ದೇಹ ಛೇದನವಿಲ್ಲದೇ ಮರಣೋತ್ತರ ಪರೀಕ್ಷೆ! ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಇತಿಹಾಸ ಬರೆಯಲಿದೆ ವಿಕ್ಟೋರಿಯಾ ಆಸ್ಪತ್ರೆ.

ರಾಜ್ಯದ ಅತ್ಯಂತ ದೊಡ್ಡ ಸರಕಾರಿ ಆಸ್ಪತ್ರೆ ವಿಕ್ಟೋರಿಯಾದಲ್ಲಿ ಮೃತದೇಹವನ್ನು ಕತ್ತರಿಸದೇ ಶವ ಪರೀಕ್ಷೆ ಮಾಡುವ ಅತ್ಯಾಧುನಿಕ ವಿರ್ಟೋಪಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ.

ವೈದ್ಯಕೀಯ ಶಿಕ್ಷಣ ಇಲಾಖೆಯು ವರ್ಚುವಲ್ ಶವ ಪರೀಕ್ಷೆಯನ್ನು ಪರಿಚಯಿಸುತ್ತಿದೆ. ಈ ಸಂಬಂಧ ಈಗಾಗಲೇ ಟೆಂಡರ್ ಕೂಡ ಕರೆಯಲಾಗಿದ್ದು, ಮುಂದಿನ ಕೆಲವೇ ತಿಂಗಳಲ್ಲಿ ವಿರ್ಟೋಪಿ ಆರಂಭವಾಗಲಿದೆ. ಈ ಮೂಲಕ ಈ ತಂತ್ರಜ್ಞಾನವನ್ನು ಅಳವಡಿಸಿಕೊಂಡ ದಕ್ಷಿಣ ಭಾರತದ ಮೊದಲ ಸರಕಾರಿ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಲಿದೆ.

ವರ್ಚುವಲ್ ಶವಪರೀಕ್ಷೆ ಅಥವಾ ವಿರ್ಟೋಪ್ಪಿ ಎಂದರೆ ದೇಹವನ್ನು ಕತ್ತರಿಸದೆ ತಂತ್ರಜ್ಞಾನದ ಸ್ಕ್ಯಾನ್ ಮೂಲಕ ಮಾಡುವುದಾಗಿದೆ. ವಿರ್ಟೋಪ್ಪಿ (Virtopsy) ಎಂದರೆ ‘ವರ್ಚುವಲ್’ ಮತ್ತು ‘ಶವಪರೀಕ್ಷೆ’ ಸಂಯೋಜಿಸುವ ಪದ. ವಿರ್ಟೋಪ್ಪಿ ಯಂತ್ರವು ಕಂಪ್ಯೂಟೆಡ್ ಟೋಮೊಗ್ರಫಿ (ಸಿಟಿ ಸ್ಕ್ಯಾ ನ್), ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂಆರ್ಐ) ಮುಂತಾದ ಕ್ಲಿನಿಕಲ್
ಮೆಡಿಸಿನ್ನಲ್ಲಿ ಬಳಸಲಾಗುವ ಚಿತ್ರಣ ವಿಧಾನಗಳನ್ನು ಬಳಸಿಕೊಳ್ಳುತ್ತದೆ. ಇಲ್ಲಿ ಸೆರೆಯಾದ ಚಿತ್ರಗಳನ್ನು 3ಡಿ ಚಿತ್ರವನ್ನಾಗಿ ಬದಲಾಯಿಸಲಾಗುತ್ತದೆ. ಇದರ ನಿರ್ಮಾಣಕ್ಕೆ 2 ರಿಂದ 3 ಕೋಟಿ ರೂ. ವೆಚ್ಚವಾಗಲಿದೆ.

ಮೂರು ಕಡೆ ಅಳವಡಿಕೆ: ಬರಿಗಣ್ಣಿನಲ್ಲಿ ಮಾಡುವ ಶವಪರೀಕ್ಷೆಗಳಲ್ಲಿ ಸಣ್ಣ ಮೂಳೆ ಮುರಿತ ಮತ್ತು ಗಾಯ ಗುರುತಿಸುವುದು ಕಷ್ಟ, ಆದರೆ, ವಿಕಿರಣಶಾಸ್ತ್ರದ ಪರೀಕ್ಷೆಯು ಬರಿಗಣ್ಣಿಗೆ ಕಾಣದ ಮುರಿತ ಮತ್ತು ರಕ್ತ ಹೆಪ್ಪುಗಟ್ಟುವಿಕೆಯನ್ನು ಪತ್ತೆ ಮಾಡುತ್ತದೆ. ಅಲ್ಲದೆ, ಮೂಳೆಗಳಲ್ಲಿನ ಕೂದಲ ಗಳನ್ನೂ ಪತ್ತೆ ಹಚ್ಚಲು ಸಹಾಯ ಮಾಡುತ್ತದೆ.

