ನಿರ್ದೇಶಕ ಸಿಂಪಲ್ ಸುನಿ ಜೊತೆ ಸಿನಿಮಾ ಘೋಷಿಸಿದ ; ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್.

ಬಿಗ್ ಬಾಸ್ ಕನ್ನಡ ವಿನ್ನರ್ ಕಾರ್ತಿಕ್ ಮಹೇಶ್ ಅವರು ಸಿಂಪಲ್ ಸುನಿ ನಿರ್ದೇಶನದ ಹೊಸ ಚಿತ್ರ ‘ರಿಚಿ ರಿಚ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸುನಿ ಅವರೇ ಕಥೆ ಬರೆದಿರುವ ಈ ಚಿತ್ರದಲ್ಲಿ ಕಾರ್ತಿಕ್ ಶ್ರೀಮಂತನಾಗುವ ಕನಸು ಕಾಣುವ ರಿದ್ದೇಶ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಮೊದಲ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿದೆ

‘ಬಿಗ್ ಬಾಸ್ ಕನ್ನಡ ಸೀಸನ್ 10’ರ ವಿನ್ನರ್ ಕಾರ್ತಿಕ್ ಮಹೇಶ್ ಅವರು ಒಂದಾದ ಬಳಿಕ ಒಂದರಂತೆ ಸಿನಿಮಾ ಘೋಷಿಸುತ್ತಿದ್ದಾರೆ. ಈ ಮೊದಲು ಅವರು ‘ರಾಮರಸ’ ಹೆಸರಿನ ಚಿತ್ರ ಘೋಷಿಸಿದ್ದರು. ಈಗ ಕನ್ನಡದ ಖ್ಯಾತ ನಿರ್ದೇಶಕನ ಜೊತೆ ಕಾರ್ತಿಕ್ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಈ ಚಿತ್ರಕ್ಕೆ ‘ರಿಚಿ ರಿಚ್’ ಎನ್ನುವ ಟೈಟಲ್ ಇಡಲಾಗಿದೆ. ಈ ವಿಚಾರ ಫ್ಯಾನ್ಸ್ಗೆ ಖುಷಿ ನೀಡಿದೆ.
ಕನ್ನಡದಲ್ಲಿ ಹಲವು ಸದಭಿರುಚಿ ಸಿನಿಮಾಗಳನ್ನು ನೀಡಿದವರು ಸಿಂಪಲ್ ಸುನಿ. ಅವರ ನಿರ್ದೇಶನದ ಹಲವು ಚಿತ್ರಗಳು ಹಿಟ್ ಆಗಿವೆ. ಇಡೀ ಕುಟುಂಬ ಕುಳಿತು ನೋಡುವ ಚಿತ್ರಗಳನ್ನು ನಿರ್ದೇಶನ ಮಾಡುವುದರಲ್ಲಿ ಅವರು ಎತ್ತಿದ ಕೈ. ಅವರ ಜೊತೆ ಕಾರ್ತಿಕ್ ಮಹೇಶ್ ಕೈ ಜೋಡಿಸಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ‘ರಿಚಿ ರಿಚ್’ ಚಿತ್ರಕ್ಕೆ ಸುನಿ ಅವರೇ ಕಥೆ ಬರೆದಿದ್ದಾರೆ. ಈ ಚಿತ್ರಕ್ಕೆ ಅರವಿಂದ್ ವೆಂಕಟ್ ರೆಡ್ಡಿ ಬಂಡವಾಳ ಹೂಡುತ್ತಿದ್ದಾರೆ. ‘ಎವಿಆರ್ ಎಂಟರ್ಟೇನ್ಮೆಂಟ್’ ನಿರ್ಮಾಣ ಸಂಸ್ಥೆ ಆರಂಭಿಸಿರೋ ಅವರಿಗೆ ಇದು ನಿರ್ಮಾಣದಲ್ಲಿ ಮೊದಲ ಅನುಭವ.

‘ರಿಚಿ ರಿಚ್’ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಆಗಿದೆ. ಟೈಟಲ್ ಜೊತೆ ಕಾರ್ತಿಕ್ ಲುಕ್ ಕೂಡ ರಿವೀಲ್ ಆಗಿದೆ. ಅವರು ಚೆಸ್ ಆಡುತ್ತಿರುವ ರೀತಿಯಲ್ಲಿ ಪೋಸ್ಟರ್ ಇದೆ. ಸುನಿ ನಿರ್ಮಾಣದ ‘ಉಳಿದವರು ಕಂಡಂತೆ’ ಸಿನಿಮಾದಲ್ಲಿ ‘ರಿಚಿ’ ಹೆಸರಿನ ಪಾತ್ರ ಇತ್ತು. ಈ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು. ಈಗ ಅದೇ ಹೆಸರಿನಲ್ಲಿ ಸಿನಿಮಾದ ಟೈಟಲ್ ಆರಂಭ ಆಗಿದೆ.
ನವೆಂಬರ್​​ನಲ್ಲಿ ಸಿಎಂ ಬದಲಾವಣೆ ಆಗೋದು ಪಕ್ಕಾ?
ರಿದ್ದೇಶ್ ಚಿನ್ನಯ್ಯ ಅನ್ನೋದು ಕಥಾ ನಾಯಕನ ಹೆಸರು. ಇದನ್ನು ಶಾರ್ಟ್ ಆಗಿ ಆತ ರಿಚಿ ಎಂದು ಮಾಡಿಕೊಂಡಿದ್ದಾನೆ. ಇವನು ಶ್ರೀಮಂತ ಆಗುವುದು ಹೇಗೆಂದು ಕನಸು ಕಾಣುತ್ತಿದ್ದಾನೆ. ಆ ರೀತಿಯಲ್ಲಿ ಸಿನಿಮಾದ
ಈ ಚಿತ್ರದ ಬಗ್ಗೆ ಸದ್ಯಕ್ಕೆ ಇರೋ ಮಾಹಿತಿ ಇಷ್ಟೇ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಚಾರಗಳನ್ನು ತಂಡ ತೆರೆದಿಡಲಿದೆ. ಕಾರ್ತಿಕ್ ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

Related Posts

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!