ಬೆಂಗಳೂರಿನ ರಿಕ್ಷಾ ಚಾಲಕನ ಮೇಲೆ ದರ್ಪ ತೋರಿದ ಹಿಂದಿ ಮಹಿಳೆ: ಬೆಂಗಳೂರಿನ ಆರ್ಥಿಕತೆ ನಡೆಯುವುದೇ ನಮ್ಮಿಂದ ಎಂಬ ಅಹಂಕಾರದ ಮಾತುಗಳನ್ನಾಡಿದ್ದಾಳೆ!!

ನಮ್ಮ ರಾಜ್ಯಕ್ಕೆ ಬಂದು ನೆಲೆಸಿರುವ ಉತ್ತರ ಭಾರತೀಯರು ಕನ್ನಡ ಮಾತಾಡಲ್ಲ, ಸೇರಿದಂತೆ ಇನ್ನಿತ್ತರ ವಿಚಾರದಲ್ಲಿ ಕನ್ನಡಿಗರ ಜೊತೆಯಲ್ಲಿ ಜಗಳಕ್ಕೆ ಇಳಿಯುವುದು ಹೊಸದೇನಲ್ಲ. ಈಗಾಗಲೇ ಇಂತಹ ಸಾಕಷ್ಟು ಘಟನೆಗಳು ನಡೆದಿದ್ದು, ಇದೀಗ ಹಿಂದಿ ಮಾತನಾಡುವ ಮಹಿಳೆಯೊಬ್ಬಳು ಆಟೋ ಬಾಡಿಗೆ ವಿಚಾರಕ್ಕೆ ಬೆಂಗಳೂರಿನ ಆಟೋ ಚಾಲಕನ ಜೊತೆಗೆ ಜಗಳಕ್ಕೆ ಇಳಿದಿದ್ದಾಳೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಈ ಮಹಿಳೆಯ ಅತಿರೇಕದ ವರ್ತನೆಗೆ ಬಳಕೆದಾರರು ಗರಂ ಆಗಿದ್ದು ಖಾರವಾಗಿಯೇ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.ವಿವಿಧ ರಾಜ್ಯದಿಂದ ಬಂದು ಕರ್ನಾಟಕ ದಲ್ಲಿ ನೆಲೆಸುವ ಉತ್ತರ ಭಾರತೀಯರು ಕನ್ನಡಿಗರ ಮೇಲೆ ದರ್ಪ ತೋರಿಸುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತಾರೆ. ಕಳೆದ ವಾರವಷ್ಟೇ ಬಿಹಾರ ಮೂಲದ ಮಹಿಳೆಯೊಬ್ಬರು ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಬಾರಿಸಿದ ಘಟನೆಯೂ ಮಾಸುವ ಮುನ್ನವೇ ಇದೀಗ ಮತ್ತೊಬ್ಬ ಹಿಂದಿ ಮಹಿಳೆಯೂ ಆಟೋ ಚಾಲಕನ ಜೊತೆಗೆ ಕಿರಿಕಿರಿ ಮಾಡಿಕೊಂಡಿದ್ದಾಳೆ.

ಹೌದು, ಬೆಂಗಳೂರಿನ ಆಟೋ ಚಾಲಕ ನ ಜೊತೆಗೆ ಆಟೋ ಚಾರ್ಜ್ ವಿಚಾರವಾಗಿ ಶುರುವಾದ ಜಗಳವು, ಕನ್ನಡದಲ್ಲಿ ಮಾತನಾಡು ಎನ್ನುವ ಹಂತಕ್ಕೆ ಹೋಗಿದೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾ ದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಮಹಿಳೆಯೊಬ್ಬರು ಆಟೋ ಚಾಲಕನ ಜೊತೆಗೆ ಆಟೋ ಬಾಡಿಗೆ ವಿಚಾರವಾಗಿ ಜಗಳ ಆಡುತ್ತಿರುವುದನ್ನು ಕಾಣಬಹುದು. ಆಟೋ ಹತ್ತುವ ಸಮಯದಲ್ಲಿ 296 ರೂ ತೋರಿಸುತ್ತಿತ್ತು, ಈಗ 390 ರೂ ಆಟೋ ಬಾಡಿಗೆ ಕೇಳ್ತಾ ಇದ್ದೀರಾ ಎಂದು ಪ್ರಶ್ನೆ ಮಾಡಿದ್ದಾಳೆ. ಈ ವೇಳೆಯಲ್ಲಿ ಆಟೋ ಅಪ್ಲಿಕೇಶನ್ ನಲ್ಲಿ ಎಷ್ಟು ತೋರಿಸುತ್ತಿದೆ ನೋಡಿ ಎಂದು ಆಟೋ ಚಾಲಕನು ತೋರಿಸಿದ್ದು, ಆದರೆ ಮಾತಿಗೆ ಮಾತು ಬೆಳೆದು ಈ ಜಗಳವು ಅತಿರೇಕಕ್ಕೆ ತಲುಪಿದೆ. ಆಟೋ ಚಾಲಕನು ಏನೇ ಹೇಳಿದ್ರೂ ಕೂಡ ಕ್ಯಾರೇ ಎನ್ನದೇ ಹಿಂದಿ ಮಹಿಳೆಯೂ ಮಾತನಾಡಿದ್ದಾಳೆ. ಈ ವೇಳೆಯಲ್ಲಿ ಕೋಪಗೊಂಡ ಆಟೋ ಚಾಲಕನು ಕನ್ನಡದಲ್ಲಿ ಮಾತನಾಡು ಎಂದಿದ್ದಾನೆ. ಹೀಗೆನ್ನುತ್ತಿದ್ದಂತೆ ಸಿಟ್ಟಿನಿಂದ ಮಹಿಳೆಯೂ ನಾವು ಬೆಂಗಳೂರಿನ ಆರ್ಥಿಕತೆಗೆ ಕೊಡುಗೆ ನೀಡುತ್ತಿದ್ದೇವೆ, ನಿನಗೇನಾದರೂ ಗೊತ್ತಿದೆಯಾ ಎಂದು ಪ್ರಶ್ನಿಸಿರುವುದನ್ನು ಕಾಣಬಹುದು.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು