ನೂತನ ವರ್ಷಕ್ಕೆ ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣೆ.

ನೂತನ ಕ್ರೈಸ್ತ ವರ್ಷಾರಂಭದ ಅಂಗವಾಗಿ ಜನವರಿ 01ರಂದು ಬೆಳಗ್ಗೆ 04.00 ಗಂಟೆಯಿಂದ ಪ್ರಾರಂಭಿಸಿ ಯೋಗಾನರಸಿಂಹಸ್ವಾಮಿಯವರಿಗೆ ವಿಶೇಷ ಅಲಂಕಾರ ಮತ್ತು “ಶ್ರೀರಂಗಂಕ್ಷೇತ್ರ” “ಮಧುರೈ ಕ್ಷೇತ್ರಗಳಿಂದ ತರಿಸಿರುವ ವಿಶೇಷ “ತೋಮಾಲೆ” ಮತ್ತು “ಸ್ವರ್ಣಪುಷ್ಪದಿಂದ ಶ್ರೀಸ್ವಾಮಿಗೆ “ಸಹಸ್ರನಾಮರ್ಚನೆ” ಮತ್ತು ದೇವಾಲಯದ ಉತ್ಸವ ಮೂರ್ತಿಯಾದ ಶ್ರೀಮಲಯಪ್ಪನ್ ಸ್ವಾಮಿ, ಪದ್ಮಾವತಿ ಮತ್ತು ಮಹಾಲಕ್ಷ್ಮಿ ದೇವರಿಗೆ ದೇವಾಲಯದ ಆವರಣದಲ್ಲಿ “ಏಕಾದಶ ಪ್ರಾಕಾರೋತ್ಸವ” ಹಾಗೂ ಇಪ್ಪತ್ತು ಕ್ವಿಂಟಾಲ್ ಪುಳಿಯೋಗರೆ ನಿವೇದನೆ” ಮತ್ತು ದೇವಾಲಯಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ “ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣಾ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ನಾಡೋಜ. ಪ್ರೊ. ಭಾಷ್ಯಂ ಸ್ವಾಮೀಜಿಯವರು ತಿಳಿಸಿದರು

