ಭಿಕ್ಷುಕಿಯ ಚೀಲದೊಳಗೆ 75000 ರೂ. ನಗದು ಪತ್ತೆ.

ಇಂದೋರ್: ಮಧ್ಯಪ್ರದೇಶದ ಎರಡನೇ ಅತಿದೊಡ್ಡ ನಗರ ಮತ್ತು ಆ ರಾಜ್ಯದ ವಾಣಿಜ್ಯ ರಾಜಧಾನಿಯಾದ ಇಂದೋರ್ ನಗರದಲ್ಲಿ ಜನವರಿ 1, 2025ರಿಂದ ಭಿಕ್ಷೆ ಬೇಡುವ ಭಿಕ್ಷುಕರಿಗೆ ಮತ್ತು ಭಿಕ್ಷೆ ನೀಡುವ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸುವುದು ಸೇರಿದಂತೆ ಇತರೆ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಇಂದೋರ್ ಜಿಲ್ಲಾಡಳಿತ ಪ್ರಕಟಿಸಿದೆ.

ಈ ನಡುವೆ ಇಂದೋರ್ನಲ್ಲಿ ಭಿಕ್ಷುಕಿಯೊಬ್ಬಳು ಪತ್ತೆಯಾಗಿದ್ದು, ಆಕೆಯನ್ನು ತನಿಖೆ ನಡೆಸಿದಾಗ, ಆಕೆಯ ಬಳಿ ಇದ್ದ ಹಣ ಕಂಡು ಅಧಿಕಾರಿಗಳು ಶಾಕ್ ಆಗಿದ್ದಾರೆ.
ಇಂದೋರ್ನ ಹೈಕೋರ್ಟಿನ ಅನತಿ ದೂರದಲ್ಲಿರುವ ಮಸೀದಿಯ ಹೊರಗೆ ಕುಳಿತು ಭಿಕ್ಷೆ ಬೇಡುತ್ತಿದ್ದ ಭಿಕ್ಷುಕಿಯೊಬ್ಬಳನ್ನು ವಶಕ್ಕೆ ಪಡೆಯಲಾಗಿದ್ದು,ಆಕೆಯ ಬಳಿ ಇದ್ದ ಪ್ಲಾಸ್ಟಿಕ್ ಚೀಲ ಪರಿಶೀಲಿಸಲಾಗಿದೆ. ಭಿಕ್ಷುಕಿಯ ಬ್ಯಾಗ್ನಲ್ಲಿ ಸುಮಾರು 30-40 ಪರ್ಸ್ಗಳು ಪತ್ತೆಯಾಗಿದ್ದು, ಅದರಲ್ಲಿ ಸುಮಾರು 75 ಸಾವಿರ ರೂ. ಇರುವುದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಭಿಕ್ಷುಕಿ ಮಸೀದಿಯ ಬಳಿ ಬಹಳ ಸಮಯದಿಂದ ಭಿಕ್ಷೆ ಬೇಡುತ್ತಿರುವುದು ತಿಳಿದುಬಂದಿದೆ. ನಂತರ ಆಕೆಯನ್ನು ಅಲ್ಲಿಂದ ಉಜ್ಜಯಿನಿಯ ಆಶ್ರಮಕ್ಕೆ ಸ್ಥಳಾಂತರಿಸಲಾಗಿದೆ.
ಮಹಿಳೆಯೊಂದಿಗೆ ಮತ್ತೊಬ್ಬ ಭಿಕ್ಷುಕನನ್ನೂ ವಶಕ್ಕೆ ಪಡೆದ ಸರ್ಕಾರಿ ತಂಡ ಆತನಿಂದ 20 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ತಾನು ಪ್ರತಿದಿನ ಬೇರೆ ಬೇರೆ ಪ್ರದೇಶದಿಂದ ಇಂದೋರ್ಗೆ ಭಿಕ್ಷೆ ಬೇಡಲು ಬರುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾನೆ. ಜನವರಿ 1ರ ನಂತರ ನಗರದಲ್ಲಿ ಯಾರೇ ಭಿಕ್ಷಾಟನೆ ಮಾಡುತ್ತಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!