ತಮ್ಮ ಮಗಳ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ನೆರವೇರಿಸಿದ ಅದಿತಿ ಪ್ರಭುದೇವ..…

ಚಂದನವನದ ಖ್ಯಾತ ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ ಚಂದ್ರಕಾಂತ್ ಸಖತ್ ಖುಷಿಯಲ್ಲಿದ್ದಾರೆ. ಕಾರಣ ಅವರ ಮಗಳಾದಂತಹ ನೇಸರಾಳ ಮೊದಲ ವರ್ಷದ ಹುಟ್ಟು ಹಬ್ಬದ ಸಂಭ್ರಮ. ದಂಪತಿಗಳಿಬ್ಬರಿಗೂ ಮುದ್ದು ಮಗಳ ಹುಟ್ಟುಹಬ್ಬವನ್ನು ಆಚರಿಸುವುದೇ ಒಂದು ಹಬ್ಬವಾಗಿದೆ.

ಹೌದು, 2022ರಲ್ಲಿ ಉದ್ಯಮಿ ಯಶಸ್ಸು ಚಂದ್ರಕಾಂತ್ ಪಟ್ಲಾ ಅವರನ್ನು ಚಂದನವನದ ಮುದ್ದಾದ ನಟಿ ಅದಿತಿ ಪ್ರಭುದೇವ ವಿವಾಹವಾಗಿದ್ದರು. ಹೊಸ ವರ್ಷದ ದಿನವೇ ಕುಟುಂಬಸ್ಥರಿಗೆ ಹಾಗೂ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ಕೊಟ್ಟಿದ್ದರು. ಇದೀಗ ಆ ಸಂಭ್ರಮವನ್ನು ಆಚರಿಸಲು ಒಂದು ವರ್ಷದ ಮುದ್ದಾದ ಹೆಣ್ಣು ಮಗುವಿದೆ. ಯುಗಾದಿ ಹಬ್ಬದ ದಿನ ಅಂದರೆ ಏಪ್ರಿಲ್ 4ರಂದು ನಟಿ ಅದಿತಿ ಪ್ರಭುದೇವ ಅವರ ಮನೆಗೆ ಮುದ್ದಾದ ಮಗಳ ಆಗಮನವಾಗಿತ್ತು. ಯುಗಾದಿ ಹಬ್ಬದಂದು ತಾಯಿ ಆದ ಖುಷಿಯ ಜೊತೆಗೆ ನಮ್ಮ ಮನೆ ಮಹಾಲಕ್ಷ್ಮಿ ಅಂತಾ ಮಗುವಿನ ಫೋಟೋವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು.

ಇದೀಗ ನಟಿ ಅದಿತಿ ಪ್ರಭುದೇವ ಅವರ ಮುದ್ದಾದ ಮಗಳು ನೇಸರ ಹುಟ್ಟು ಹಬ್ಬದ ಖುಷಿಯಲ್ಲಿದ್ದಾಳೆ. ಮಗಳ ಸಂಭ್ರಮವನ್ನು ಪೋಷಕರು ದುಪ್ಪಟ್ಟು ಮಾಡಿದ್ದಾರೆ. ಅಲ್ಲದೇ ಮಗಳ ಬರ್ತ್ ಡೇಯನ್ನು ಜೆಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್ನಲ್ಲಿ ಸಖತ್ ಗ್ರ್ಯಾಂಡ್ ಆಗಿ ಮಾಡಿದ್ದಾರೆ.ಇನ್ನೂ, ನಿನ್ನೆ ಅದಿತಿ ಪ್ರಭುದೇವ ಮಗಳು ನೇಸರ ಹುಟ್ಟು ಹಬ್ಬಕ್ಕೆ ಸಾಕಷ್ಟು ತಾರೆಯರು ಭಾಗಿಯಾಗಿ ಪಾರ್ಟಿಗೆ ಮೆರಗು ತುಂಬಿದ್ದಾರೆ. ಅದಿತಿ ಪ್ರಭುದೇವ್ ಮಗಳ ಬರ್ತ್ ಡೇಗೆ ನಟಿಯರಾದ ಮಿಲನಾ ನಾಗರಾಜ್ ಹಾಗೂ ಅಮೃತಾ ಅಯ್ಯಂಗಾರ್ ಭಾಗಿಯಾಗಿದ್ದರು. ನೆನಪಿರಲಿ ಪ್ರೇಮ್ ಮತ್ತು ಮಗಳು ಅಮೃತಾ ಕೂಡ ಬಂದಿದ್ದರು ಇಷ್ಟೇ ಅಲ್ಲದೇ ನಟಿ ಮೇಘನಾ ರಾಜ್ ಹಾಗೂ ಮಗ ರಾಯನ್ ರಾಜ್ ಕೂಡ ಭಾಗಿಯಾಗಿ ಖುಷಿಪಟ್ಟಿದ್ದಾರೆ. ಹಿಟ್ಲರ್ ಕಲ್ಯಾಣ ಮಲೈಕಾ ಹಾಗೂ ಗುರುಕಿರಣ್ ಅವರು ಹಾಡು ಹಾಡಿ ಮನರಂಜನೆ ನೀಡಿದ್ದಾರೆ.

ಅವರ ಮಗಳ ಹುಟ್ಟು ಹಬ್ಬದಿಂದ, ಕನ್ನಡ ಚಿತ್ರರಂಗದ ಹಲವಾರು ತಾರೆಗಳು ಬಂದಿರುವುದು ಅವರಿಗೆ ಸಂತೋಷ ದುಪ್ಪಟ್ಟಾದಂತಿದೆ. ಒಟ್ಟಿನಲ್ಲಿ ಮುದ್ದು ಹೆಣ್ಣು ಮಗುವಿನ ಜೀವನ ಸುಂದರವಾಗಿರಲಿ ಎಂದು ಹರಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ತಿಳಿಸಿ ಸಂಭ್ರಮವನ್ನು ಎಲ್ಲರೊಂದಿಗೆ ಹಂಚಿಕೊಂಡಿದ್ದಾರೆ ಹಾಗೂ ಯಶಸ್ ಪಾಟ್ಲ.

 

 

 

 

 

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!