ಡಿಸಿಎಂ ಡಿಕೆ ಶಿವಕುಮಾರ್ ಜತೆ ಬಹಿರಂಗ ಚರ್ಚೆಗೆ ಸಿದ್ಧ:ತೇಜಸ್ವಿ ಸೂರ್ಯ

ಬೆಂಗಳೂರಿನ ಸುರಂಗ ಮಾರ್ಗ ಯೋಜನೆ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಕಾಂಗ್ರೆಸ್ ನಡುವೆ ವಾಗ್ವಾದ ತೀವ್ರಗೊಂಡಿದೆ. ಯೋಜನೆ ಭ್ರಷ್ಟಾಚಾರದಿಂದ ಕೂಡಿದ್ದು, ಬೆಂಗಳೂರಿಗೆ ಅದರ ಅಗತ್ಯವೇ ಇಲ್ಲ ಎಂದು ಸೂರ್ಯ ಪ್ರತಿಪಾದಿಸಿದರೆ, ಕಾಂಗ್ರೆಸ್ ಯೋಜನೆಯ ಪ್ರಯೋಜನಗಳನ್ನು ಪ್ರತಿಪಾದಿಸುತ್ತಿದೆ. ಈ ಮಧ್ಯೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಸೂರ್ಯ ಸವಾಲು ಹಾಕಿದ್ದಾರೆ.

ಬೆಂಗಳೂರು, ಜುಲೈ 17: ಬೆಂಗಳೂರಿನಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಆಡಳಿತರೂಢ ಕಾಂಗ್ರೆಸ್ನಡುವಣ ವಾಕ್ಸಮರ ತೀವ್ರಗೊಂಡಿದೆ. ಯೋಜನೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ, ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ತೇಜಸ್ವಿ ಸೂರ್ಯ ಎರಡು ದಿನಗಳ ಹಿಂದೆ ಆರೋಪಿಸಿದ್ದರು. ಅಲ್ಲದೆ, ಯೋಜನೆ ಹೇಗೆ ಸಾಧಕವಲ್ಲ ಎಂಬುದನ್ನು ವಿವರವಾಗಿ ಪತ್ರಿಕಾಗೋಷ್ಠಿ ಮೂಲಕ ಬಹಿರಂಗಪಡಿಸಿದ್ದರು.

ಅದಕ್ಕೆ ತಿರುಗೇಟು ನೀಡಿದ್ದ ಕಾಂಗ್ರೆಸ್, ಯೋಜನೆ ಸಂಬಂಧಿತ ಪ್ರಮುಖ ಸಲಹೆ ಸೂಚನೆಗಳಿಗೆ ಸದಾ ಸ್ವಾಗತವಿದೆ. ಆದರೆ, ಬ್ರಾಂಡ್ ಬೆಂಗಳೂರಿನ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸರಣಿ ಸಂದೇಶ ಪ್ರಕಟಿಸುವ ಮೂಲಕ ತಿರುಗೇಟು ನೀಡಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವ ತೇಜಸ್ವಿ ಸೂರ್ಯ, ಸುರಂಗ ರಸ್ತೆ ಯೋಜನೆಯ ನೇತೃತ್ವ ವಹಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಸಿದ್ಧವಿದ್ದೇನೆ ಎಂದಿದ್ದಾರೆ.

ಸುರಂಗ ರಸ್ತೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ ಮತ್ತು ಸಾರ್ವಜನಿಕ ಚರ್ಚೆಗೆ ನೀವು (ಕಾಂಗ್ರೆಸ್ ಸರ್ಕಾರ) ನಿಜಕ್ಕೂ ಮುಕ್ತರಾಗಿದ್ದರೆ, ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಪ್ರಸ್ತಾಪಿಸುತ್ತಿದ್ದೇನೆ. ಸಮಯ ಮತ್ತು ಸ್ಥಳವನ್ನು ನೀವೇ ನಿಗದಿ ಮಾಡಿ. ಒಳಿತು ಕೆಡುಕುಗಳನ್ನು ಆರೋಗ್ಯಕರ ರೀತಿಯಲ್ಲಿ ಚರ್ಚಿಸುವುದು ಖಂಡಿತವಾಗಿಯೂ ಪ್ರಯೋಜನಕಾರಿಯಾಗಿದೆ. ನಿಮ್ಮಿಂದ ಪ್ರತಿಕ್ರಿಯೆ ನಿರೀಕ್ಷಿಸುತ್ತಿದ್ದೇನೆ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!