ಪತ್ನಿಯ ಬಳಿ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ್ದೇಕೆ ಶಿವರಾಜ್ ಕುಮಾರ್?

ಪತ್ನಿಯ ಬಳಿ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ್ದೇಕೆ ಶಿವರಾಜ್ ಕುಮಾರ್?ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪಡೆದು ಭಾನುವಾರವಷ್ಟೇ ಬೆಂಗಳೂರಿಗೆ ಆಗಮಿಸಿರುವ ನಟ ಶಿವರಾಜ್ ಕುಮಾರ್ ಅವರನ್ನು ಗಣ್ಯರು ಸೆರಿದಂತೆ ಅನೇಕ ಸಿನಿ ಕಲಾವಿದರು ಭೇಟಿ ಕೊಟ್ಟಿದ್ದಾರೆ. ಇದೀಗ ಶಿವಣ್ಣ ಸಂದರ್ಶನವೊಂದರಲ್ಲಿ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ತ್ಯಾಗದ ಕುರಿತು ಭಾವುಕರಾಗಿದ್ದಾರೆ. ನಾನು ಕೆಲವೊಂದು ತಪ್ಪು ಮಾಡಿದ್ದೇನೆ. ಅವರ ಪ್ರೀತಿಗೆ ನಾನು ಫಿಟ್ ಆಗಿದ್ದೇನಾ ಗೊತ್ತಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.

ಸಂದರ್ಶನದಲ್ಲಿ ಶಿವಣ್ಣ ಮಾತನಾಡಿದರು. ಕ್ಯಾನ್ಸರ್ ಇರುವ ಬಗ್ಗೆ ಗೀತಾ ಅವರು ಶಿವಣ್ಣ ಅವರಿಂದ ಮುಚ್ಚಿಟ್ಟಿದ್ದರು. ಇದನ್ನು ಹೇಗೆ ಸ್ವೀಕರಿಸುತ್ತಾರೇನೋ ಎನ್ನುವ ಭಯ ಗೀತಾ ಅವರನ್ನು ಕಾಡಿತ್ತು ಅಂತೆ. ಕಿಮೋ ಥೆರಪಿ ಮಾಡಿಸಲೇಬೇಕಾದ ಅನಿವಾರ್ಯತೆ ಎದುರಾದಾಗ ಶಿವರಾಜ್ಕುಮಾರ್ಗೆ ಕ್ಯಾನ್ಸರ್ ಇರುವ ವಿಚಾರವನ್ನು ಹೇಳಲೇ ಬೇಕಾಯಿತು ಎಂದರು. ಇನ್ನು ಶಿವಣ್ಣ ಸಂದರ್ಶನವೊಂದರಲ್ಲಿ ಮಾತನಾಡಿದ್ದು ಹೀಗೆ, ಮನೆಯಲ್ಲಿ ನಂಗೆ ಎಲ್ಲರ ಸಫೊರ್ಟ್ ಸಿಕ್ಕಿತು. ನನ್ನ ಬಗ್ಗೆ ಎಲ್ಲರಿಗೂ ಒಂದು ಕನ್ಸರ್ನ್ ಇತ್ತು. ಇವತ್ತು ಇವರ ಸಪೋರ್ಟ್ ಇಲ್ಲ ಎಂದಿದ್ದರೆ ಕಷ್ಟ ಇತ್ತು. ನಂಗೆ ಗೀತಾ ಎಲ್ಲ ಸ್ಥಾನ ತುಂಬಿದಳು. ಗೀತಾ, ಪತ್ನಿಯಾಗಿ ಸಿಕ್ಕಿದ್ದು ನನ್ನ ಅದೃಷ್ಟ ಎಂದು ಶಿವಣ್ಣ ಹೇಳಿದ್ದಾರೆ. ನಮ್ಮಿಬ್ಬರ ಮಧ್ಯೆ ಏನೇ ಇರಬಹುದು ಆದರೆ, ನನ್ನನ್ನು ತನ್ನವನು ಎನ್ನುವಂತೆ ನೋಡಿದ್ದಾರೆ. ಅವರು ಹೆಂಡತಿಯಾಗಿ ಮಾತ್ರವಲ್ಲ ತಾಯಿಯಾಗಿ, ಗೆಳತಿಯಾಗಿ ನನ್ನನ್ನು ನೋಡಿದ್ದಾರೆ. ಅವರ ಪ್ರೀತಿಗೆ ನಾನು ಫಿಟ್ ಆಗಿದ್ದೇನಾ ಗೊತ್ತಿಲ್ಲ. ಸಾರಿ ಅಂತ ಆರಾಮಾಗಿ ನಾನು ಹೇಳಬಹುದು.ಆದರೆ ಆ ಬಗ್ಗೆ ಆಲೋಚನೆ ಮಾಡಿದಾಗ ಅರ್ಥ ಆಳವಾಗಿ ಹೋಗುತ್ತೆ ಎಂದು ಕಣ್ಣೀರಿಟ್ಟಿದ್ದಾರೆ. ಶಿವರಾಜ್ ಕುಮಾರ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಕಣ್ಣೀರಿಡದಂತೆ ಶಿವಣ್ಣನಿಗೆ ಧೈರ್ಯ ಹೇಳಿದ್ದಾರೆ.

ಅಮೆರಿಕಾದಲ್ಲಿ ಟ್ರೀಟ್ಮೆಂಟ್ ತೆಗೆದುಕೊಳ್ಳುವಾಗ ಶಿವಣ್ಣ ಅವರಿಗೆ ಸ್ಪೆಷಲ್ ವ್ಯಕ್ತಿಯೊಬ್ಬರು ಸಖತ್ ಕೇರ್ ಮಾಡಿದ್ದಾರೆ. ಅವರ ಬಗ್ಗೆ ಗೀತಾ ಅವರು ಗುಣಗಾನ ಮಾಡಿದ್ದಾರೆ. ಅದು ಬೇರೆ ಯಾರೂ ಅಲ್ಲ, ಶಾಸಕ ಭೀಮಣ್ಣ ನಾಯ್ಕ್. ಹೌದು ಗೀತಾ ಶಿವರಾಜ್ ಕುಮಾರ್ ಅವರ ಸೋದರ ಮಾವ ಭೀಮಣ್ಣ ನಾಯ್ಕ್. ಈಗ ಗೀತಾ ಶಿವರಾಜ್ಕುಮಾರ್ ಈ ಬಗ್ಗೆ ಪೋಸ್ಟ್ ಶೇರ್ ಮಾಡಿಕೊಂಡಿದ್ದಾರೆ. ಅಲ್ಲಿಯೂ ಸೈ ಇಲ್ಲಿಯೂ ಸೈ ನಿಮ್ಮೆಲ್ಲರ ಪ್ರೀತಿಯ ಭೀಮಣ್ಣ, ನನಗೆ ಭೀಮ್ ಮಾಮ. ಅಂದಿನಿಂದ ಇಲ್ಲಿಯವರೆಗೆ ಸ್ವಲ್ಪ ಕೂಡ ಬದಲಾಗದ ವ್ಯಕ್ತಿತ್ವ. ಮಾತು, ಕೋಪ ತುಂಬಾ ಕಡಿಮೆ, ಆದರೆ ಕೆಲಸ ಎಲ್ಲರಿಗಿಂತ ಜಾಸ್ತಿ. ಯಾವತ್ತು ಕಡಿಮೆ ಆಗದ ಪ್ರೀತಿ ವಿಶ್ವಾಸ. ಅವರಿಗೆ ಕುಟುಂಬದವರಾಗಲಿ, ಊರಿನ ಜನರಾಗಲಿ ಎಲ್ಲರು ಒಂದೇ.
ಮಾಮ ಅಮೆರಿಕಾದ ಮಿಯಾಮಿ ಅಲ್ಲಿ ಶಿವಣ್ಣ ಅವರ ಟ್ರೀಟ್ಮೆಂಟ್ ಸಮಯದಲ್ಲಿ ಎರಡು ವಾರ ನಮ್ಮ ಜೊತೆಗೆ ಇದ್ದರು. ನನ್ನ ಕೆಲಸಗಳಿಗೆ ಸಹಾಯ, ಶಿವಣ್ಣ ಜೊತೆಗೆ ವಾಕಿಂಗ್, ಕಾಫಿ, ಹಾಸ್ಪಿಟಲ್ ಭೇಟಿಗೆ ಜೊತೆಗೆ ಇರುತ್ತಿದ್ದರು. ನಮ್ಮ ಪ್ರೀತಿಯ ಭೀಮ್ ಮಾಮ, ನಿಮಗೆ ಶಾಸಕರು. ನಮ್ಮ ಕುಟುಂಬದ ಸುಖ ದುಃಖ ಎರಡರಲ್ಲೂ ಸದಾ ಜೊತೆಗೆ ನಿಂತವರು. ನಿಮ್ಮ ಶಾಸಕರಾಗಿ ಅವರು ಸದಾ ನಿಮ್ಮ ಜೊತೆಯಲ್ಲಿ ನಿಂತಿರಲಿ, ಹಾಗು ಅವರ ಮತ್ತು ನಿಮ್ಮ ಮುಗುಳ್ನಗೆ ಎಂದಿಗೂ ಮಾಸದಿರಲಿ ಎಂದು ಎಂದು ದೇವರಲ್ಲಿ ನಾನು ಹಾಗು ಶಿವ ರಾಜಕುಮಾರ್ ಅವರು ಕೇಳಿಕೊಳ್ಳುತೇವೆ. ಇಂತಿ, ಗೀತಾ ಶಿವರಾಜಕುಮಾರ್ ಹಾಗು ಶಿವರಾಜಕುಮಾರ್ ಎಂದು ಬರೆದುಕೊಂಡಿದ್ದರು.

ಸದ್ಯ ಶಿವಣ್ಣ ಆ್ಯಕ್ಟಿವ್ ಆಗಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದ ಈ ವಾರದ ಸಂಚಿಕೆಯಲ್ಲಿ ಶಿವಣ್ಣ ಹಾಗೂ ಗೀತಕ್ಕ ವಿಶೇಷ ಅತಿಥಿಗಳಾಗಿ ಸರ್ಪ್ರೈಸ್ ಎಂಟ್ರಿ ಕೊಟ್ಟಿದ್ದಾರೆ ಸ್ಪರ್ಧಿಗಳು, ತೀರ್ಪುಗಾರರು, ಜ್ಯೂರಿ ಮೆಂಬರ್ಸ್, ನಿರೂಪಕಿ ಅನುಶ್ರೀ ಹಾಗೂ ಇತರ ಅತಿಥಿಗಳು ಶಾಕ್ ಆಗಿದ್ದು, ಶಿವಣ್ಣನನ್ನು ನೋಡಿ ಭಾವುಕರಾಗಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!