ಭಾರತದಿಂದ ಬಾಂಗ್ಲಾದೇಶಕ್ಕೆ ಮತ್ತೆ 16,000 ಟನ್ ಅಕ್ಕಿ ಸಾಗಾಟ.

ಢಾಕಾ :- ಕಳೆದ ವರ್ಷದ ಆಗಸ್ಟ್ನಲ್ಲಿ ಶೇಖ್ ಹಸೀನಾ ಅವರನ್ನು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳಿಸಿದ ನಂತರ ಉಭಯ ದೇಶಗಳ ನಡುವೆ ಸಂಬಂಧ ಹದಗೆಟ್ಟಿದ್ದು, ಈ ನಡುವೆಯೂ ಭಾರತ ಬಾಂಗ್ಲಾದೇಶಕ್ಕೆ ಎರಡನೇ ಬಾರಿಗೆ ಇದೀಗ ಸಾವಿರಾರು ಟನ್ ಅಕ್ಕಿ ಕಳುಹಿಸಿಕೊಟ್ಟಿದೆ. ಅಪಾರ ಪ್ರಮಾಣದ ಅಕ್ಕಿ ಹೊತ್ತ ಎರಡು ಹಡಗುಗಳು ಶನಿವಾರ ಬಾಂಗ್ಲಾದ ಮೊಂಗ್ಲಾ ಬಂದರು ತಲುಪಿದವು.
“ಎರಡು ಬೃಹತ್ ಗಾತ್ರದ ಹಡಗುಗಳು 16,400 ಟನ್ ಅಕ್ಕಿ ಹೊತ್ತು ಇಲ್ಲಿನ ಬಂದರು ತಲುಪಿವೆ” ಎಂದು ಢಾಕಾ ಟ್ರಿಬ್ಯೂನ್ ದಿನಪತ್ರಿಕೆ ವರದಿ ಮಾಡಿದೆ.

ಒಪ್ಪಂದದ ಪ್ರಕಾರ, ಬಾಂಗ್ಲಾದೇಶ ಭಾರತದಿಂದ 300,000 ಟನ್ ಅಕ್ಕಿ ಪಡೆಯಲಿದೆ. ಮೊಂಗ್ಲಾ ಆಹಾರ ನಿಯಂತ್ರಕರ ಕಚೇರಿ ನೀಡಿದ ಮಾಹಿತಿಯಂತೆ, ಈ ಪೈಕಿ ಶೇ.40ರಷ್ಟು ಅಕ್ಕಿಯನ್ನು ಮೊಂಗ್ಲಾ ಬಂದರಿನಲ್ಲಿ ಇಳಿಸಲಾಗುತ್ತದೆ. ಪನಾಮಾ ಧ್ವಜ ಹೊಂದಿರುವ ಬಿಎಂಸಿ ಆಲ್ಫಾ ಹಡಗು ಒಡಿಶಾದ ಧರ್ಮಾ ಬಂದರಿನಿಂದ 7,700 ಟನ್ ಅಕ್ಕಿ ಹೊತ್ತು ಬಂದರೆ, ಥಾಯ್ಲೆಂಡ್ ಧ್ವಜ ಹೊಂದಿದ ಎಂವಿ ಸೀ ಫಾರೆಸ್ಟ್ ಹಡಗು ಕೊಲ್ಕತ್ತಾ ಬಂದರಿನಿಂದ 8,700 ಟನ್ ಅಕ್ಕಿ ಸಾಗಿಸಿತು.
ಮುಕ್ತ ಟೆಂಡರ್ ಆಮದಿನ ಪೈಕಿ ಮೊದಲ ಸಾಗಣೆಯನ್ನು ಜನವರಿ 20ರಂದು ಬಾಂಗ್ಲಾದೇಶಕ್ಕೆ ರವಾನಿಸಲಾಗಿತ್ತು. ವಿಯೆಟ್ನಾಂ ಧ್ವಜ ಹೊಂದಿದ ಎಂವಿ ಪುಥಾನ್-36 ಹಡಗು 5,700 ಟನ್ ಅಕ್ಕಿ ಸಾಗಿಸಿದೆ ಎಂದು ವರದಿ ಹೇಳಿದೆ.
ಕೆಲ ದಿನಗಳ ಹಿಂದೆ, ಗಡಿ ಭದ್ರತಾ ಪಡೆಯ ಡೆರೆಕ್ಟರ್ ಜನರಲ್ ಮಟ್ಟದ ಅಧಿಕಾರಿಗಳ ಸಭೆಯಲ್ಲಿ, ಗಡಿ ಭದ್ರತೆಯ ವಿಚಾರವಾಗಿ ಉಭಯ ದೇಶಗಳ ನಡುವೆ ಇರುವ ಕೆಲವು “ಅಸಮ” ಒಪ್ಪಂದಗಳನ್ನು ರದ್ದುಗೊಳಿಸಲು ತಾನು ಬಯಸುತ್ತಿರುವುದಾಗಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಭಾರತಕ್ಕೆ ತಿಳಿಸಿತ್ತು.
ಇನ್ನು, 2024ರ ಆಗಸ್ಟ್ನಲ್ಲಿ ಪ್ರಧಾನಿ ಶೇಕ್ ಹಸೀನಾ ದೇಶದಿಂದ ಪಲಾಯನಗೈದ ಬಳಿಕ ನೊಬೆಲ್ ಪ್ರಶಸ್ತಿ ಪುರಸ್ಕೃತ 84 ವರ್ಷದ ಮುಹಮ್ಮದ್ ಯೂನಸ್, ಬಾಂಗ್ಲಾದೇಶದ ಸರ್ಕಾರದ ಮುಖ್ಯ ಸಲಹೆಗಾರರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಬಾಂಗ್ಲಾದಲ್ಲಿ ದೇಶವ್ಯಾಪಿ ನಡೆದ ಭಾರೀ ಹಿಂಸಾತ್ಮಕ ಪ್ರತಿಭಟನೆಗಳು ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರವನ್ನು ಉರುಳಿಸಿದ್ದವು. ಇದರೊಂದಿಗೆ 16 ವರ್ಷಗಳ ಆಡಳಿತವೂ ಅಂತ್ಯಗೊಂಡಿತ್ತು. ಹಾಗಾಗಿ, ಕಳೆದ ಆಗಸ್ಟ್ 5ರಿಂದ 77 ವರ್ಷದ ಶೇಖ್ ಹಸೀನಾ ಭಾರತದಲ್ಲಿ ವಾಸಿಸುತ್ತಿದ್ದಾರೆ.

“ಮಾನವತೆಯ ವಿರುದ್ಧದ ಅಪರಾಧ, ನರಹತ್ಯೆ”ಗಳ ಆರೋಪ ಹೊರಿಸಿ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ಟ್ರಿಬ್ಯೂನಲ್, ಶೇಕ್ ಹಸೀನಾ ಹಾಗೂ ಅವರ ಸರ್ಕಾರದ ಕೆಲವು ಸಂಪುಟ ಸಚಿವರು, ಸಲಹೆಗಾರರು ಮತ್ತು ಸೇನೆ ಮತ್ತು ನಾಗರಿಕ ಸೇವೆಗಳ ಅಧಿಕಾರಿಗಳ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಢಾಕಾ, ನವದೆಹಲಿಗೆ ರಾಜತಾಂತ್ರಿಕ ಚಿಪ್ಪಣಿ ಕಳುಹಿಸಿ, ಹಸೀನಾರ ಗಡಿಪಾರಿಗೆ ಆಗ್ರಹಿಸಿತ್ತು.

Related Posts

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!