ಬೆಂಗಳೂರಿನ ರಿಕ್ಷಾ ಚಾಲಕನ ಮೇಲೆ ದರ್ಪ ತೋರಿದ ಹಿಂದಿ ಮಹಿಳೆ: ಬೆಂಗಳೂರಿನ ಆರ್ಥಿಕತೆ ನಡೆಯುವುದೇ ನಮ್ಮಿಂದ ಎಂಬ ಅಹಂಕಾರದ ಮಾತುಗಳನ್ನಾಡಿದ್ದಾಳೆ!!

ನಮ್ಮ ರಾಜ್ಯಕ್ಕೆ ಬಂದು ನೆಲೆಸಿರುವ ಉತ್ತರ ಭಾರತೀಯರು ಕನ್ನಡ ಮಾತಾಡಲ್ಲ, ಸೇರಿದಂತೆ ಇನ್ನಿತ್ತರ ವಿಚಾರದಲ್ಲಿ ಕನ್ನಡಿಗರ ಜೊತೆಯಲ್ಲಿ ಜಗಳಕ್ಕೆ ಇಳಿಯುವುದು ಹೊಸದೇನಲ್ಲ. ಈಗಾಗಲೇ ಇಂತಹ ಸಾಕಷ್ಟು ಘಟನೆಗಳು ನಡೆದಿದ್ದು, ಇದೀಗ ಹಿಂದಿ ಮಾತನಾಡುವ ಮಹಿಳೆಯೊಬ್ಬಳು ಆಟೋ ಬಾಡಿಗೆ ವಿಚಾರಕ್ಕೆ ಬೆಂಗಳೂರಿನ ಆಟೋ ಚಾಲಕನ ಜೊತೆಗೆ ಜಗಳಕ್ಕೆ ಇಳಿದಿದ್ದಾಳೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಈ ಮಹಿಳೆಯ ಅತಿರೇಕದ ವರ್ತನೆಗೆ ಬಳಕೆದಾರರು ಗರಂ ಆಗಿದ್ದು ಖಾರವಾಗಿಯೇ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.ವಿವಿಧ ರಾಜ್ಯದಿಂದ ಬಂದು ಕರ್ನಾಟಕ ದಲ್ಲಿ ನೆಲೆಸುವ ಉತ್ತರ ಭಾರತೀಯರು ಕನ್ನಡಿಗರ ಮೇಲೆ ದರ್ಪ ತೋರಿಸುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತಾರೆ. ಕಳೆದ ವಾರವಷ್ಟೇ ಬಿಹಾರ ಮೂಲದ ಮಹಿಳೆಯೊಬ್ಬರು ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಬಾರಿಸಿದ ಘಟನೆಯೂ ಮಾಸುವ ಮುನ್ನವೇ ಇದೀಗ ಮತ್ತೊಬ್ಬ ಹಿಂದಿ ಮಹಿಳೆಯೂ ಆಟೋ ಚಾಲಕನ ಜೊತೆಗೆ ಕಿರಿಕಿರಿ ಮಾಡಿಕೊಂಡಿದ್ದಾಳೆ.

ಹೌದು, ಬೆಂಗಳೂರಿನ ಆಟೋ ಚಾಲಕ ನ ಜೊತೆಗೆ ಆಟೋ ಚಾರ್ಜ್ ವಿಚಾರವಾಗಿ ಶುರುವಾದ ಜಗಳವು, ಕನ್ನಡದಲ್ಲಿ ಮಾತನಾಡು ಎನ್ನುವ ಹಂತಕ್ಕೆ ಹೋಗಿದೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾ ದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಮಹಿಳೆಯೊಬ್ಬರು ಆಟೋ ಚಾಲಕನ ಜೊತೆಗೆ ಆಟೋ ಬಾಡಿಗೆ ವಿಚಾರವಾಗಿ ಜಗಳ ಆಡುತ್ತಿರುವುದನ್ನು ಕಾಣಬಹುದು. ಆಟೋ ಹತ್ತುವ ಸಮಯದಲ್ಲಿ 296 ರೂ ತೋರಿಸುತ್ತಿತ್ತು, ಈಗ 390 ರೂ ಆಟೋ ಬಾಡಿಗೆ ಕೇಳ್ತಾ ಇದ್ದೀರಾ ಎಂದು ಪ್ರಶ್ನೆ ಮಾಡಿದ್ದಾಳೆ. ಈ ವೇಳೆಯಲ್ಲಿ ಆಟೋ ಅಪ್ಲಿಕೇಶನ್ ನಲ್ಲಿ ಎಷ್ಟು ತೋರಿಸುತ್ತಿದೆ ನೋಡಿ ಎಂದು ಆಟೋ ಚಾಲಕನು ತೋರಿಸಿದ್ದು, ಆದರೆ ಮಾತಿಗೆ ಮಾತು ಬೆಳೆದು ಈ ಜಗಳವು ಅತಿರೇಕಕ್ಕೆ ತಲುಪಿದೆ. ಆಟೋ ಚಾಲಕನು ಏನೇ ಹೇಳಿದ್ರೂ ಕೂಡ ಕ್ಯಾರೇ ಎನ್ನದೇ ಹಿಂದಿ ಮಹಿಳೆಯೂ ಮಾತನಾಡಿದ್ದಾಳೆ. ಈ ವೇಳೆಯಲ್ಲಿ ಕೋಪಗೊಂಡ ಆಟೋ ಚಾಲಕನು ಕನ್ನಡದಲ್ಲಿ ಮಾತನಾಡು ಎಂದಿದ್ದಾನೆ. ಹೀಗೆನ್ನುತ್ತಿದ್ದಂತೆ ಸಿಟ್ಟಿನಿಂದ ಮಹಿಳೆಯೂ ನಾವು ಬೆಂಗಳೂರಿನ ಆರ್ಥಿಕತೆಗೆ ಕೊಡುಗೆ ನೀಡುತ್ತಿದ್ದೇವೆ, ನಿನಗೇನಾದರೂ ಗೊತ್ತಿದೆಯಾ ಎಂದು ಪ್ರಶ್ನಿಸಿರುವುದನ್ನು ಕಾಣಬಹುದು.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!