆಸ್ಟ್ ತಂಡವನ್ನು 68 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 40 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಕೇವಲ 17 ಮ್ಯಾಚ್ಗಳಲ್ಲಿ ಮಾತ್ರ ಸೋಲನುಭವಿಸಿದೆ. ಇನ್ನು 11 ಪಂದ್ಯಗಳಲ್ಲಿ ಭಾರತ ತಂಡವು ಡ್ರಾ ಸಾಧಿಸಿದೆ. ಈ ಮೂಲಕ ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.
ಇದೀಗ 14 ವರ್ಷಗಳ ತಮ್ಮ ಟೆಸ್ಟ್ ಕೆರಿಯರ್ಗೆ ವಿರಾಮ ಇಟ್ಟಿರುವ ಕಿಂಗ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ಅವರ ನಿವೃತ್ತಿ ಪತ್ರ:

ಟೆಸ್ಟ್ ಕ್ರಿಕೆಟ್ನಲ್ಲಿ ಮೊದಲ ಬಾರಿಗೆ ಬ್ಯಾಗಿ ಬ್ಲೂ ಕ್ಯಾಪ್ ಧರಿಸಿ 14 ವರ್ಷಗಳು ಕಳೆದಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸ್ವರೂಪವು ನನ್ನನ್ನು ಈ ಪ್ರಯಾಣಕ್ಕೆ ಕರೆದೊಯ್ಯುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಇದು ನನ್ನನ್ನು ಪರೀಕ್ಷಿಸಿದೆ, ನನ್ನನ್ನು ರೂಪಿಸಿದೆ ಮತ್ತು ನಾನು ಜೀವನಪರ್ಯಂತ ಸಾಗಿಸುವ ಪಾಠಗಳನ್ನು ಕಲಿಸಿದೆ.

ಬಿಳಿಯ ಉಡುಪಿನಲ್ಲಿ ಆಡುವುದರಲ್ಲಿ ಆಳವಾದ ವೈಯಕ್ತಿಕ ಅಂಶವಿದೆ. ಶಾಂತವಾದ ಜಂಜಾಟ, ದೀರ್ಘ ದಿನಗಳು, ಯಾರೂ ನೋಡದ ಸಣ್ಣ ಕ್ಷಣಗಳು. ಇವೆಲ್ಲವೂ ನಿಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತವೆ. ನಾನು ಈ ಸ್ವರೂಪದಿಂದ ದೂರ ಸರಿಯುತ್ತಿರುವುದು ಸುಲಭದ ನಿರ್ಧಾರವಲ್ಲ. ಆದರೆ ಇದುವೇ ಸರಿ ಎಂದು ಅನಿಸುತ್ತದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!