ಬೆಂಗಳೂರಿನ ತನ್ನ ಸ್ನೇಹಿತೆಯೊಂದಿಗೆ ಸೇರಿ ಮುದ್ದಾಗಿ ಕನ್ನಡ ಪದ್ಯ ಹಾಡಿದ ರಷ್ಯಾದ ಹುಡುಗಿ.

ಕರ್ನಾಟಕದಲ್ಲಿದ್ದು ಕನ್ನಡ ಮಾತನಾಡದೇ ಇರುವವರ ಮಧ್ಯೆ ರಷ್ಯಾದ ಪುಟ್ಟ ಹುಡುಗಿ ಕನ್ನಡ ಪದ್ಯವನ್ನು ಲೀಲಾಜಾಲವಾಗಿ ಹೇಳಿ ಎಲ್ಲರ ಮೆಚ್ಚುಗೆ ಪಡೆದಿದ್ದಾಳೆ. ಕರ್ನಾಟಕದವರಿಗಿಂತ ವಿದೇಶಿಗರಿಗೆ ಕನ್ನಡದ ಮೇಲೆ ಹೆಚ್ಚು ಅಭಿಮಾನ ಇದೆ ಎಂಬುದು ಕೆಲವೊಂದು ವಿಡಿಯೋಗಳ ಮೂಲಕ ಸಾಬೀತು ಆಗುತ್ತಿದೆ. ಕನ್ನಡ ಅಭಿಮಾನಕ್ಕೆ ಹಾಗೂ ಭಾಷೆಯನ್ನು ಕಲಿಯಬೇಕು ಎಂಬ ಹಂಬಲ ವಿದೇಶಿಗರಿಗೆ ಇದೆ ಎಂಬುದನ್ನು ಈ ವಿಡಿಯೋ ಹೇಳುತ್ತದೆ. ಇದೀಗ ರಷ್ಯಾದ ಪುಟ್ಟ ಹುಡುಗಿ ಬೆಂಗಳೂರಿನ ತನ್ನ ಸ್ನೇಹಿತೆ ಜತೆ ಸೇರಿ ಮುದ್ದಾಗಿ ಕನ್ನಡದ ಕವಿತೆಯನ್ನು ಮುದ್ದಾಗಿ ಹಾಡಿದ್ದಾಳೆ. ಈ ಕುರಿತಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗ್ತಾ ಇದೆ.

ಭಾರತಕ್ಕೆ ಬಂದ ಅದೆಷ್ಟೋ ವಿದೇಶಿಗರು ಭಾರತದ ಸಂಸ್ಕೃತಿ, ಆಚಾರ ವಿಚಾರಗಳನ್ನು ಅನುಸರಿಸಿಕೊಂಡು ಹೋಗುವುದರ ಜತೆಗೆ ಭಾಷೆಗಳನ್ನು ಕಲಿಯುತ್ತಾರೆ. ಕರ್ನಾಟಕದಲ್ಲೂ ಇಂತಹ ಘಟನೆಗಳಿಗೆ ಸಂಬಂಧಪಟ್ಟ ವಿಡಿಯೋ ವೈರಲ್ ಆಗಿದೆ. ಕನ್ನಡ ಹಾಡುಗಳನ್ನು ಹಾಡುವುದು, ಕನ್ನಡ ಮಾತನಾಡುವುದು, ಅದನ್ನು ಕಲಿಯುವ ಆಸಕ್ತಿ ತೋರಿಸುವುದು ಹೀಗೆ ಅನೇಕ ವಿಚಾರಗಳು ವೈರಲ್ ಆಗುತ್ತಲೇ ಇರುತ್ತದೆ. ಇದೀಗ ವಿಡಿಯೋವೊಂದು ಭಾರೀ ವೈರಲ್ ಆಗಿದ್ದು, ಕನ್ನಡಿಗರ ಮನಸ್ಸು ಈ ವಿಡಿಯೋ ಗೆದ್ದಿದೆ.
ಬೆಂಗಳೂರಿನಲ್ಲಿ ರಷ್ಯಾದ ಹುಡುಗಿ ಹಾಗೂ ಆಕೆಯ ಭಾರತೀಯ ಸ್ನೇಹಿತ ಜತೆಗೆ ಸೈಕಲ್ ಓಡಿಸುತ್ತ, ಕನ್ನಡ ಕವಿತೆಯನ್ನು ಹಾಡಿದ್ದಾಳೆ. ಇದೀಗ ಕನ್ನಡಿಗರ ಹೃದಯಕ್ಕೆ ಮುಟ್ಟಿದೆ. ಈ ರಷ್ಯಾದ ಹುಡುಗಿಯ ತಾಯಿ ಇನ್‌ಸ್ಟಾಗ್ರಾಮ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದು ಕನ್ನಡ ಪದ್ಯಕ್ಕೆ ಮೀಸಲಾಗಿರದೇ, ಅವರ ಅಂತರ್-ಸಾಂಸ್ಕೃತಿಕ ಸ್ನೇಹ ಮತ್ತು ಭಾಷಾ ಬಾಂಧವ್ಯದ ಬಗ್ಗೆ ಹೇಳಿದೆ.

 

ಈ ವಿಡಿಯೋದಲ್ಲಿ ರಷ್ಯಾದ ಹುಡುಗಿಯ ತಾಯಿ ಹೇಳಿರುವಂತೆ, ಇವರಿಬ್ಬರೂ ಮೂರು ವರ್ಷಗಳಿಂದ ಸಹಪಾಠಿಗಳು ಮತ್ತು ಆಪ್ತ ಸ್ನೇಹಿತರಾಗಿದ್ದಾರೆ. ಸೈಕಲ್ನಲ್ಲಿ ಆಟವಾಡುತ್ತ, ಕನ್ನಡದ ಖ್ಯಾತ ಪದ್ಯ “ಬಣ್ಣದ ಹಕ್ಕಿ” ಎಂಬ ಹಾಡನ್ನು ಇಬ್ಬರು ಒಟ್ಟಿಗೆ ಹಾಡಿದ್ದಾರೆ. ಮಕ್ಕಳ ಕನ್ನಡ ಹಾಡನ್ನು ಕೇಳಿ ನಮಗೆ ಖುಷಿಯಾಗಿದೆ ಎಂದು ಈ ವಿಡಿಯೋದಲ್ಲಿ ಹೇಳಿದ್ದಾರೆ. ಈ ವಿಡಿಯೋದ ಜತೆಗೆ ಇನ್‌ಸ್ಟಾಗ್ರಾಮ್‌ನಲ್ಲಿ 2022ರಲ್ಲಿ ಹಂಚಿಕೊಂಡ ಫೋಟೋ ಕೂಡ ವೈರಲ್ ಆಗಿದೆ. ರಷ್ಯಾದ ಕುಟುಂಬ ಭಾರತಕ್ಕೆ ಸ್ಥಳಾಂತರಗೊಂಡಾಗಿನಿಂದ ಇವರಿಬ್ಬರ ಸ್ನೇಹ ಬೆಳೆದುಕೊಂಡಿದೆ ಎಂದು ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!