ಭಾರತ ಹಾಗೂ ಉಳಿದ ತಂಡಗಳಿಗೆ ಚಾಂಪಿಯನ್ ಟ್ರೋಫಿಯಲ್ಲಿ ದೊರೆತ ಹಣವೆಷ್ಟು??

2025ರ ಚಾಂಪಿಯನ್ ಟ್ರೋಫಿಯನ್ನು ಭಾರತವು ತನ್ನದಾಗಿಸಿಕೊಂಡಿದೆ. ದುಬೈನಲ್ಲಿ ನಡೆದ 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಮೂರನೇ ಬಾರಿ ಟ್ರೋಫಿ ಗೆದ್ದಿದೆ. 60 ಕೋಟಿ ರೂಗಳ ಒಟ್ಟು ಬಹುಮಾನದ ಗಾತ್ರದಲ್ಲಿ ಚಾಂಪಿಯನ್ ಭಾರತಕ್ಕೆ 19.5 ಕೋಟಿ ರೂಪಾಯಿ ಬಹುಮಾನ ದೊರೆತಿದೆ. ಉಳಿದಂತೆ ಬೇರೆ ತಂಡಗಳಿಗೆ ಎಷ್ಟು ಹಣ ದೊರೆತಿದೆ ಎಂಬುದರ ವಿವರ ಇಲ್ಲಿದೆ.

ಚಾಂಪಿಯನ್ ಟ್ರೋಫಿಯ ಫೈನಲ್ಸ್ ನಲ್ಲಿ , ನ್ಯೂಜಿಲೆಂಡ್ ಹಾಗೂ ಭಾರತ ತಂಡಗಳು ಮುಖಾಮುಖಿಯಾಗಿದ್ದು, ಭಾರತವು ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದಲ್ಲದೆ, ಚಾಂಪಿಯನ್ಸ್ ಕೂಡ ಆಗಿದ್ದಾರೆ. ನಾಯಕ ರೋಹಿತ್ ಶರ್ಮ ಆಡಿದ ಮೌಲ್ಯಯುತ ಇನ್ನಿಂಗ್ಸ್ ಗಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿದೆ.
ಈ ಚಾಂಪಿಯನ್ ಟ್ರೋಫಿಯ ವಿಶೇಷ ಏನಪ್ಪಾ ಅಂದ್ರೆ, ಭಾರತ ಆಡಿದ ಯಾವುದೇ ಒಂದು ಪಂದ್ಯಾವಳಿಯನ್ನು ಸಹ ಸೋತಿಲ್ಲ. 2002 ಹಾಗೂ 2013ರಲ್ಲಿಯೂ ಇದೇ ರೀತಿಯಾಗಿ ಪಂದ್ಯವನ್ನ ಆಡಿ ಭಾರತ ಗೆದ್ದಿತ್ತು. ಮತ್ತೊಂದು ಮುಖ್ಯವಾದ ಅಂಶವೆಂದರೆ ಈ ಸಾಧನೆಯನ್ನು ಮಾಡಲು ಯಾವ ದೇಶಗಳಿಗೂ ಸಹ ಸಾಧ್ಯವಾಗಿಲ್ಲ. ಆದರೆ ಭಾರತ ಮೂರು ಬಾರಿ ಐಸಿಸಿ ಟ್ರೋಫಿಯನ್ನು ಗೆಲ್ಲುವುದರ ಮುಖಾಂತರ ಹೊಸ ಇತಿಹಾಸವನ್ನು ಸೃಷ್ಟಿಸಿದೆ.
ಕೇವಲ 9 ತಿಂಗಳುಗಳ ಅಂತರದಲ್ಲಿ ಎರಡನೇ ಐಸಿಸಿ ಟ್ರೋಫಿಯನ್ನು ತನ್ನ ಖಾತೆಗೆ ಹಾಕಿಕೊಂಡಿರುವ ರೋಹಿತ್ ಪಡೆಗೆ ಐಸಿಸಿಯಿಂದ ಭಾರಿ ಮೊತ್ತವನ್ನು ಬಹುಮಾನವನ್ನಾಗಿ ನೀಡಲಾಗಿದೆ. ಚಾಂಪಿಯನ್ ಆಗಿ ಹೊರಹೊಮ್ಮಿರುವ ಭಾರತ ತಂಡಕ್ಕ 2.4 ಮಿಲಿಯನ್ ಅಮೆರಿಕನ್ ಡಾಲರ್ ಅಂದರೆ ಸರಿಸುಮಾರು 19.5 ಕೋಟಿ ರೂ. ಬಹುಮಾನವಾಗಿ ಸಿಗಲಿದೆ. ಹಾಗೆಯೇ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಸೋತ ನ್ಯೂಜಿಲೆಂಡ್ ತಂಡಕ್ಕೆ $1.12 ಮಿಲಿಯನ್ ಅಂದರೆ ಸುಮಾರು 9.72 ಕೋಟಿ ರೂಗಳನ್ನು ಬಹುಮಾನವಾಗಿ ನೀಡಲಾಗುತ್ತದೆ. ಹಾಗೆಯೇ ಸೆಮಿಫೈನಲ್ನಲ್ಲಿ ಹೊರಬಿದ್ದ ಎರಡೂ ತಂಡಗಳಾದ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ 4.86 ಕೋಟಿ ರೂ ಹಣ ಸಿಗಲಿದೆ.

