ಪತ್ನಿಯ ಬಳಿ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ್ದೇಕೆ ಶಿವರಾಜ್ ಕುಮಾರ್?

ಪತ್ನಿಯ ಬಳಿ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ್ದೇಕೆ ಶಿವರಾಜ್ ಕುಮಾರ್?ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪಡೆದು ಭಾನುವಾರವಷ್ಟೇ ಬೆಂಗಳೂರಿಗೆ ಆಗಮಿಸಿರುವ ನಟ ಶಿವರಾಜ್ ಕುಮಾರ್ ಅವರನ್ನು ಗಣ್ಯರು ಸೆರಿದಂತೆ ಅನೇಕ ಸಿನಿ ಕಲಾವಿದರು ಭೇಟಿ ಕೊಟ್ಟಿದ್ದಾರೆ. ಇದೀಗ ಶಿವಣ್ಣ ಸಂದರ್ಶನವೊಂದರಲ್ಲಿ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ತ್ಯಾಗದ ಕುರಿತು ಭಾವುಕರಾಗಿದ್ದಾರೆ. ನಾನು ಕೆಲವೊಂದು ತಪ್ಪು ಮಾಡಿದ್ದೇನೆ. ಅವರ ಪ್ರೀತಿಗೆ ನಾನು ಫಿಟ್ ಆಗಿದ್ದೇನಾ ಗೊತ್ತಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.

ಸಂದರ್ಶನದಲ್ಲಿ ಶಿವಣ್ಣ ಮಾತನಾಡಿದರು. ಕ್ಯಾನ್ಸರ್ ಇರುವ ಬಗ್ಗೆ ಗೀತಾ ಅವರು ಶಿವಣ್ಣ ಅವರಿಂದ ಮುಚ್ಚಿಟ್ಟಿದ್ದರು. ಇದನ್ನು ಹೇಗೆ ಸ್ವೀಕರಿಸುತ್ತಾರೇನೋ ಎನ್ನುವ ಭಯ ಗೀತಾ ಅವರನ್ನು ಕಾಡಿತ್ತು ಅಂತೆ. ಕಿಮೋ ಥೆರಪಿ ಮಾಡಿಸಲೇಬೇಕಾದ ಅನಿವಾರ್ಯತೆ ಎದುರಾದಾಗ ಶಿವರಾಜ್ಕುಮಾರ್ಗೆ ಕ್ಯಾನ್ಸರ್ ಇರುವ ವಿಚಾರವನ್ನು ಹೇಳಲೇ ಬೇಕಾಯಿತು ಎಂದರು. ಇನ್ನು ಶಿವಣ್ಣ ಸಂದರ್ಶನವೊಂದರಲ್ಲಿ ಮಾತನಾಡಿದ್ದು ಹೀಗೆ, ಮನೆಯಲ್ಲಿ ನಂಗೆ ಎಲ್ಲರ ಸಫೊರ್ಟ್ ಸಿಕ್ಕಿತು. ನನ್ನ ಬಗ್ಗೆ ಎಲ್ಲರಿಗೂ ಒಂದು ಕನ್ಸರ್ನ್ ಇತ್ತು. ಇವತ್ತು ಇವರ ಸಪೋರ್ಟ್ ಇಲ್ಲ ಎಂದಿದ್ದರೆ ಕಷ್ಟ ಇತ್ತು. ನಂಗೆ ಗೀತಾ ಎಲ್ಲ ಸ್ಥಾನ ತುಂಬಿದಳು. ಗೀತಾ, ಪತ್ನಿಯಾಗಿ ಸಿಕ್ಕಿದ್ದು ನನ್ನ ಅದೃಷ್ಟ ಎಂದು ಶಿವಣ್ಣ ಹೇಳಿದ್ದಾರೆ. ನಮ್ಮಿಬ್ಬರ ಮಧ್ಯೆ ಏನೇ ಇರಬಹುದು ಆದರೆ, ನನ್ನನ್ನು ತನ್ನವನು ಎನ್ನುವಂತೆ ನೋಡಿದ್ದಾರೆ. ಅವರು ಹೆಂಡತಿಯಾಗಿ ಮಾತ್ರವಲ್ಲ ತಾಯಿಯಾಗಿ, ಗೆಳತಿಯಾಗಿ ನನ್ನನ್ನು ನೋಡಿದ್ದಾರೆ. ಅವರ ಪ್ರೀತಿಗೆ ನಾನು ಫಿಟ್ ಆಗಿದ್ದೇನಾ ಗೊತ್ತಿಲ್ಲ. ಸಾರಿ ಅಂತ ಆರಾಮಾಗಿ ನಾನು ಹೇಳಬಹುದು.ಆದರೆ ಆ ಬಗ್ಗೆ ಆಲೋಚನೆ ಮಾಡಿದಾಗ ಅರ್ಥ ಆಳವಾಗಿ ಹೋಗುತ್ತೆ ಎಂದು ಕಣ್ಣೀರಿಟ್ಟಿದ್ದಾರೆ. ಶಿವರಾಜ್ ಕುಮಾರ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಕಣ್ಣೀರಿಡದಂತೆ ಶಿವಣ್ಣನಿಗೆ ಧೈರ್ಯ ಹೇಳಿದ್ದಾರೆ.

