ಬೆಂಗಳೂರಿನಲ್ಲಿ ಸ್ನೇಹಿತರನ್ನು ಮಾಡಿಕೊಳ್ಳುವುದು ತುಂಬಾ ಕಷ್ಟವಂತೆ….

ಪ್ರವಾಸಕ್ಕೆಂದು ಬೆಂಗಳೂರಿಗೆ ಹೋದವರಿಗಿಂತ, ಕೆಲಸವನ್ನು ಅರಸಿ ಮನೆಯ ಕಷ್ಟವನ್ನು ನೀಗಲು ಹೊರಟವರೇ ಹೆಚ್ಚು. ಆದರೆ ಬೆಂಗಳೂರಿನಲ್ಲಿ ನಿವಾಸ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ ಎನ್ನುತ್ತಿದ್ದಾರೆ ಬೆಂಗಳೂರಿನಲ್ಲಿರುವ ನಿವಾಸಿಗಳು. ಉದ್ಯೋಗ ಅರಸಿಕೊಂಡು ಬೆಂಗಳೂರಿಗೆ ಬರುವ ಅದೆಷ್ಟೋ ಜನರಿಗೆ ಅಲ್ಲಿನ ವಾತಾವರಣ ಹೊಸತು, ಜನರು ಹೊಸಬರು. ಹೀಗಾಗಿ ಪ್ರಾರಂಭದ ದಿನಗಳಲ್ಲಿ ಹೊಸ ಜಾಗ ಹಾಗೂ ಜನರ ಜೊತೆಗೆ ಬೆರೆಯಲು ಕಷ್ಟ ಪಡುತ್ತಾರೆ. ಇದೀಗ ರೆಡ್ಡಿಟ್ ಬಳಕೆದಾರರೊಬ್ಬರು ತನ್ನ ಸ್ನೇಹಿತೆಯೂ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದು ಸ್ನೇಹಿತರಿಲ್ಲದೆ ಹೇಗೆ ಒಂಟಿತನವನ್ನು ಅನುಭವಿಸುತ್ತಿದ್ದಾಳೆ ಎಂದು ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ. ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ವಾಸ್ತವತೆಯನ್ನು ಒಪ್ಪಿಕೊಂಡಿದ್ದು ಕಾಮೆಂಟ್ ಗಳನ್ನು ಮಾಡಿದ್ದಾರೆ.

ಬದುಕು ನಿಂತ ನೀರಲ್ಲ, ಸದಾ ಹರಿಯುತ್ತಿರಬೇಕು ಎನ್ನುವ ಮಾತಿದೆ. ಹೀಗಾಗಿ ಅನಿವಾರ್ಯ ಕಾರಣಕ್ಕೆ ಬೆಂಗಳೂರಿನಂತಹ ಪಟ್ಟಣಕ್ಕೆ ಕೆಲಸ ಹುಡುಕಿಕೊಂಡು ಹೋಗುವವರೇ ಹೆಚ್ಚು. ಕೆಲವರಂತೂ ಈ ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಒದ್ದಾಡುವುದಿದೆ. ಜಂಜಾಟದ ಬದುಕಿನಲ್ಲಿ ಸ್ನೇಹ, ಪ್ರೀತಿ ಹಾಗೂ ಭಾವನೆಗಳ ಬಗ್ಗೆ ಜನ ತಲೆಕೆಡಿಸಿಕೊಳ್ಳುವುದೇ ಕಡಿಮೆ. ಆದರೆ ಬಳಕೆದಾರರು, ಬೆಂಗಳೂರಿಗೆ ಸ್ಥಳಾಂತರ ಗೊಂಡಿರುವ ತನ್ನ ಸ್ನೇಹಿತೆಯೊಬ್ಬಳು, ಸ್ನೇಹಿತರನ್ನು ಮಾಡಿಕೊಳ್ಳಲು ಎಷ್ಟು ಕಷ್ಟ ಪಡುತ್ತಿದ್ದಾಳೆ. ವಯಸ್ಕರಾದಾಗ ಸ್ನೇಹಿತರನ್ನು ಮಾಡಿಕೊಳ್ಳುವುದು ಎಷ್ಟು ಕಷ್ಟವಿದೆ ಎನ್ನುವ ಬಗೆಗಿನ ಪೋಸ್ಟ್ ವೊಂದನ್ನು ಹಂಚಿ ಕೊಂಡಿದ್ದಾರೆ.

ಸದಾ ಕೆಲಸದಲ್ಲಿ ಬ್ಯುಸಿಯಾಗಿದ್ದು, ಅದ್ಭುತ ಹಾಸ್ಯ ಪ್ರಜ್ಞೆಯನ್ನು ಹೊಂದಿರುವ ಜನರಲ್ಲಿ ಅವಳು ಕೂಡ ಒಬ್ಬಳು. ಆದರೆ ತನ್ನ ಭಾವನೆಗಳನ್ನು ಹೊರ ಹಾಕಿಕೊಳ್ಳದೇ ಒಂಟಿತನ ಅನುಭವಿಸುತ್ತ ಬೇಸೆತ್ತು ಹೋಗಿದ್ದಾಳೆ. ಅವಳು ಈ ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಒಂಟಿತನದಿಂದ ಮುಕ್ತವಾಗಲು ಮಹಿಳಾ ಸ್ನೇಹಿತರನ್ನು ಹೊಂದಲು ಹಾಗೂ ಸ್ನೇಹಿತರ ಗುಂಪಿನಲ್ಲಿ ತಾನು ಕೂಡ ಭಾಗಿಯಾಗಲು ಇಷ್ಟ ಪಡುತ್ತಾಳೆ. ಹಾಗಾಗಿ ನಾನು ನಿಮ್ಮ ಬಳಿ ಈ ಬಗ್ಗೆ ಕೇಳುತ್ತಿದ್ದು, ಬೆಂಗಳೂರಿನಲ್ಲಿ ನೀವು ಹೊಸ ಹೊಸ ಜನರನ್ನು ಮಹಿಳೆ ಯರು ಅಥವಾ ಪುರುಷರು ಹೇಗೆ ಭೇಟಿಯಾಗುತ್ತೀರಿ. ಸ್ನೇಹಿತರನ್ನು ಹೇಗೆ ಮಾಡಿಕೊಳ್ಳುತ್ತೀರಿ. ನಿಮ್ಮ ಬಳಿ ಯಾವುದೇ ಸಲಹೆಗಳಿದ್ದಲ್ಲಿ, ಸಮುದಾಯಗಳು, ಇವೆಂಟ್ ಗಳು, ಅಪ್ಲಿಕೇಶನ್ ಗಳು ಇದ್ದಲ್ಲಿ ಅದಲ್ಲೆವೂ ಸ್ವಾಗತಾರ್ಹವಾಗಿದೆ. ತನ್ನ ಸಮಯ ಹಾಗೂ ಭಾವನೆಗಳನ್ನು ಹಂಚಿಕೊಳ್ಳಲು ಯಾರು ಇಲ್ಲದೇ ಆಕೆ ಹೋರಾಡುವುದನ್ನು ನೋಡುವುದು ನಿಜಕ್ಕೂ ನನಗೆ ನೋವನ್ನುಂಟು ಮಾಡುತ್ತದೆ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು