ಪಾಕ್ ಸೂಪರ್ ಲೀಗ್ ತೊರೆದಿದ್ದ ಆಟಗಾರ ಐಪಿಎಲ್ ನಲ್ಲಿ ಶೂನ್ಯಕ್ಕೆ ಔಟ್..!

ಪಂಜಾಬ್ ಕಿಂಗ್ಸ್ ತಂಡ ಗ್ಲೆನ್ ಮ್ಯಾಕ್ಸ್‌ವೆಲ್ ಬದಲಿಗೆ ಮಿಚೆಲ್ ಓವನ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿತು. ಹೀಗೆ ಪಾಕಿಸ್ತಾನ ಸೂಪರ್ ಲೀಗ್ ನಿಂದ ಐಪಿಎಲ್ ಗೆ ಬಂದ ಮಿಚೆಲ್ ಓವನ್ ತಮ್ಮ ಚೊಚ್ಚಲ ಪಂದ್ಯದಲ್ಲಿ ಕೇವಲ 2 ಎಸೆತಗಳಲ್ಲಿ ಖಾತೆ ತೆರೆಯದೆ ಔಟ್ ಆದರು. ಬಿಗ್ ಬ್ಯಾಷ್ ಲೀಗ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಓವನ್ ಐಪಿಎಲ್ ನಲ್ಲಿ ನಿರಾಶೆ ಉಂಟುಮಾಡಿದರು.

ಐಪಿಎಲ್ 2025 ರ 59 ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ. ಪ್ಲೇ ಆಫ್ ದೃಷ್ಟಿಯಿಂದ ಈ ಪಂದ್ಯದ ಗೆಲುವು ಪಂಜಾಬ್ಗೆ ಬಹಳ ಮುಖ್ಯವಾಗಿದೆ. ಹೀಗಾಗಿ ಪಂಜಾಬ್ ತನ್ನ ತಂಡದಲ್ಲಿ ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿತ್ತು. ಅದರಂತೆ ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ಆಡುತ್ತಿದ್ದ ವಿದೇಶಿ ಆಟಗಾರನನ್ನು ದ್ವಿತೀಯಾರ್ಧದ ಐಪಿಎಲ್ ಆರಂಭಕ್ಕೂ ಮುನ್ನ ತನ್ನ ತಂಡಕ್ಕೆ ಸೇರಿಸಿಕೊಂಡಿತು. ವಾಸ್ತವವಾಗಿ ಪಂಜಾಬ್ ಕಿಂಗ್ಸ್ನ ಡ್ಯಾಶಿಂಗ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದಿಂದಾಗಿ ಐಪಿಎಲ್ 2025 ರಿಂದ ಹೊರಗುಳಿದಿದ್ದರು. ಹೀಗಾಗಿ ಪಿಎಸ್ಎಲ್ನಲ್ಲಿ ಆಡುತ್ತಿದ್ದ ಆಸ್ಟ್ರೇಲಿಯಾದ ಯುವ ಆಲ್‌ರೌಂಡರ್ ಮಿಚೆಲ್ ಓವನ್ ಅವರನ್ನು ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿತ್ತು. ಆದರೆ ಮಿಚೆಲ್ ಓವನ್ ತಮ್ಮ ಚೊಚ್ಚಲ ಐಪಿಎಲ್ ಪಂದ್ಯದಲ್ಲಿ ಕೇವಲ 2 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು.

ಅದರಂತೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದೊಂದಿಗೆ ಐಪಿಎಲ್‌ಗೆ ಪಾದಾರ್ಪಣೆ ಮಾಡುವ ಅವಕಾಶ ಪಡೆದ ಮಿಚೆಲ್ ಓವನ್ ಕೇವಲ 2 ಎಸೆತಗಳನ್ನು ಎದುರಿಸಿ ತಮ್ಮ ವಿಕೆಟ್ ಕಳೆದುಕೊಂಡರು. ಮಿಚೆಲ್ ಓವನ್ಗೆ ಖಾತೆ ತೆರೆಯಲು ಆಗಲಿಲ್ಲ. ಪಂಜಾಬ್ ಪರ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಪಡೆದಿದ್ದ ಮಿಚೆಲ್, ಕ್ವೆನಾ ಎಂಫಕಾ ಅವರ ಅದ್ಭುತ ಎಸೆತದಲ್ಲಿ ಸಂಜು ಸ್ಯಾಮ್ಸನ್‌ಗೆ ಕ್ಯಾಚ್ ನೀಡಿದರು. ಮಿಚೆಲ್ ಓವನ್ ಪಾಕಿಸ್ತಾನ ಸೂಪರ್ ಲೀಗ್ 2025 ರಲ್ಲಿ ಪೇಶಾವರ್ ಝಲ್ಮಿ ಪರ ಒಟ್ಟು 8 ಪಂದ್ಯಗಳನ್ನು ಆಡಿದ್ದು, ಕೇವಲ 102 ರನ್‌ಗಳನ್ನು ಮಾತ್ರ ಕಲೆಹಾಕಿದ್ದರು.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!