ಸುಮಾರು 60 ಕೋಟಿ ರೂಗಳು ಚಾಂಪಿಯನ್ಸ್ ಟ್ರೋಫಿಯ ಬಹುಮಾನದ ಗಾತ್ರವಾಗಿದ್ದು, ಚಾಂಪಿಯನ್, ರನ್ನರ್ ಅಪ್ ಹಾಗೂ ಸೆಮಿಫೈನಲ್ನಿಂದ ಹೊರಬಿದ್ದ ತಂಡಗಳನ್ನು ಹೊರತುಪಡಿಸಿ, ಗುಂಪು ಹಂತದಲ್ಲಿ ಪ್ರತಿ ಪಂದ್ಯದ ಗೆಲುವಿಗೆ 30 ಲಕ್ಷ ರೂ. ಬಹುಮಾನ ದೊರೆಯಲಿದೆ.ಟೂರ್ನಿಯಲ್ಲಿ ಐದು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸುಮಾರು 3 ಕೋಟಿ ರೂ. ಬಹುಮಾನ ಪಡೆದರೆ, ಏಳು ಮತ್ತು ಎಂಟನೇ ಸ್ಥಾನ ಪಡೆದ ತಂಡಗಳು ಸುಮಾರು 1.2 ಕೋಟಿ ರೂ ಮೊತ್ತವನ್ನು ಪಡೆಯಲಿದೆ. ಇದಲ್ಲದೆ, ಈ ಐಸಿಸಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಕ್ಕಾಗಿ ಎಲ್ಲಾ ಎಂಟು ತಂಡಗಳಿಗೆ ತಲಾ 1.08 ಕೋಟಿ ರೂ ಹಣ ಸಿಗಲಿದೆ. ಈ ರೀತಿಯಾಗಿ 60 ಕೋಟಿ ರೂಪಾಯಿಗಳನ್ನು ಭಾಗಿಸಿ, ಎಲ್ಲಾ ತಂಡಗಳಿಗೂ ಸೇರುವಂತೆ ಮಾಡಿದ್ದಾರೆ. ಟ್ರೋಫಿಯನ್ನು ಗೆದ್ದ ತಂಡ ಹಾಗೂ ರನ್ನರ್ ಅಪ್ ಆದ ತಂಡಗಳಿಗೆ ಇತರ ತಂಡಗಳಿಗೆ ಹೋಲಿಸಿದರೆ ಹೆಚ್ಚಿನ ಮೊತ್ತ ದೊರಕಿದೆ.

 

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!