ದಕ್ಷಿಣ ಡೈರಿ ಶೃಂಗಸಭೆ-2025 ರ ‘ಅತ್ಯುತ್ತಮ ಹೈನುಗಾರ್ತಿ’ ಪ್ರಶಸ್ತಿ ಸ್ವೀಕರಿಸಿದ ಪಾಂಡವಪುರದ ರೈತ ಮಹಿಳೆ ಮಂಗಳಮ್ಮ.

ಪಾಂಡವಪುರ :- ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕು ಡಿಂಕ ಗ್ರಾಮದ ಅವಿದ್ಯಾವಂತ ರೈತ ಮಹಿಳೆಯೋರ್ವರು ಹೈನುಗಾರಿಕೆಯಿಂದಲೇ ಸಾಧನೆಗೈದು ಶನಿವಾರ ಬೆಂಗಳೂರಿನಲ್ಲಿ ನಡೆದ ದಕ್ಷಿಣ ಡೈರಿ ಶೃಂಗಸಭೆಯಲ್ಲಿ ‘ಅತ್ಯುತ್ತಮ ಹೈನು ಗಾರ್ತಿ’ ಪ್ರಶಸ್ತಿ ಸ್ವೀಕರಿಸಿದರು.
ಭಾರತೀಯ ಡೈರಿ ಅಸೋಸಿಯೇಷನ್, ದಕ್ಷಿಣ ವಲಯ ಆಯೋಜಿಸಿದ್ದ ದಕ್ಷಿಣ ಡೈರಿ ಶೃಂಗಸಭೆ-2025ರ ಅಂತಿಮ ದಿನವಾದ ಶನಿ ವಾರದಂದು ದಕ್ಷಿಣ ಭಾರತದ ಮಹಿಳಾ ಡೈರಿ ರೈತರ ಶ್ರಮವನ್ನು ಪುರಸ್ಕರಿಸಿ ರಾಜ್ಯವಾರು 2024ರ ‘ಅತ್ಯುತ್ತಮ ಹೈನುಗಾರ್ತಿ’ ಪ್ರಶಸ್ತಿ ಪ್ರದಾನ ಮಾಡಿದ್ದು, ಕರ್ನಾಟಕದಿಂದ ಪಾಂಡವ ಪುರ ತಾಲೂಕಿನ ಡಿಂಕ ಗ್ರಾಮದ ಮಂಗಳಮ್ಮ ಈ ಪ್ರಶಸ್ತಿ ಪಡೆದರೆ, ಆಂಧ್ರಪ್ರದೇಶದಿಂದ ನವೀನಕುಮಾರಿ, ಕೇರಳ ಮತ್ತು ಲಕ್ಷದ್ವೀಪ ದಿಂದ ವಿಧು ರಾಜೀವ್, ತೆಲಂಗಾಣದಿಂದ ಪುಧಾರಿ ಗಂಗವ್ವ ಮತ್ತು ಪುದುಚೇರಿಯಿಂದ ಸೆಲ್ವನಾಯಕಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡ ಲಾಯಿತು. ಈ ಸಮಾರಂಭದಲ್ಲಿ ರಾಜ್ಯದ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಾಧಕ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಪಾಂಡವಪುರ ತಾಲೂಕು ಡಿಂಕ ಗ್ರಾಮದ ಮಹದೇವಪ್ಪ ಅವರ ಪತ್ನಿ ಮಂಗಳಮ್ಮ ಓದಿದ್ದು ಕೇವಲ 5ನೇ ತರಗತಿ. ಆದರೆ ತಮಗಿದ್ದ 2 ಎಕರೆ ಜಮೀನಿನಲ್ಲಿ ವ್ಯವಸಾಯ ಮಾಡುತ್ತಾ ಸುಮಾರು 20 ವರ್ಷಗಳ ಹಿಂದೆ ಒಂದು ಹಸುವನ್ನು ಸಾಕಲಾರಂಭಿಸಿದರು. ನಂತರ ಹಂತ-ಹಂತವಾಗಿ ಈಗ 30 ಹಸು ಗಳಿರುವ ಫಾರಂ ಅನ್ನೇ ತಮ್ಮ ಜಮೀನಿನಲ್ಲಿ ಸ್ಥಾಪಿಸಿದ್ದಾರೆ. ಅಲ್ಲದೇ ಅದೇ ಜಮೀನಿನ