ಅಮೆರಿಕಾದಲ್ಲಿ ಟ್ರೀಟ್ಮೆಂಟ್ ತೆಗೆದುಕೊಳ್ಳುವಾಗ ಶಿವಣ್ಣ ಅವರಿಗೆ ಸ್ಪೆಷಲ್ ವ್ಯಕ್ತಿಯೊಬ್ಬರು ಸಖತ್ ಕೇರ್ ಮಾಡಿದ್ದಾರೆ. ಅವರ ಬಗ್ಗೆ ಗೀತಾ ಅವರು ಗುಣಗಾನ ಮಾಡಿದ್ದಾರೆ. ಅದು ಬೇರೆ ಯಾರೂ ಅಲ್ಲ, ಶಾಸಕ ಭೀಮಣ್ಣ ನಾಯ್ಕ್. ಹೌದು ಗೀತಾ ಶಿವರಾಜ್ ಕುಮಾರ್ ಅವರ ಸೋದರ ಮಾವ ಭೀಮಣ್ಣ ನಾಯ್ಕ್. ಈಗ ಗೀತಾ ಶಿವರಾಜ್ಕುಮಾರ್ ಈ ಬಗ್ಗೆ ಪೋಸ್ಟ್ ಶೇರ್ ಮಾಡಿಕೊಂಡಿದ್ದಾರೆ. ಅಲ್ಲಿಯೂ ಸೈ ಇಲ್ಲಿಯೂ ಸೈ ನಿಮ್ಮೆಲ್ಲರ ಪ್ರೀತಿಯ ಭೀಮಣ್ಣ, ನನಗೆ ಭೀಮ್ ಮಾಮ. ಅಂದಿನಿಂದ ಇಲ್ಲಿಯವರೆಗೆ ಸ್ವಲ್ಪ ಕೂಡ ಬದಲಾಗದ ವ್ಯಕ್ತಿತ್ವ. ಮಾತು, ಕೋಪ ತುಂಬಾ ಕಡಿಮೆ, ಆದರೆ ಕೆಲಸ ಎಲ್ಲರಿಗಿಂತ ಜಾಸ್ತಿ. ಯಾವತ್ತು ಕಡಿಮೆ ಆಗದ ಪ್ರೀತಿ ವಿಶ್ವಾಸ. ಅವರಿಗೆ ಕುಟುಂಬದವರಾಗಲಿ, ಊರಿನ ಜನರಾಗಲಿ ಎಲ್ಲರು ಒಂದೇ.
ಮಾಮ ಅಮೆರಿಕಾದ ಮಿಯಾಮಿ ಅಲ್ಲಿ ಶಿವಣ್ಣ ಅವರ ಟ್ರೀಟ್ಮೆಂಟ್ ಸಮಯದಲ್ಲಿ ಎರಡು ವಾರ ನಮ್ಮ ಜೊತೆಗೆ ಇದ್ದರು. ನನ್ನ ಕೆಲಸಗಳಿಗೆ ಸಹಾಯ, ಶಿವಣ್ಣ ಜೊತೆಗೆ ವಾಕಿಂಗ್, ಕಾಫಿ, ಹಾಸ್ಪಿಟಲ್ ಭೇಟಿಗೆ ಜೊತೆಗೆ ಇರುತ್ತಿದ್ದರು. ನಮ್ಮ ಪ್ರೀತಿಯ ಭೀಮ್ ಮಾಮ, ನಿಮಗೆ ಶಾಸಕರು. ನಮ್ಮ ಕುಟುಂಬದ ಸುಖ ದುಃಖ ಎರಡರಲ್ಲೂ ಸದಾ ಜೊತೆಗೆ ನಿಂತವರು. ನಿಮ್ಮ ಶಾಸಕರಾಗಿ ಅವರು ಸದಾ ನಿಮ್ಮ ಜೊತೆಯಲ್ಲಿ ನಿಂತಿರಲಿ, ಹಾಗು ಅವರ ಮತ್ತು ನಿಮ್ಮ ಮುಗುಳ್ನಗೆ ಎಂದಿಗೂ ಮಾಸದಿರಲಿ ಎಂದು ಎಂದು ದೇವರಲ್ಲಿ ನಾನು ಹಾಗು ಶಿವ ರಾಜಕುಮಾರ್ ಅವರು ಕೇಳಿಕೊಳ್ಳುತೇವೆ. ಇಂತಿ, ಗೀತಾ ಶಿವರಾಜಕುಮಾರ್ ಹಾಗು ಶಿವರಾಜಕುಮಾರ್ ಎಂದು ಬರೆದುಕೊಂಡಿದ್ದರು.

ಸದ್ಯ ಶಿವಣ್ಣ ಆ್ಯಕ್ಟಿವ್ ಆಗಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದ ಈ ವಾರದ ಸಂಚಿಕೆಯಲ್ಲಿ ಶಿವಣ್ಣ ಹಾಗೂ ಗೀತಕ್ಕ ವಿಶೇಷ ಅತಿಥಿಗಳಾಗಿ ಸರ್ಪ್ರೈಸ್ ಎಂಟ್ರಿ ಕೊಟ್ಟಿದ್ದಾರೆ ಸ್ಪರ್ಧಿಗಳು, ತೀರ್ಪುಗಾರರು, ಜ್ಯೂರಿ ಮೆಂಬರ್ಸ್, ನಿರೂಪಕಿ ಅನುಶ್ರೀ ಹಾಗೂ ಇತರ ಅತಿಥಿಗಳು ಶಾಕ್ ಆಗಿದ್ದು, ಶಿವಣ್ಣನನ್ನು ನೋಡಿ ಭಾವುಕರಾಗಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!