ಬಂದ್ ! ಬಂದ್ ! ಬಂದ್ ! ಮಾ.22 ರಂದು ಕರ್ನಾಟಕ ಬಂದ್

ವಿವಿಧೆಡೆ ಮುತ್ತಿಗೆ, ಗಡಿಗಳ ಬಂದ್ಗೆ ಮಾ.3ರಿಂದಲೇ ನಿರ್ಧಾರ..!
ಬೆಂಗಳೂರು – ಬೆಳಗಾವಿಯಲ್ಲಿ ಕನ್ನಡದ ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ, ಕನ್ನಡಿಗರ ಮೇಲೆ ಎಂಇಎಸ್ ಪುಂಡಾಟ, ಶಿವಸೇನೆ ನಾಯಕರು ಹಾಗೂ ಕಾರ್ಯಕರ್ತರು ಕರ್ನಾಟಕಕ್ಕೆ ಕಾಲಿಡದಂತೆ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಮಾ. 22ರಂದು ಕರ್ನಾಟಕ ಬಂದ್ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಮಾ.3 ರಿಂದಲೇ ರಾಜಭವನ ಮುತ್ತಿಗೆ, ಮಾ.7 ಬೆಳಗಾವಿ ಚಲೋ ಸೇರಿ ಹಂತ ಹಂತ ವಾಗಿ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಲಾಗುವುದು ಎಂದು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಶುಕ್ರ ವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಮಾಡಬೇಕು. ಶಿವಸೇನೆಗಡಿಪಾರು ಮಾಡ ಬೇಕು. ಸಂಭಾಜಿ ಪ್ರತಿಮೆ ತೆರವುಗೊಳಿ ಸಬೇಕು. ಕಂಡಕ್ಟರ್ ಮೇಲಿನ ಹಲ್ಲೆಗೆ ಉನ್ನತ ಮಟ್ಟದ ತನಿಖೆ ಯಾಗಬೇಕು. ವಾಟಾಳ್ ಕೊಪ್ಪಳ ಕಾರ್ಖಾನೆಗಳಿಂದ ಪರಿಸರ ಹಾಳಾಗುತ್ತಿದ್ದು, ಇದಕ್ಕೆ ತಡೆ ನೀಡಬೇಕು. ಪರ ಭಾಷೆಯವರು ತಮ್ಮದೇ ಭಾಷಾ ವ್ಯಾಮೋಹ ಹೊಂದಿದ್ದರೆ ನಮ್ಮ ರಾಜ್ಯ ದಿಂದ ಹೊರಗಡೆ
ಹೋಗಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿರುವುದನ್ನು ನಿಲ್ಲಿಸಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮೂಲೆಗುಂಪಾಗಿದ್ದು, ಇದಕ್ಕೆ ಶಕ್ತಿ ತುಂಬಬೇಕು ಎಂದು ಆಗ್ರಹಿಸಿ ಮಾ.22ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಕನ್ನಡ ಒಕ್ಕೂಟದಿಂದ ಹಂತ ಹಂತವಾಗಿ ಪ್ರತಿಭಟನೆ
ಮಾರ್ಚ್ 3 – ಬೆಳಿಗ್ಗೆ 11 ಗಂಟೆಗೆ ರಾಜಭವನ ಮುತ್ತಿಗೆ.
ಮಾರ್ಚ್ 7 – ರಂದು ಬೆಳಗಾವಿ ಚಲೋ.
ಮಾರ್ಚ್ 11 – ಅತ್ತಿಬೆಲೆ ತಮಿಳುನಾಡು ಗಡಿ ಬಂದ್.
ಮಾರ್ಚ್ 14 – ಮಂಡ್ಯ ಮೈಸೂರು, ರಾಮನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮಾರ್ಚ್ 16 – ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಬಂದ್.
ಮಾರ್ಚ್ 22 – ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಅಖಂಡ ಕರ್ನಾಟಕ ಬಂದ್
ಪೂಜಾ ಗಾಂಧಿ ಹಾಡಿಗೆ ಫ್ಯಾನ್ಸ್ ಫುಲ್ ಫಿದಾ..!
ಕರ್ನಾಟಕ ಬಂದ್ಗೆ ಕರೆ ನೀಡಿರುವುದಕ್ಕೆ ಯಾರೊಬ್ಬರೂ ನನ್ನನ್ನು ಕರೆದಿಲ್ಲ ಅಂತ ಮಾತನಾಡಬೇಡಿ. ನಾನು ಪ್ರವೀಣ್ ಶೆಟ್ಟಿ ಅವರನ್ನು ಕರೆದಿದ್ದೆ. ಆದರೆ ಪಾಪ ಅವರು ಎಲ್ಲಿ ಹೋಗಿದ್ದಾರೋ ಗೊತ್ತಿಲ್ಲ. ನಾನು ನಾರಾಯಣಗೌಡರಿಗೂ ಬಹಿರಂಗವಾಗಿ ಕರೆಯುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನಾವು ಕಳಕಳಿಯಿಂದ ಮನವಿ ಮಾಡುತ್ತೇನೆ. ಇದು ರಾಜಕೀಯವಲ್ಲ ಸಂಪೂರ್ಣ ಬೆಂಬಲ ನೀಡಬೇಕು. ರಾಮಲಿಂಗಾರೆಡ್ಡಿ ಅವರು ನಿಮ್ಮ ಇಲಾಖೆಯ ಎಲ್ಲ ಬಸ್ಸುಗಳನ್ನು ನಿಲ್ಲಿಸಿ ಬೆಂಬಲ ಸೂಚಿಸಬೇಕು. ಹೋಟೆಲ್ ಅವರು ಬಂದ್ ಮಾಡಿ ಬೆಂಬಲ ನೀಡಬೇಕು ಎಂದು ಆಗ್ರಹಿಸಿದರು.

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಇರುವ ಶಾಪಿಂಗ್ ಮಾಲ್ಗಳೆಲ್ಲ ಮುಚ್ಚುತ್ತಾರೆ ನಾವು ಮಾತನಾಡಿದ್ದೇವೆ. ಸರ್ಕಾರಿ ನೌಕರರರ ಸಂಘ ಗೌರವದಿಂದ ಹೇಳುತ್ತೇನೆ ಬೆಂಬಲ ನೀಡಿ. ಖಾಸಗಿ ಶಾಲೆ, ಸರ್ಕಾರಿ ಶಾಲೆ ರಜೆ ಘೋಷಣೆ ಮಾಡಿ. ಎಲ್ಲಾ ಐಟಿ ಕಂಪನಿಗಳು ಕೂಡ ರಜೆ ಕೊಡಬೇಕು. ಎಲ್ಲಾ ಅಂಗಡಿ- ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರ, ವ್ಯವಹಾರ ನಿಲ್ಲಿಸಬೇಕು. ಉಳಿದಂತೆ ಎಲ್ಲ ಜನಸಾಮಾನ್ಯರು ಇದಕ್ಕೆ ಬೆಂಬಲ ನೀಡಲಿದ್ದಾರೆ ಎಂದು ವಾಟಾಳ್ ನಾಗರಾಜ್ ಹೇಳಿದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!