ಈಗಾಗಲೇ ಹೊಸದಿಲ್ಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್), ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆ ಹಾಗೂ ಮೇಘಾಲಯದ ನೀಗ್ರಿಮ್ಸ್ ನಲ್ಲಿ ಈ ತಂತ್ರಜ್ಞಾನ ಅಳವಡಿಸಿಕೊಡಿಸಿಕೊಳ್ಳಲಾಗಿದೆ.
ಮೂರು ಸಾವಿರ ಪರೀಕ್ಷೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ರತಿ ವರ್ಷ ಮೂರು ಸಾವಿರಕ್ಕೂ ಹೆಚ್ಚು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ವರ್ಚುವಲ್ ಮೂಲಕ ತ್ವರಿತವಾಗಿ ಶವ ಪರೀಕ್ಷೆ ನಡೆಸಲು ಸಾಧ್ಯವಾಗಲಿದೆ. ಎಲ್ಲಾ ಶವಪರೀಕ್ಷೆ ಗಳನ್ನು ವರ್ಚುವಲ್ ಆಗಿ ಮಾಡಲು ಸಾಧ್ಯವಿಲ್ಲ. ಸದ್ಯಕ್ಕೆ ರಸ್ತೆ ಅಪಘಾತ ಮತ್ತೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಪ್ರಕರಣಗಳಲ್ಲಿ ಮಾತ್ರ ಈ ಶವಪರೀಕ್ಷೆ ಮಾಡಲು ಉದ್ದೇಶಿಸಲಾಗಿದೆ.

ಹೊಸ ತಂತ್ರಜ್ಞಾನ ಬಂದರೂ ಸಾಂಪ್ರದಾಯಿಕ ಶವಪರೀಕ್ಷೆಯನ್ನು ಸಂಪೂರ್ಣವಾಗಿ ಬದಲಾಯಿಸಲು ಸಾಧ್ಯವಿಲ್ಲ. ನೈಸರ್ಗಿಕ ಸಾವುಗಳು ಅಥವಾ ವಿಷಪೂರಿತ ಪ್ರಕರಣಗಳ ಸಂದರ್ಭದಲ್ಲಿ ಹಿಸ್ಟೋಪಾಥೋಲಾಜಿಕಲ್ ಪರೀಕ್ಷೆಗಾಗಿ ಅಂಗಾಂಶ ಹೊರತೆಗೆಯಬೇಕಾಗುತ್ತದೆ. ಹೃದಯಾಘಾತದ ಸಂದರ್ಭದಲ್ಲಿ ಮರಣೋತ್ತರ ಆಂಜಿಯೋಗ್ರಾಮ್ ಮಾಡಬೇಕಾಗುತ್ತದೆ. ಆದರೆ, ದೇಹದ ಭಾಗವನ್ನು ಕಡಿಮೆ ಪ್ರಮಾಣದಲ್ಲಿ ಕತ್ತರಿಸಿದರೆ ಸಾಕಾಗುತ್ತದೆ. ಕೊಲೆ, ಆತ್ಮಹತ್ಯೆ ಪ್ರಕರಣಗಳಲ್ಲಿ ಸಾಂಪ್ರದಾಯಿಕ ಶವ ಪರೀಕ್ಷೆಯ ವಿಧಾನದ ಅಗತ್ಯವಿರುತ್ತದೆ,” ಎನ್ನುತ್ತಾರೆ ವೈದ್ಯಕೀಯ ತಜ್ಞರು,

ವಿರ್ಟೋಪ್ಪಿ ಉಪಯೋಗವೇನು?

 ವರ್ಚುವಲ್ ಶವ ಪರೀಕ್ಷೆ ಎನ್ನುವುದು ಮರಣೋತ್ತರ ಪರೀಕ್ಷೆಯ ಹೊಸ ತಂತ್ರವಾಗಿದ್ದು, ಇದರಲ್ಲಿ ದೇಹವನ್ನು ಕತ್ತರಿಸುವುದಿಲ್ಲ.
 ಮರಣೋತ್ತರ ಪರೀಕ್ಷೆಯನ್ನು ಹೈಟೆಕ್ ಡಿಜಿಟಲ್ ಎಕ್ಸ್-ರೇ ಮತ್ತು ಸಿಟಿ ಸ್ಕ್ಯಾನ್ ಬಳಸಿ ಮಾಡಲಾಗುತ್ತದೆ.
 ಮರಣೋತ್ತರ ಪರೀಕ್ಷೆಯ ಸಾಂಪ್ರದಾಯಿಕ ವಿಧಾನಕ್ಕೆ ಹೋಲಿಸಿದರೆ ಈ ತಂತ್ರಕ್ಕೆ ಕಡಿಮೆ ಸಮಯ ಸಾಕು.
 ಈ ನವೀನ ವಿಧಾನದಿಂದ ಮೂಳೆಗಳಲ್ಲಿನ ಕೂದಲಿನಷ್ಟು ಸೂಕ್ಷ್ಮ ಮುರಿತ ಪತ್ತೆ ಹಚ್ಚಲು ಸಾಧ್ಯವಾಗುತ್ತದೆ.
 ವಿರ್ಟೋಪ್ಪಿ ಮಾಡಿದ ಸಂಶೋಧನೆಗಳನ್ನು ಎಕ್ಸ್-ರೇ ಫಿಲ್ಮಗಳ ರೂಪದಲ್ಲಿ ದಾಖಲಿಸಬಹುದು. ಅದನ್ನು ನ್ಯಾಯಾಲಯದಲ್ಲಿ ಸಾಕ್ಷ್ಯವಾಗಿ ಬಳಸಬಹುದು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು