ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ: ಸಿ.ಎಂ.

ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿಗಳನ್ನು ಶ್ಲಾಘಿಸಿರುವುದು, ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಕದ್ದಿರುವುದು ಈ ಕಾರಣಕ್ಕೇ: ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ವಿವರಣೆ
1949 ನವೆಂಬರ್ 25 ನೇ ತಾರೀಖಿನಂದು ಸಂವಿಧಾನ ಜಾರಿ ಸಭೆಯಲ್ಲಿ ಡಾ.ಬಿ.ಆರ್ .ಅಂಬೇಡ್ಕರ್ ರವರು ಮಾಡಿದ ಭಾಷಣವನ್ನು ನೀವು ಓದಬೇಕು. ನಾವು ವೈರುದ್ಯದ ಸಮಾಜಕ್ಕೆ ಪ್ರವೇಶಿಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಆರ್ಥಿಕ ಸಾಮಾಜಿಕ ಸಮಾನತೆ ಇಲ್ಲ. ದುರ್ಬಲವರ್ಗದವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವಿದಲ್ಲವೋ , ಅಲ್ಲಿಯವರೆಗೂ ಸಮಾನತೆ ಬರಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ನಾವು ಗ್ಯಾರಂಟಿಗಳ ಮೂಲಕ ಜನ ಸಾಮಾನ್ಯರ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದರಿಂದ ಆರ್ಥಿಕತೆಗೆ ಚೈತನ್ಯ ಬಂದು ರಾಜ್ಯಕ್ಕೆ ತೆರಿಗೆಯೂ ಹೆಚ್ಚುತ್ತದೆ. ಒಂದು ಅಧ್ಯಯನ ವರದಿಯಂತೆ ನಮ್ಮ ದೇಶದ 100 ಕೋಟಿ ದೇಶದ ಜನರಿಗೆ ಕೊಂಡುಕೊಳ್ಳುವ ಆಯ್ಕೆಯಿಲ್ಲ, ಶಕ್ತಿ ಇಲ್ಲ. ಮೊದಲ ವರ್ಗದಲ್ಲಿ 14 ಕೋಟಿ ಜನರಿದ್ದು, ಅವರ ಸರಾಸರಿ ವಾರ್ಷಿಕ ಆದಾಯ 15 ಸಾವಿರ ಡಾಲರ್ (13 ಲಕ್ಷ ರೂ.), 7 ಕೋಟಿ ಕುಟುಂಬಗಳ ತಲಾ ಆದಾಯ 3 ಸಾವಿರ ಡಾಲರ್ (2.62 ಲಕ್ಷ) 20.5 ಕೊಟಿ ಕುಟುಂಬಗಳ 100 ಕೋಟಿ ಜನರು ತಲಾ ಆದಾಯ 1 ಸಾವಿರ ಡಾಲರ್ (87 ಸಾವಿರ , ಅಂದರೆ ತಿಂಗಳಗೆ ಸುಮಾರು 7 ಸಾವಿರ), ಈ ವರ್ಗದವರಲ್ಲಿ ತಮ್ಮ ಅಗತ್ಯಗಳನ್ನು ಪೂರೈಸಲು ಹಣವಿರುವುದಿಲ್ಲ. 143 ಕೋಟಿ ಜನ ಮುಖ್ಯವಾಹಿನಿಗೆ ತರುವ ವ್ಯವಸ್ಥೆಯೇನು ? ಈ ದಿಸೆಯಲ್ಲಿ ಅಂತಹ ಜನರಿಗೆ ಆರ್ಥಿಕ ಸಾಮಾಜಿಕ ಸಮಾನತೆ ತರಲು ನಮ್ಮ ಸರ್ಕಾರ ಮಾಡಿರುವ ಪ್ರಮಾಣಿಕ ಪ್ರಯತ್ನ ಈ ಗ್ಯಾರಂಟಿಗಳು. United Nations ನ General Assembly ಅಧ್ಯಕ್ಷರಾದ ಕ್ಯಾಮರೂನ್ ದೇಶದ ಪಿಲೆಮಾನ್ ಯಾಂಗ್ ಅವರು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದ್ದಾರೆ. 05-03-2025 ರಂದು ಕೇರಳ ಸರ್ಕಾರದ ಅಧಿಕಾರಿಗಳ ತಂಡ ಹಾಗೂ ಇತರೆ ದಿನಾಂಕಗಳಲ್ಲಿ ಆಂಧ್ರಪ್ರದೇಶದ ಹಾಗೂ ಮಹಾರಾಷ್ಟ್ರದ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಅಧ್ಯಯನಕ್ಕೆ ರಾಜ್ಯಕ್ಕೆ ಆಗಮಿಸಿದ್ದರು. ಆ ತಂಡಗಳಿಗೆ ಗ್ಯಾರಂಟಿಗಳ ಬಗ್ಗೆ ವಿಸ್ತೃತವಾಗಿ ವಿವರಿಸಲಾಯಿತು. ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ Indian Institute of Pubic Administration ಸಂಸ್ಥೆಯ ಅಧ್ಯಕ್ಷರು , ಕೇಂದ್ರಸಚಿವರಾಗಿದ್ದಾರೆ. ಉಪರಾಷ್ಟ್ರಪತಿಗಳ ಜಗದೀಪ್ ಧನಕರ್ ಅವರು ಅಧ್ಯಕ್ಷರಾಗಿ , ರಾಜ್ಯದ ಗ್ಯಾರಂಟಿಗಳ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ವಿರೋಧಪಕ್ಷದವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಿದ್ದಾರೆ. ಸರ್ಕಾರದಲ್ಲಿ ಗ್ಯಾರಂಟಿಗಳಿಂದ ಸರ್ಕಾರದಲ್ಲಿ ದುಡ್ಡಿಲ್ಲ ಎಂದು ಹೇಳಿದ್ದಾರೆ. ಸರ್ಕಾರ ಫೆಬ್ರವರಿ ಅಂತ್ಯದಲ್ಲಿ 76509 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. 2024-25 ರಲ್ಲಿ 52009 ಕೋಟಿಗಳನ್ನು ಗ್ಯಾರಂಟಿಗಳಿಗೆ ಬಜೆಟ್ ನಲ್ಲಿ ಇಡಲಾಗಿದ್ದು, ಅದರಲ್ಲಿ 41560 ಕೋಟಿ ವೆಚ್ಚ ಮಾಡಲಾಗಿದೆ. ಅದರಲ್ಲಿ ಗೃಹ ಲಕ್ಷ್ಮಿ 28608 ಕೋಟಿ – ಖರ್ಚು 22611 ಕೋಟಿ , ಗೃಹಜ್ಯೋತಿ – 9657 ಕೋಟಿ –ಖರ್ಚು 8389 ಕೋಟಿ ,ಅನ್ನಭಾಗ್ಯ 8079 ಕೊಟಿ – ಖರ್ಚು 5590 ಕೋಟಿ ಶಕ್ತಿ ಯೋಜನೆಗೆ 5015 ಕೋಟಿಗಳಲ್ಲಿ -4821 ಕೋಟಿ , ಯುವನಿಧಿ 650 ಕೋಟಿ- ವೆಚ್ಚ 240 ಕೋಟಿ , ಒಟ್ಟು 52009 ರಲ್ಲಿ 41650 ಕೋಟಿ ವೆಚ್ಚ ಮಾಡಲಾಗಿದೆ. ಸರ್ಕಾರದಲ್ಲಿ ಹಣವಿಲ್ಲದಿದ್ದರೆ 1.26 ಕೋಟಿ ಕುಟುಂಬಗಳು ಗೃಹಲಕ್ಷ್ಮಿ ಅನ್ನಭಾಗ್ಯದ ಫಲಾನುಭವಿಗಳು , 1.60 ಕೋಟಿ ಕುಟುಂಬದ ಗೃಹಜ್ಯೋತಿಯಿಂದ ಲಾಭಪಡೆದಿದ್ದಾರೆ

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!