ವಿಜಯನಗರದ ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಾರಂಭದಲ್ಲಿ 1994ನೇ ಇಸವಿಯಲ್ಲಿ ಅಂದಾಜು ಒಂದು ಸಾವಿರ ಲಡ್ಡು ವಿತರಣೆಯಿಂದ ಪ್ರಾರಂಭಿಸಿ ಕಳೆದ ಹಲವಾರು ವರ್ಷಗಳಿಂದ ಪ್ರತಿ ವರ್ಷ ಒಂದು ಲಕ್ಷ ಮತ್ತು ಎರಡು ಲಕ್ಷ ಲಡ್ಡುಪ್ರಸಾದವನ್ನು ಭಕ್ತಾದಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಈ ವರ್ಷವೂ ಸಹ ಇನ್ನೂ ಹೆಚ್ಚು ಅಂದರೆ ಎರಡು ಲಕ್ಷ ಲಡ್ಡುವನ್ನು ವಿತರಣೆ ಮಾಡಲು ದೇವಸ್ಥಾನದ ವತಿಯಿಂದ ತಯಾರಿ ನಡೆಯುತ್ತಿದೆ. ಈ ವರ್ಷ ಅಂದಾಜು (2,000)ಗ್ರಾಂ ತೂಕದ (15,000) ಲಡ್ಡುಗಳು ಹಾಗೂ (150)ಗ್ರಾಂ ತೂಕದ (2 ಲಕ್ಷ) ಲಡ್ಡುಗಳನ್ನು ದೇವಾಲಯಕ್ಕೆ ಬರುವ ಎಲ್ಲಾ ಭಕ್ತಾದಿಗಳಿಗೆ ಯಾವುದೇ ಜಾತಿ, ಮತ ಮತ್ತು ಭೇದವಿಲ್ಲದೆ ಉಚಿತವಾಗಿ ವಿತರಿಸಲಾಗುವುದು.
ಲಡ್ಡು ಪ್ರಸಾದವನ್ನು ವಿಶೇಷವಾಗಿ 60 ಮಂದಿ ನುರಿತ ಬಾಣಸಿಗರಿಂದ ತಯಾರಿಸಲಾಗಿದೆ,
ಡಾ.ರಾಜ್ ಕುಮಾರ್ ಪುತ್ರಿ ಲಕ್ಷ್ಮಿ , ಅಳಿಯ ಗೋವಿಂದರಾಜು ಅವರು ಸುದ್ದಿಗೋಷ್ಟಿಯಲ್ಲಿ ಪಾಲ್ಗೊಂಡು ಡಾ ‌ರಾಜ್ ಕುಮಾರ್ ಮತ್ತು ಪಾರ್ವತಮ್ಮ ರಾಜ್‍ಕುಮಾರ್ ಅವರಿಗೂ ಈ ದೇವಸ್ಥಾನಕ್ಕೂ ಬಾಂಧವ್ಯ ಹೇಗಿತ್ತು ಎನ್ನುವುದನ್ನು ಮೆಲುಕು ಹಾಕಿದರು
ನಂತರ ದೇವಾಲಯದ ಎನ್ ಶ್ರೀನಿವಾಸನ್‌ಅವರು ಮಾತನಾಡಿ
ಲೋಕ ಕಲ್ಯಾಣಾರ್ಥವಾಗಿ ಯಾವುದೇ ಜಾತಿ, ಮತಗಳ ಭೇದವಿಲ್ಲದೆ ಪ್ರಪಂಚದ ಎಲ್ಲೆಡೆ ಆಚರಿಸುವ ಕ್ರೈಸ್ತ ವರ್ಷಾರಂಭದ ಹಿನ್ನೆಲೆಯಲ್ಲಿ ವಿಶ್ವಶಾಂತಿ, ಭ್ರಾತೃತ್ವ ಮತ್ತು ಸರ್ವಧರ್ಮ ಸಮನ್ವಯತೆಗಾಗಿ ಮತ್ತು ನಾಡಿನ ಎಲ್ಲಾ ಜನರ ಒಳಿತಿಗಾಗಿ ಪ್ರಾರ್ಥಿಸಿ ಈ ಲಡ್ಡು ಪ್ರಸಾದ ನಿವೇದನೆ ಮತ್ತು ಭಕ್ತಾದಿಗಳಿಗೆ ವಿನಿಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಲೋಕಕಲ್ಯಾಣಾರ್ಥಕ್ಕೋಸ್ಕರ ಮತ್ತು ದೇಶದ ಎಲ್ಲಾ ಜನರ ಒಳಿತಿಗಾಗಿ, ಸಮಸ್ತ ಜನರಿಗೆ ಸುಖ ಶಾಂತಿ ನೆಮ್ಮದಿ ದೊರೆಯಲಿ ಎಂದು ಪ್ರಾರ್ಥಿಸುವ ಮತ್ತು ಎಲ್ಲಾ ಭಕ್ತಾದಿಗಳು ಒಂದೇ ಎಂದು ಸಾರುವ ಏಕೈಕ ದೃಷ್ಠಿಯಿಂದ ಈ ಎಲ್ಲಾ ಕಾರ್ಯಕ್ರಮಗಳು “ಪರಮ ಪೂಜ್ಯ ಪ್ರೊ. ಭಾಷ್ಯಂಸ್ವಾಮೀಜಿಯವರ” ದಿವ್ಯನೇತೃತ್ವದಲ್ಲಿ ವಿಶೇಷ ಪ್ರಾರ್ಥನೆಯಿಂದ ನೆರವೇರಲಿದೆ.
ಆಸ್ಥಿಕ ಭಕ್ತಾದಿಗಳು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಭಗವಂತನ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕು ಎಂದರು,

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!