ಭಿಕ್ಷುಕಿಯ ಚೀಲದೊಳಗೆ 75000 ರೂ. ನಗದು ಪತ್ತೆ.

ಇಂದೋರ್: ಮಧ್ಯಪ್ರದೇಶದ ಎರಡನೇ ಅತಿದೊಡ್ಡ ನಗರ ಮತ್ತು ಆ ರಾಜ್ಯದ ವಾಣಿಜ್ಯ ರಾಜಧಾನಿಯಾದ ಇಂದೋರ್ ನಗರದಲ್ಲಿ ಜನವರಿ 1, 2025ರಿಂದ ಭಿಕ್ಷೆ ಬೇಡುವ ಭಿಕ್ಷುಕರಿಗೆ ಮತ್ತು ಭಿಕ್ಷೆ ನೀಡುವ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸುವುದು ಸೇರಿದಂತೆ ಇತರೆ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಇಂದೋರ್ ಜಿಲ್ಲಾಡಳಿತ ಪ್ರಕಟಿಸಿದೆ.

ಈ ನಡುವೆ ಇಂದೋರ್ನಲ್ಲಿ ಭಿಕ್ಷುಕಿಯೊಬ್ಬಳು ಪತ್ತೆಯಾಗಿದ್ದು, ಆಕೆಯನ್ನು ತನಿಖೆ ನಡೆಸಿದಾಗ, ಆಕೆಯ ಬಳಿ ಇದ್ದ ಹಣ ಕಂಡು ಅಧಿಕಾರಿಗಳು ಶಾಕ್ ಆಗಿದ್ದಾರೆ.
ಇಂದೋರ್ನ ಹೈಕೋರ್ಟಿನ ಅನತಿ ದೂರದಲ್ಲಿರುವ ಮಸೀದಿಯ ಹೊರಗೆ ಕುಳಿತು ಭಿಕ್ಷೆ ಬೇಡುತ್ತಿದ್ದ ಭಿಕ್ಷುಕಿಯೊಬ್ಬಳನ್ನು ವಶಕ್ಕೆ ಪಡೆಯಲಾಗಿದ್ದು,ಆಕೆಯ ಬಳಿ ಇದ್ದ ಪ್ಲಾಸ್ಟಿಕ್ ಚೀಲ ಪರಿಶೀಲಿಸಲಾಗಿದೆ. ಭಿಕ್ಷುಕಿಯ ಬ್ಯಾಗ್ನಲ್ಲಿ ಸುಮಾರು 30-40 ಪರ್ಸ್ಗಳು ಪತ್ತೆಯಾಗಿದ್ದು, ಅದರಲ್ಲಿ ಸುಮಾರು 75 ಸಾವಿರ ರೂ. ಇರುವುದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಭಿಕ್ಷುಕಿ ಮಸೀದಿಯ ಬಳಿ ಬಹಳ ಸಮಯದಿಂದ ಭಿಕ್ಷೆ ಬೇಡುತ್ತಿರುವುದು ತಿಳಿದುಬಂದಿದೆ. ನಂತರ ಆಕೆಯನ್ನು ಅಲ್ಲಿಂದ ಉಜ್ಜಯಿನಿಯ ಆಶ್ರಮಕ್ಕೆ ಸ್ಥಳಾಂತರಿಸಲಾಗಿದೆ.
ಮಹಿಳೆಯೊಂದಿಗೆ ಮತ್ತೊಬ್ಬ ಭಿಕ್ಷುಕನನ್ನೂ ವಶಕ್ಕೆ ಪಡೆದ ಸರ್ಕಾರಿ ತಂಡ ಆತನಿಂದ 20 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ತಾನು ಪ್ರತಿದಿನ ಬೇರೆ ಬೇರೆ ಪ್ರದೇಶದಿಂದ ಇಂದೋರ್ಗೆ ಭಿಕ್ಷೆ ಬೇಡಲು ಬರುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾನೆ. ಜನವರಿ 1ರ ನಂತರ ನಗರದಲ್ಲಿ ಯಾರೇ ಭಿಕ್ಷಾಟನೆ ಮಾಡುತ್ತಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

  ಒಡಿಶಾದ ಪುರಿಯಲ್ಲಿ ಭವ್ಯ ಜಗನ್ನಾಥ ರಥಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರು ‘ಜಯ ಜಗನ್ನಾಥ’ ಘೋಷಗಳೊಂದಿಗೆ ಈ ಮಹಾ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಜಗನ್ನಾಥ ಸ್ವಾಮಿ, ಬಲಭದ್ರ ಮತ್ತು ಸುಭದ್ರಾ ದೇವಿ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಾರೆ. ಹೊಸ ರಥಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!