ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್: ಕನ್ನಡ ಅದ್ಭುತ ಭಾಷೆ, ಕಲಿತು ಮಾತನಾಡಿ ಎಂದು ಹೇಳಿಕೆ ನೀಡಿದ್ದಾರೆ….

ಹೊರಗಿನವರು ಬೆಂಗಳೂರಿಗೆ, ಅದರಲ್ಲಿಯೂ ಕರ್ನಾಟಕಕ್ಕೆ ಬಂದರೆ ಕನ್ನಡ ಮಾತನಾಡುವುದಿಲ್ಲ. ಸ್ಥಳೀಯ ಭಾಷೆ ಕಲಿಯಲು ಮುಂದಾಗುತ್ತಿಲ್ಲ ಎಂಬ ಆರೋಪಗಳು ಸಾಮಾನ್ಯ. ಅಂಥದ್ದರಲ್ಲಿ ಇದೀಗ ಅಮೆರಿಕ ಮೂಲದ ಉದ್ಯಮಿ ಬರ್ಟ್ ಮುಲ್ಲರ್ ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸುವುದರ ಜೊತೆಗೆ, ಬೆಂಗಳೂರಿಗೆ ಬರುವವರೆಲ್ಲ ಕನ್ನಡ ಮಾತನಾಡಲು ಕಲಿಯಿರಿ ಎಂದು ಕರೆ ಕೊಟ್ಟಿರುವ ವಿಡಿಯೋ ಈಗ ವೈರಲ್ ಆಗ್ತಾ ಇದೆ.

‘ಬೆಂಗಳೂರು ಎಂಬುದು ಭಾರತದ ಅಮೆರಿಕ. ಕನ್ನಡ ಒಂದು ಅದ್ಭುತ ಭಾಷೆ. ಇಲ್ಲಿಗೆ ಬರುವವರೆಲ್ಲ ಕನ್ನಡ ಕಲಿತು ಮಾತನಾಡಲು ಯತ್ನಿಸಬೇಕು’. ಹೀಗೆ ಹೇಳಿದ್ದು ಕರ್ನಾಟಕದ ವ್ಯಕ್ತಿಯಲ್ಲ! ಬೆಂಗಳೂರಿನವರಂತೂ ಅಲ್ಲವೇ ಅಲ್ಲ! ಅಮೆರಿಕದ ಮೂಲದ ಉದ್ಯಮಿ, ಕ್ಯಾಲಿಫೋರ್ನಿಯಾ ಬುರೀಟೊ ಸಂಸ್ಥಾಪಕ ಬರ್ಟ್ ಮುಲ್ಲರ್ ಕನ್ನಡ ಕಲಿಯುವಂತೆ ಕರೆ ನೀಡಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ.13 ವರ್ಷ ವಯಸ್ಸಿನವರಿದ್ದಾಗ ಅಮೆರಿಕ ತೊರೆದು ಭಾರತಕ್ಕೆ ಬಂದು ಇಲ್ಲಿಯೇ ಅಧ್ಯಯನ ನಡೆಸಿ ದಕ್ಷಿಣ ಕ್ಯಾಲಿಫೋರ್ನಿಯಾ ಮಾದರಿಯ ಬುರೀಟೊ ರೆಸ್ಟೋರೆಂಟ್ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಹೊರಹೊಮ್ಮಿದ ಬರ್ಟ್ ಮುಲ್ಲರ್ ಸಂದರ್ಶನವೊಂದರಲ್ಲಿ ಕನ್ನಡದ ಬಗ್ಗೆ ಅಭಿಮಾನದ ಮಾತುಗಳನ್ನಾಡಿದ್ದಾರೆ.

ನಾವು ನಮ್ಮವರದ್ದಲ್ಲದ ಸ್ಥಳಕ್ಕೆ ಬಂದಾಗಲೆಲ್ಲಾ, ಆ ಸ್ಥಳದ ಸಂಸ್ಕೃತಿಯ ಬಗ್ಗೆ ಸ್ವಲ್ಪ ಕಲಿಯಲು ಪ್ರಯತ್ನಿಸಬೇಕು ಎಂದು ನಾನು ಭಾವಿಸುತ್ತೇನೆ. ನಾನು ಸ್ವಲ್ಪ ಸ್ವಲ್ಪ ಕನ್ನಡ ಭಾಷೆ ಮಾತನಾಡುತ್ತೇನೆ. ಕನ್ನಡ ಒಂದು ಅದ್ಭುತ ಭಾಷೆ. ಕರ್ನಾಟಕಕ್ಕೆ ಬರುವ ಎಲ್ಲರೂ ಕನ್ನಡ ಭಾಷೆ ಕಲಿಯಬೇಕು. ಮಾತನಾಡಬೇಕು ಎಂದು ಬರ್ಟ್ ಮುಲ್ಲರ್ ಹೇಳಿದ್ದಾರೆ.35 ವರ್ಷ ವಯಸ್ಸಿನ ಮುಲ್ಲರ್, 2010 ರಲ್ಲಿ ಅಧ್ಯಯನ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿದ್ದರು. ಅನೇಕ ಸ್ನೇಹಿತರು ಯುರೋಪ್ ಮತ್ತು ಸ್ಪೇನ್ನಲ್ಲಿ ಅವಕಾಶಗಳನ್ನು ಹುಡುಕುತ್ತಿದ್ದಾಗ, ಮುಲ್ಲರ್ ಬೆಂಗಳೂರಿನಲ್ಲಿ ಉಳಿಯುವ ನಿರ್ಧಾರ ಕೈಗೊಂಡಿದ್ದರು. ನಂತರ ಇಲ್ಲಿ ಕ್ಯಾಲಿಫೋರ್ನಿಯಾ ಬುರೀಟೊ ರೆಸ್ಟೋರೆಂಟ್ಗಳನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿಯಾದರು ಎಂದು ವರದಿಯೊಂದು ತಿಳಿಸಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!