ಪ್ರಶಸ್ತಿ ಸ್ವೀಕರಿಸಿದ ನಂತರ ಡಿಂಕ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಹಾಗೂ ಇನ್ನಿತರರೊಂದಿಗೆ ಬಹುಮಾನ ಚೆಕ್ ಪ್ರದರ್ಶಿಸುತ್ತಿರುವ ಮಂಗಳಮ್ಮಒಂದು ಭಾಗದಲ್ಲಿ ಹಸಿಗಳಿಗೆ ಮೇವು ಬೆಳೆಸುತ್ತಿದ್ದಾರೆ. ಡಿಂಕ ಗ್ರಾಮದ ಹಾಲು ಉತ್ಪಾದಕರ ಸಹ ಕಾರಿ ಸಂಘದ ಸದಸ್ಯರಾಗಿರುವ ಮಂಗಳಮ್ಮ 2024ನೇ ವರ್ಷದಲ್ಲಿ ಡೈರಿಗೆ 1,01,915 ಲೀಟರ್ ಹಾಲು ಸರಬರಾಜು ಮಾಡಿ 33 ಲಕ್ಷ ರೂ. ಆದಾಯ ಗಳಿಸುವ ಮೂಲಕ ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ದಕ್ಷಿಣ ಡೈರಿ ಶೃಂಗಸಭೆಯಲ್ಲಿ ಅತ್ಯುತ್ತಮ ಹೈನುಗಾರ್ತಿ ಪ್ರಶಸ್ತಿ ಪಡೆದಿದ್ದಾರೆ.
ಈಕೆ ಅವಿದ್ಯಾವಂತೆಯಾದರೂ, ಹಾಲು ಮಾರಿದ ಹಣದಲ್ಲೇ ತಮ್ಮ ಪುತ್ರ ದಿನೇಶ್ ನನ್ನು ಐಟಿಐವರೆಗೆ ಓದಿಸಿದ್ದಲ್ಲದೇ, ಪುತ್ರಿ ದಿವ್ಯಾರನ್ನು ಇಂಜಿನಿಯರಿಂಗ್ ಪದವೀಧರೆ ಮಾಡಿದ್ದಾರೆ. ಈಗ ಐಟಿಐ ಓದಿರುವ ದಿನೇಶ್ ಅವರು ತನ್ನ ತಂದೆ ಮತ್ತು ತಾಯಿಗೆ ಹಸುಗಳ ಫಾರಂನಲ್ಲಿ ಸಹಾಯಕರಾಗಿದ್ದು, ಹೈನುಗಾರಿಕೆಯಲ್ಲಿ ತಾಯಿಯ ಜೊತೆ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಡಿಂಕ ಗ್ರಾಮದ ಮಂಗಳಮ್ಮ ಅವರು ತಮ್ಮ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಜಿಲ್ಲೆಯಲ್ಲಿಯೇ ಹೆಚ್ಚು ಪ್ರಮಾಣದ ಹಾಲು ಸರಬರಾಜು ಮಾಡುವ ಮೂಲಕ ಕಳೆದ ವರ್ಷ 33 ಲಕ್ಷ ರೂ. ಸಂಪಾದನೆ ಮಾಡುವ ಮೂಲಕ ಕುಟುಂಬದ ಆರ್ಥಿಕ ಸ್ಥಿತಿ ಉತ್ತಮಪಡಿಸಿಕೊಂಡಿದ್ದು ಮಾತ್ರವಲ್ಲದೆ, ದಕ್ಷಿಣ ಡೈರಿ ಶೃಂಗ ಸಭೆಯಲ್ಲಿ ಪ್ರಶಸ್ತಿ ಪಡೆಯುವ ಮೂಲಕ ಮಂಡ್ಯ ಜಿಲ್ಲೆಗೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಹೆಮ್ಮೆ ಎನಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!