ದಲಿತ ಬಾಲಕಿಯ ಮೇಲೆ *ಗಿಕ ದೌರ್ಜನ್ಯ : 59 ಮಂದಿ ಆರೋಪಿಗಳ – ಪೈಕಿ 57 ಮಂದಿ ಬಂಧನ!

ಪತ್ತನಂತಿಟ್ಟ: ಕೇರಳದ ಪತ್ತಂತಿಟ್ಟ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 59 ಮಂದಿ ಆರೋಪಿಗಳ – ಪೈಕಿ 57 ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ – ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಜನವರಿ 10 ರಂದು ಇಳವುಂತಿಟ್ಟ ಪೊಲೀಸ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾ ದಾಗಿನಿಂದ ಇಲ್ಲಿಯವರೆಗೂ ವಿದೇಶದಲ್ಲಿರುವ ಇಬ್ಬರನ್ನು ಹೊರತುಪಡಿಸಿ ಪಟ್ಟಿಯಲ್ಲಿರುವ ಎಲ್ಲಾ ಆರೋಪಿಗಳನ್ನು ಸಮಗ್ರ ತನಿಖೆಯ ಮೂಲಕ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ವಿ.ಜಿ. ವಿನೋದ್ ಕುಮಾ‌ರ್ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೊನೆಯ ಆರೋಪಿ 25 ವರ್ಷದ ಯುವಕನನ್ನು ಭಾನುವಾರ ಬೆಳಿಗ್ಗೆ ಅವರ ಮನೆಯ ಸಮೀಪದಲ್ಲಿಯೇ ಬಂಧಿಸಲಾಗಿದೆ. ಮಹಿಳಾ ಐಪಿಎಸ್ ಅಧಿಕಾರಿ ಎಸ್ ಅಜಿತಾ ಬೇಗಂ ನೇತೃತ್ವದ ವಿಶೇಷ ತನಿಖಾ ತಂಡವು ಜಿಲ್ಲಾ ಪೊಲೀಸ್ ಮುಖ್ಯಸ್ಥರ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿದೆ.
ಆರೋಪಿಗಳ ಹೇಳಿಕೆ ಆಧರಿಸಿ ಜಿಲ್ಲೆಯ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 30 ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳಲ್ಲಿ ಐವರು ಅಪ್ರಾಪ್ತರು ಕೂಡ ಇದ್ದಾರೆ. ತನಿಖೆ ಪೂರ್ಣ ಗೊಳಿಸಿ ಆದಷ್ಟು ಬೇಗ ದೋಷಾರೋಪ ಪಟ್ಟಿ ಸಲ್ಲಿಸುವುದು ಪೊಲೀಸ್ ತಂಡದ ಉದ್ದೇಶವಾಗಿದೆ ಎಂದು ಅಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪತ್ತನಂತಿಟ್ಟದ ಖಾಸಗಿ ಬಸ್ ನಿಲ್ದಾಣದಲ್ಲಿ ಹಲವು ಆರೋಪಿಗಳು ಬಾಲಕಿಯನ್ನು ಭೇಟಿಯಾ ಗಿದ್ದು, ನಂತರ ಆಕೆಯನ್ನು ವಾಹನಗಳಲ್ಲಿ ವಿವಿಧ ಸ್ಥಳಗಳಿಗೆ ಕರೆದೊಯ್ದು ದೌರ್ಜನ್ಯವೆಸಗಿರುವುದು ಇವರೆಗಿನ ತನಿಖೆಯಿಂದ ತಿಳಿದುಬಂದಿದೆ.
ಕಳೆದ ವರ್ಷ ಹನ್ನೆರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಯುವಕನೊಬ್ಬ ರಾಗ್ನಿಯ ರಬ್ಬರ್ ತೋಟಕ್ಕೆ ಕರೆದೊಯ್ದು ಇತರ ಮೂವರೊಂದಿಗೆ ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವುದು ತನಿಖೆಯಿಂದ ತಿಳಿದುಬಂದಿದೆ.
2024 ರ ಜನವರಿಯಲ್ಲಿ ಕಾರಿನೊಳಗೆ ಮತ್ತು ಪಥನಂತಿಟ್ಟ ಜನರಲ್ ಆಸ್ಪತ್ರೆಯಲ್ಲಿ ನಡೆದ ಘಟನೆಗಳು ಸೇರಿದಂತೆ ಐದು ಸಂದರ್ಭಗಳಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಈಗ 18 ವರ್ಷ ತುಂಬಿರುವ ಯುವತಿ 13 ವರ್ಷದಿಂದ 62 ವ್ಯಕ್ತಿಗಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿ ನಡೆಸಿದ ಕೌನ್ಸೆಲಿಂಗ್‌ನಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಆಕೆಯ ನಡವಳಿಕೆಯಲ್ಲಿ ಗಮನಾರ್ಹ ಬದಲಾವಣೆಗಳ ಸಮಿತಿಗೆ ತಿಳಿಸಿದೆ. ನಂತರ ಸಮಿತಿಯು ಪೊಲೀಸರೆಯೂಚನೆ ನೀಡಿದ್ದು, ತನಿಖೆ ನಡೆಯುತ್ತಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!