ನಟ ಧನುಷ್ ಪರವಾಗಿ ಕೋರ್ಟ್ನಲ್ಲಿ ತೀರ್ಪು:ನಯನಾತಾರಾಗೆ ಭಾರೀ ಹಿನ್ನಡೆ!

ನಟಿ ನಯನತಾರ ಮತ್ತು ನಟ ಧನುಷ್ ಇಬ್ಬರು ಸಹ ಭಾರತೀಯ ಚಿತ್ರರಂಗದ ಸ್ಟಾರ್ CC ಹಾಗೂ ನಟಿಯರು. ಇಬ್ಬರೂ ಸಹ ದಶಕಗಳಿಂದ ಚಿತ್ರರಂಗದಲ್ಲಿದ್ದಾರೆ. ಇಬ್ಬರಿಗೂ ದೊಡ್ಡ ಸಂಖ್ಯೆಯ ಅಭಿಮಾನಿ ವರ್ಗ ಇದೆ. ಧನುಷ್ ಅವರು ಕೋರ್ಟ್ನಲ್ಲಿ ಹಕ್ಕುಸ್ವಾಮ್ಯ ಅರ್ಜಿ ಸಲ್ಲಿಕೆ ಮಾಡಿದ್ದರು. ಈಗ ಅವರ ಪರವಾಗಿ ದೊಡ್ಡ ತೀರ್ಪು ಹೊರ ಬಂದಿದೆ.ನಟಿ ನಯನತಾರಾ ಅವರು ತಮ್ಮ ವಿವಾಹ ಡಾಕ್ಯುಮೆಂಟರಿಗೆ ‘ನಾನುಂ ರೌಡಿ ದಾನ್’ ಚಿತ್ರದ ದೃಶ್ಯವನ್ನು ಒಪ್ಪಿಗೆ ಇಲ್ಲದೆ ಬಳಕೆ ಮಾಡಿಕೊಂಡಿದ್ದರು. ಈ ಸಂಬಂಧ ಧನುಷ್ ಅವರು ಕೋರ್ಟ್ನಲ್ಲಿ ಹಕ್ಕುಸ್ವಾಮ್ಯ ಅರ್ಜಿ ಸಲ್ಲಿಕೆ ಮಾಡಿದ್ದರು.
ಈ ಡಾಕ್ಯುಮೆಂಟರಿ ಪ್ರಸಾರ ಮಾಡಿದ್ದ ‘ನೆಟ್ಫ್ಲಿಕ್ಸ್ ಇಂಡಿಯಾ’ ಅರ್ಜಿಯನ್ನು ರದ್ದು ಮಾಡುವಂತೆ ಕೋರಿ ಮದ್ರಾಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ಈ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದೆ. ಕಳೆದ ನವೆಂಬರ್ ತಿಂಗಳಲ್ಲಿ ನಯನತಾರಾ, ಅವರ ಪತಿ ವಿಘ್ನೇಶ್ ಶಿವನ್ ಹಾಗೂ ಇವರ ನಿರ್ಮಾಣ ಸಂಸ್ಥೆ ‘ರೌಡಿ ಪಿಕ್ಚರ್ಸ್’ ವಿರುದ್ಧ ಧನುಷ್ ಅವರು ಕೇಸ್ ಹಾಕಿದ್ದರು. ಧನುಷ್ ಅವರು ನಿರ್ಮಾಣ ಮಾಡಿದ ‘ನಾನುಂ ರೌಡಿ ದಾನ್’ ಚಿತ್ರದ 3 ಸೆಕೆಂಡ್ ದೃಶ್ಯವನ್ನು ‘ನೆಟ್ಫ್ಲಿಕ್ಸ್’ ಡಾಕ್ಯುಮೆಂಟರಿ ‘ನಯನತಾರಾ: ಬಿಯಾಂಡ್ ದಿ ಫೇರೀಟೇಲ್’ನಲ್ಲಿ ಬಳಕೆ ಮಾಡಿದ್ದಾಗಿ ಆರೋಪಿಸಿದ್ದರು.

ಆದ ಕಾರಣ ‘ಒಪ್ಪಿಗೆ ಇಲ್ಲದೆ ಬಳಸಿದ ದೃಶ್ಯವನ್ನು 24 ಗಂಟೆಯಲ್ಲಿ ತೆಗೆಯದೇ ಇದ್ದರೆ ಕಾನೂನಾತ್ಮಕ ಹೋರಾಟ ಮಾಡಲಾಗುವುದು’ ಎಂದು ಧನುಷ್ ಎಚ್ಚರಿಸಿದ್ದರು. ಆದಾಗ್ಯೂ ದೃಶ್ಯವನ್ನು ತೆಗೆದಿರಲಿಲ್ಲ. ಹೀಗಾಗಿ, ಧನುಷ್ ಕಾನೂನಾತ್ಮಕ ಹೋರಾಟಕ್ಕೆ ಮುಂದಾಗಿದ್ದರು. ಧನುಷ್ ನಿರ್ಮಾಣ ಸಂಸ್ಥೆ ‘ವುಂಡಬಾರ್ ಫಿಲ್ಮ್ಸ್’ ನಷ್ಟ ಭರಿಸಬೇಕು ಎಂದು ಕೂಡ ಕೋರಿತ್ತು. ಈ ವಿಚಾರ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ನಟ ಧನುಷ್ ಹಾಗೂ ನಟಿ ನಯನತಾರಾ ವಿರುದ್ಧ ಕಿತ್ತಾಟಕ್ಕೂ ಇದು ಕಾರಣ ಆಗಿತ್ತು. ಈಗ ಈ ಅರ್ಜಿಯನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಆದಾಗ್ಯೂ ನಟಿ ನಯನತಾರಾ ‘ನಾನೂಮ್ ರೌಡಿ ದಾನ್’ ಸಿನಿಮಾದ ಹಾಡು, ವಿಡಿಯೋ ತುಣುಕು ಬಳಸಿಕೊಳ್ಳಲು ಎರಡು ವರ್ಷಗಳ ಹಿಂದೇ ಅನುಮತಿ ಕೋರಿದ್ದರು. ಆದರೆ, ಅದಕ್ಕೆ ಧನುಷ್ ಕಡೆಯಿಂದ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ಅದೇ ಸಿನಿಮಾದ ಶೂಟಿಂಗ್ ದೃಶ್ಯವನ್ನು ಬಳಸಿಕೊಂಡಿದ್ದರು. ಆದ ಕಾರಣ ಮೂರು ಸೆಕೆಂಡ್ ಬಳಸಿಕೊಂಡಿದ್ದಕ್ಕೆ 10 ಕೋಟಿ ರೂಪಾಯಿ ನೊಟೀಸ್ನ ಧನುಷ್ ಕಳುಹಿಸಿದ್ದರು. ಹಾಗಾಗಿ ನಟ ಧನುಷ್ ಪರ ಕೋರ್ಟು ತೀರ್ಪು ನೀಡಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು