
ಸುಪ್ರೀಂ ಕೋರ್ಟ್ ಇಂದು ಒಂದು ಮಹತ್ವದ ತೀರ್ಪನ್ನು ನೀಡಿದೆ. ಸುಪ್ರೀಂ ಕೋರ್ಟ್ ಇಂದು ದೆಹಲಿ-ಎನ್ಸಿಆರ್ ಪ್ರದೇಶದ ಎಲ್ಲಾ ನಾಗರಿಕ ಸಂಸ್ಥೆಗಳು 8 ವಾರಗಳೊಳಗೆ ಪ್ರತಿಯೊಂದು ಬೀದಿ ನಾಯಿಯನ್ನು ಒಟ್ಟುಗೂಡಿಸಿ, ಗೊತ್ತುಪಡಿಸಿದ ನಾಯಿಗಳ ಆಶ್ರಯತಾಣಗಳಿಗೆ ಸ್ಥಳಾಂತರಿಸಬೇಕೆಂದು ನಿರ್ದೇಶಿಸಿದೆ. ದೆಹಲಿಯಲ್ಲಿ ನಾಯಿ ಕಡಿತದಿಂದ ರೇಬೀಸ್ಗೆ ಬಲಿಯಾದ 6 ವರ್ಷದ ಬಾಲಕಿ ಚಾವಿ ಶರ್ಮಾ ಸಾವನ್ನಪ್ಪಿದ ದುರಂತ ಘಟನೆಯ ಬಳಿಕ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಈ ಪ್ರಕರಣದ ವಿಚಾರಣೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿದೆ.

ಯಾವುದೇ ಬೀದಿ ಪ್ರಾಣಿಗಳನ್ನು ತೆಗೆದುಹಾಕದಂತೆ ಅಥವಾ ತಪ್ಪಿಸಿಕೊಳ್ಳದಂತೆ ಖಚಿತಪಡಿಸಿಕೊಳ್ಳಲು ಎಲ್ಲಾ ಆಶ್ರಯಗಳನ್ನು ಸಿಸಿಟಿವಿ ಮೂಲಕ ಮೇಲ್ವಿಚಾರಣೆ ಮಾಡಬೇಕು ಎಂದು ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್ನ ಈ ಕ್ರಮವು ಸಂವಿಧಾನದ 32, 226 ಮತ್ತು 142ನೇ ವಿಧಿಗಳಿಂದ ಬಂದಿದೆ. ಇದು ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸಲು ಮತ್ತು ಅಗತ್ಯ ಕ್ರಮ ತೆಗೆದುಕೊಳ್ಳಲು ಅಧಿಕಾರ ನೀಡುತ್ತದೆ. “ದೆಹಲಿಯ ಬೀದಿಗಳಲ್ಲಿ ನಾಯಿಗಳ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಮಕ್ಕಳು ಬೆಲೆ ತೆರುತ್ತಿದ್ದಾರೆ” ಎಂಬ ಜುಲೈ 28ರ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ಹೇಳಿದೆ. ಈ ವರದಿಯಲ್ಲಿ ವಿಶೇಷವಾಗಿ ಮಕ್ಕಳು ಮತ್ತು ವೃದ್ಧರಿಗೆ ನೂರಾರು ಬೀದಿನಾಯಿಗಳು ಕಚ್ಚಿದ ಘಟನೆಗಳನ್ನು ಉಲ್ಲೇಖಿಸಿತ್ತು.

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ನ ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ವರ್ಷದ ಜನವರಿ ಮತ್ತು ಜೂನ್ ನಡುವೆ ರಾಷ್ಟ್ರ ರಾಜಧಾನಿಯಲ್ಲಿ ಒಟ್ಟು 49 ರೇಬೀಸ್ ಪ್ರಕರಣಗಳು ವರದಿಯಾಗಿವೆ. ಈ ಅವಧಿಯಲ್ಲಿ ರಾಜಧಾನಿಯಲ್ಲಿ 35,198 ಪ್ರಾಣಿ ಕಡಿತದ ಘಟನೆಗಳು ವರದಿಯಾಗಿವೆ. ಹೀಗಾಗಿ, 8 ದಿನಗಳಲ್ಲಿ ಕ್ರಿಯಾ ಯೋಜನೆಯನ್ನು ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ. ಇದೇ ವೇಳೆ ಪ್ರಾಣಿಪ್ರಿಯರನ್ನೂ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ಬಗ್ಗೆ ಮಾತನಾಡುವವರು ಪ್ರಾಣ ಕಳೆದುಕೊಂಡ ಮಕ್ಕಳ ಜೀವವನ್ನು ವಾಪಾಸ್ ಕೊಡುತ್ತಾರಾ? ಎಂದು ಪ್ರ





